ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಕ್ಕಳಲ್ಲಿ ಉತ್ತಮ ಸಂಸ್ಕೃತಿ, ಸಂಸ್ಕಾರ ಬೆಳೆಸಲು ಶಿಕ್ಷಣ ಸಹಕಾರಿಯಾಗಿದೆ. ಹೀಗಾಗಿ ಎಲ್ಲ ಪೋಷಕರು, ಶಿಕ್ಷಕರು ಕಾಳಜಿ ವಹಿಸಬೇಕು. ಸೀಮಿತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಇತರೆ ಎಲ್ಲಾ ಸಮುದಾಯದ ಬಡ ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡುವ ಕೆಲಸ ಹೆಚ್ಚಾಗಬೇಕಿದೆ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಹೇಳಿದರು.
ಹೆಗ್ಗುಂಜೆ ರಾಜೀವ ಶೆಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಲಾಡಿ ವಾರ್ಷಿಕ ಪ್ರತಿಭಾ ಪುರಸ್ಕಾರ 2024- 25 ಮತ್ತು ಗಣಕಯಂತ್ರ ವಿಭಾಗ ಇದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚೋರಾಡಿ ಗ್ರಾಮ ಪಂ. ಅಧ್ಯಕ್ಷರಾದ ಅಶೋಕ್ ಶೆಟ್ಟಿ ಹಾಲಾಡಿ ಅವರು ವಹಿಸಿದ್ದರು.
ಈ ಸಂದರ್ಭದಲ್ಲಿ ಹಾಲಾಡಿ ಗ್ರಾಮ ಪಂಚಾಯಿತಿ ಸದಸ್ಯರಾದ ಜನಾರ್ದನ್ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಮಂಜುನಾಥ್ ಕಾಮತ್ ಹಾಲಾಡಿ, ನಿವೃತ್ತ ಬ್ಯಾಂಕ್ ಅಧಿಕಾರಿಗಳು ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಉದ್ಯಮಿಯಾದ ಗಣೇಶ್ ಕಿಣಿ ಬೆಳ್ವೆ, ಪ್ರಾಂಶುಪಾಲರಾದ ಬಾಲಕೃಷ್ಣ ಭಟ್.ಕೆ., ಹೆ,ರಾ,ಶೆ,ಸ,ಪ, ಪೂ,ಕಾ, ಹಾಲಾಡಿ , ಮುಖ್ಯೋಪಾಧ್ಯಯಿನಿಯಾದ ರೋಷನ್ ಬೀಬಿ, , ಹೆ,ರಾ,ಶೇ,ಸ, ಪ,ಪೂ,ಕಾ, ಪ್ರೌಢಶಾಲಾ ವಿಭಾಗ ಹಾಗೂ ವಿದ್ಯಾರ್ಥಿಗಳು ಅಧ್ಯಾಪಕ ವೃಂದದವರು, ಗ್ರಾಮಸ್ಥರು ಉಪಸ್ಥಿತರಿದ್ದರು.










