Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆದ್ಯತೆ ಮೇರೆಗೆ ಜನಸಾಮಾನ್ಯರ ಕೆಲಸ ಮಾಡಿಕೊಡಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ
    ಉಡುಪಿ ಜಿಲ್ಲೆ

    ಆದ್ಯತೆ ಮೇರೆಗೆ ಜನಸಾಮಾನ್ಯರ ಕೆಲಸ ಮಾಡಿಕೊಡಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

    Updated:02/12/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ತಮ್ಮ ಕೆಲಸ ಕಾರ್ಯಗಳನ್ನು ಅರಿಸಿ ಬಂದಾಗ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸಿ, ಚುರುಕುಗಾಗಿ ಕೆಲಸಗಳನ್ನು ಮಾಡಿಕೊಟ್ಟಲ್ಲಿ ಯಾವುದೇ ಸಮಸ್ಯೆಗಳು ಉಂಟಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು, ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಸ್ತುತ ಸಾಲಿನಲ್ಲಿ ವಾಡಿಕೆಗಿಂಡ ಶೇಕಡ 17 ರಷ್ಟು ಹೆಚ್ಚು ಮಳೆಯಾಗಿದೆ. ಹೆಚ್ಚಿನ ಮಳೆಯಿಂದಾಗಿ ಬೆಳೆಹಾನಿ, ಮೂಲಭೂತ ಸೌಕರ್ಯಗಳಾದ ರಸ್ತೆ, ಸರ್ಕಾರಿ ಕಟ್ಟಡಗಳು, ಸೇತುವೆ ಸೇರಿದಂತೆ ಮತ್ತಿತ್ತರ ಆಸ್ತಿ ಪಾಸ್ತಿಗಳಿಗೆ ಹಾನಿವುಂಟಾಗಿದೆ. ಈ ಸಂಬಂಧ ಈಗಾಗಲೇ ಬೆಳೆಹಾನಿ, ಮಾನವನಹಾನಿಗೆ ಸೇರಿದಂತೆ ಮತ್ತಿತರ ಹಾನಿಗಳಿಗೆ ಪರಿಹಾರವನ್ನು ನೀಡಲಾಗಿದೆ ಎಂದರು.

    ಮೂಲಭೂತ ಸೌಕರ್ಯಗಳ ಹಾನಿಗಳ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಕೃತಿ ವಿಕೋಪ ಅನುದಾನದ ಅಡಿಯಲ್ಲಿ ಕೈಗೊಳ್ಳಲಾಗಿದೆ. ಇದಕ್ಕೆ ಅನುದಾನದ ಕೊರತೆ ಇದೆ. ವಿಧಾನಸಭಾ ಅಧಿವೇಶನದ ಸಮಯದಲ್ಲಿ ಜಿಲ್ಲೆಯ ಶಾಸಕರೊಂದಿಗೆ ನಿಯೋಗವನ್ನು ಮುಖ್ಯಮಂತ್ರಿಗಳ ಬಳಿ ಹೋಗಿ ಅನುದಾನ ಜಿಲ್ಲೆಗೆ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

    ಪಶ್ಚಿಮ ವಾಹಿನಿ ಯೋಜನೆಯಡಿ ಕರಾವಳಿ ಭಾಗದಲ್ಲಿ ಪಶ್ಚಿಮಾಭಿಮುಖವಾಗಿ ನದಿಗಳ ಸಿಹಿ ನೀರು ಹರಿದು ಸಮುದ್ರ ಸೇರುತ್ತಿದ್ದು, ನೀರು ವ್ಯರ್ಥ ಆಗುತ್ತಿದೆ. ಇದನ್ನು ತಡೆಯಲು ಕಿಂಡಿ ಅಣೆಕಟ್ಟುಗಳನ್ನು ಕಳೆದ ನಾಲ್ಕೈದು ವರ್ಷಗಳಿಂದ 666 ನಿರ್ಮಾಣ ಮಾಡಲಾಗಿದೆ. ಸಾಮಾನ್ಯವಾಗಿ ನವೆಂಬರ್ ತಿಂಗಳಲ್ಲಿ ಕಿಂಡಿ ಅಣೆಕಟ್ಟುಗಳಿಗೆ ಹಲಗೆ ಅಳವಡಿಸುವ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿತ್ತು, ಈಗಾಗಲೇ ಶೇಡಕ 50 ಕ್ಕೂ ಹೆಚ್ಚು ಹಲಗೆ ಅಳವಡಿಸಲಾಗಿದ್ದು, ಬಾಕಿ ಉಳಿದಿರುವುದಕ್ಕೆ ಡಿಸೆಂಬರ್ 20 ರೊಳಗೆ ಅಳವಡಿಸಲು ಸೂಚನೆ ನೀಡಿದ ಅವರು, ದುರಸ್ತಿಗಾಗಿ ಅನುದಾನ ಸಹ ಬಿಡುಗಡೆ ಮಾಡಲಾಗಿದೆ. ಇವುಗಳನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು ಎಂದರು.

    ಕಿಂಡಿ ಅಣೆಕಟ್ಟು ನಿರ್ಮಾಣದಿಂದ ಅಂತರ್ಜಲ ವೃದ್ಧಿಯಾಗಿದೆ ಎಂಬುದರ ವೈಜ್ಞಾನಿಕ ವರದಿಯನ್ನು ನೀಡಲು ಸೂಚನೆ ನೀಡಿದ ಅವರು, ನಗರಾಭಿವೃದ್ಧಿ ಅನುದಾನದಲ್ಲಿ 15 ದಿನಗಳ ಒಳಗಾಗಿ ಕೆರೆಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ತಿಳಿಸಿದರು.

    Click here

    Click here

    Click here

    Call us

    Call us

    ಮೀನುಗಾರಿಕೆಗೆ ಅನುಕೂಲವಾಗುವ ಉದ್ದೇಶದಿಂದ ಹೆಜಮಾಡಿ ಮೀನುಗಾರಿಕೆ ಬಂದರಿನ ಅಭಿವೃದ್ಧಿ ಕಾಮಗಾರಿ ಶೇಕಡ 80 ರಷ್ಟು ಮುಕ್ತಾಯಗೊಂಡಿದ್ದು, ಬಾಕಿ ಕಾಮಗಾರಿಯನ್ನು ತ್ವರಿತವಾಗಿ ಮುಕ್ತಾಯಗೊಳಿಸಬೇಕು, ಹಂಗಾರಕಟ್ಟೆಯಲ್ಲಿ ಕೋಸ್ಟಲ್ ಬರ್ತ್ ಕಾಮಗಾರಿಗೆ  ಕರ್ನಾಟಕ ರಾಜ್ಯ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರ ಅನುಮೋದನೆ ದೊರಕಿದೆ. ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು ಎಂದ ಅವರು, ಗಂಗೊಳ್ಳಿಯ ಕೋಸ್ಟಲ್ ಬರ್ತ್ ಕಾಮಗಾರಿ ಕೈಗೊಳ್ಳಲು ಸಿಆರ್.ಝೆಡ್ ನ ನಿರಾಕ್ಷೇಪಣಾ ಪತ್ರ ಪಡೆದು ಕಾಮಗಾರಿ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

     ಕರಾವಳಿ ಭಾಗದ ಮೀನುಗಾರಿಕೆ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಮಳೆಯಿಂದ ಹಾನಿಯಾಗಿರುವ ರಸ್ತೆ ದುರಸ್ತಿ ಕಾಮಗಾರಿಗೆ ಅನುದಾನ ಕೋರಿ ಅಧಿವೇಶನದ ವೇಳೆ ಸಿಎಂ ಭೇಟಿ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.

    ಕಾಡುಗಳ ತಪ್ಪಲಲ್ಲಿ ವಾಸಿಸುವ ಮಲೆಕುಡಿಯ, ಕೊರಗ ಬುಡಕಟ್ಟು ಸಮುದಾಯದವರಿಗೆ ಸರ್ಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳೂ ಸೇರಿದಂತೆ ಗ್ಯಾರಂಟಿ ಯೋಜನೆಗಳನ್ನು ಮನೆ ಮನೆಗೆ  ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕು. ಕೆಲವರು ರೇಷನ್ ಕಾರ್ಡ್ ಹೊಂದಿಲ್ಲವೆAಬ ಕಾರಣದಿಂದ ಪಡಿತರ ಹಾಗೂ ಗ್ಯಾರಂಟಿ ಯೋಜನೆಗಳು ತಲುಪಿಲ್ಲ. ಅರ್ಹರಿರುವ ಪ್ರತಿಯೊಬ್ಬರಿಗೂ ಇವುಗಳನ್ನು ತಲುಪಿಸಲು ಖಡಕ್ ಸೂಚನೆ ನೀಡಿದರು.

    ಉಡುಪಿ ನಗರಕ್ಕೆ ಕುಡಿಯುವ ನೀರನ್ನು ಒದಗಿಸಲು ವರಾಹಿ ಯೋಜನೆಯ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಿದ ಅವರು, ವರಾಹಿ ನೀರಾವರಿ ಯೋಜನೆಗೆ 9 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯ ಪೂರ್ವನುಮತಿ ಈಗಾಗಲೇ ನೀಡಲಾಗಿದ್ದು, ಕೆಲವು ಕಾಮಗಾರಿನ್ನು ಕೈಗೊಳ್ಳಲಾಗಿದೆ.  ಬಾಕಿ ಇರುವ ಕಾಮಗಾರಿಗಳನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು. ಇದರಿಂದ 2700 ಹೆಕ್ಟೇರ್ ನೀರಾವರಿ ಪ್ರದೇಶಗಳಿಗೆ ಅನುಕೂಲವಾಗಲಿದೆ ಎಂದರು.

    ಬಡ ಜನರಿಗೆ 94 ಸಿ ಹಾಗೂ 53, 54 ನಲ್ಲಿ ಜಾಗ ಕೋರಿ ಸಲ್ಲಿಸಿದ ಅರ್ಜಿಗಳಲ್ಲಿ ಜಿಲ್ಲೆಯಲ್ಲಿ ಸಾವಿರಾರು ಅರ್ಜಿಗಳನ್ನು ಅನರ್ಹಗೊಳಿಸಲಾಗಿವೆ ಎಂಬ ದೂರುಗಳು ಕೇಳಿ ಬರುತ್ತಿವೆ. ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಲ್ಲಿ ಬರದೇ ಇರುವ ಪ್ರದೇಶದ ಜಾಗವನ್ನು ಸರ್ವೇ ಮಾಡಿ, ಸೂಕ್ತ ಭೂಮಿಯನ್ನು ಗುರುತಿಸಿ, ಅರ್ಹರಿಗೆ ಹಕ್ಕು ಪತ್ರಗಳನ್ನು ನೀಡುವಂತೆ ನೋಡಿಕೊಳ್ಳಬೇಕು. ಈಗಾಗಲೇ ತಾಲೂಕು ಮಟ್ಟದ ಸಮಿತಿಗಳು, ಆಯ್ಕೆ ಮಾಡಿರುವ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ಕೂಡಲೇ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದರು.

    ಜಿಲ್ಲೆಗೆ ಈಗಾಗಲೇ ಹೊಸದಾಗಿ ಎರಡು ಹಾಸ್ಟೆಲ್‌ಗಳು ಮಂಜೂರಾಗಿದೆ. ಪ್ರತೀ ತಾಲೂಕಿಗೂ ಹಾಸ್ಟೆಲ್‌ಗಳು ಬೇಕೆಂಬ ಬೇಡಿಕೆಯನ್ನು ಶಾಸಕರು ತಿಳಿಸಿದ್ದಾರೆ. ಹೊಸದಾಗಿ ಹೆಚ್ಚುವರಿ ಹಾಸ್ಟೆಲ್‌ಗಳನ್ನು ಜಿಲ್ಲೆಗೆ ತರಲು ಪ್ರಯತ್ನಿಸಲಾಗುವುದು ಎಂದರು.

    ಗ್ರಾಮೀಣ ಭಾಗಗಳಲ್ಲಿ ಕಳೆದ ಹಲವು ತಿಂಗಳಿನಿಂದ ತಾಂತ್ರಿಕ ಕಾರಣದಿಂದಾಗಿ ಘನತಾಜ್ಯ ವಿಲೇವಾರಿ ವೈಜ್ಞಾನಿಕ ರೀತಿಯಲ್ಲಿ ಆಗುತ್ತಿಲ್ಲ. ಇದನ್ನೂ ಕೂಡಲೇ ಬಗೆಹರಿಸಿ, ತ್ಯಾಜ್ಯ ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿಸಬೇಕೆಂದರು.

    ಜನ ಸಾಮಾನ್ಯರು ಮನೆಕಟ್ಟಲು ಪರವಾನಿಗೆ ಪಡೆಯಲು ತೊಂದರೆಯಾಗುತ್ತಿದೆ. ಇದನ್ನು ಆರ್‌ಡಿಪಿಆರ್, ಕಂದಾಯ, ನಗರಾಭಿವೃದ್ಧಿ ಇಲಾಖೆಗಳು ಸಮನ್ವಯದೊಂದಿಗೆ ಸಮಸ್ಯೆಗಳನ್ನು ಬಗೆಹರಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸೂಚಿಸಿದರು.

    ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಸೀಫುಡ್ ಪಾರ್ಕ್ ನಿರ್ಮಾಣ ಮಾಡಲು ಈಗಾಗಲೇ ಜಮೀನು ಮಂಜೂರಾಗಿದ್ದು, 69 ಏಕರೆ ವ್ಯಾಪ್ತಿಯಲ್ಲಿರುವ ಮರಗಳನ್ನು ತೆರವುಗೊಳಿಸುವ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳಬೇಕು. ಮರ ತೆರವುಗೊಳಿಸುವ ಸಂದರ್ಭದಲ್ಲಿ ಆದಷ್ಟು ಮರಗಳನ್ನು ಉಳಿಸಿಕೊಳ್ಳಲು ಪ್ರಯತ್ನಿಸಬೇಕು ಎಂದರು. 

    ಜಿಲ್ಲೆಯ ಜನ ಸಾಮಾನ್ಯರಿಗೆ ಮನೆಕಟ್ಟಲು ಸರಳವಾಗಿ ಮರಳು ಲಭ್ಯವಾಗುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದ ಸಚಿವರು, ಮನೆಕಟ್ಟಲು ಅಗತ್ಯವಿರುವ ಕೆಂಪು ಕಲ್ಲುಗಳ ಗಣಿಗಾರಿಕೆಗೆ ಅಧಿಕಾರಿಗಳು ಜಿಲ್ಲೆಯಲ್ಲಿ ತಡೆಹಿಡಿದಿರುವ ಹಿನ್ನೆಲೆಯಲ್ಲಿ ಸಮಸ್ಯೆ ಉಂಟಾಗಿದೆ. ಅಧಿಕಾರಿಗಳು ಕೆಂಪು ಕಲ್ಲುಗಳನ್ನು ತೆಗೆಯಲು ನಿಯಮಾನುಸಾರ ಅನುಮತಿ ನೀಡಬೇಕೆಂದು ಸೂಚಿಸಿದರು. ಸಭೆಯಲ್ಲಿ ಶಾಸಕರಾದ ಸುನೀಲ್ ಕುಮಾರ್.ವಿ, ಗುರ್ಮೆ ಸುರೇಶ್ ಶೆಟ್ಟಿ, ಯಶ್ ಪಾಲ್ ಎ ಸುವರ್ಣ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಡಿಎಫ್‌ಓ ಗಣಪತಿ, ವೈಲ್ಡ್ ಲೈಫ್ ಡಿಎಫ್‌ಓ ಶಿವರಾಮ ಎಂ ಬಾಬು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಕೆಡಿಪಿ ಸದಸ್ಯರು ಉಪಸ್ಥಿತರಿದ್ದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    06/12/2025

    ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್

    06/12/2025

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಚಾಂಪಿಯನ್‌ಶಿಪ್ ರೆಕಾರ್ಡ್ ಕ್ರಿಯೇಟ್‌ಗೈದ ಮಂಜುನಾಥ ಅವರಿಗೆ ಪ್ರಶಸ್ತಿ ಪ್ರದಾನ
    • ಕುಂದಾಪುರದ ರಚಿತಾಗೆ ಕರ್ನಾಟಕ 19 ವರ್ಷದೊಳಗಿನ ಮಹಿಳಾ ಏಕದಿನ ಕ್ರಿಕೆಟ್ ಟೂರ್ನಿ ನಾಯಕತ್ವ
    • ಕುಂದಾಪುರ: ಡಿ.15ರಿಂದ ಅಣಬೆ ಮತ್ತು ಜೇನು ಕೃಷಿ ತರಬೇತಿ
    • ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ವರ್ಷದ ಪರಿನಿರ್ವಾಣ ದಿನ
    • ಸ್ವಚ್ಛತೆ ಎಂಬುವುದು ಮನೆಮನಗಳನ್ನು ತಲುಪಲಿ: ಸಂಸದ ಕೋಟ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d