Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡ್ಯಾಂನಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು
    ಊರ್ಮನೆ ಸಮಾಚಾರ

    ಡ್ಯಾಂನಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು

    Updated:02/12/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ,ಡಿ.02:
    ಡ್ಯಾಂನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ವೆ ಸಮೀಪದ ಗುಮ್ಮೋಲ ಎಂಬಲ್ಲಿ ಭಾನುವಾರ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿಗಳಾದ ಶ್ರೀಶ ಆಚಾರ್ (14) ಹಾಗೂ ಜಯಂತ್ (20) ಎಂದು ಗುರುತಿಸಲಾಗಿದೆ.

    Click Here

    Call us

    Click Here

    ಬೆಳ್ವೆ ಸಮೀಪದ ಗೂಮ್ಮೋಲ ಚರ್ಚ್ ಹಿಂಭಾಗದಿಂದ ಕಜ್ಕೆ ಸಂತೆಕಟ್ಟೆ ಸಂಪರ್ಕ ರಸ್ತೆಯ ಬಳಿ ಇರುವ ಕಿಂಡಿ ಅಣೆಕಟ್ಟುವಿನ ಮೇಲ್ಭಾಗದಲ್ಲಿ ಶ್ರೀಶ ಆಚಾರ್, ಜಯಂತ್ ನಾಯ್ಕ್ ಸೇರಿದಂತೆ ನಾಲ್ಕು ಮಕ್ಕಳು ಈಜಲು ತೆರಳಿದ್ದರು ಎನ್ನಲಾಗಿದೆ. ಶ್ರೀಶ ನೀರಿನಲ್ಲಿ ಆಯ ತಪ್ಪುತ್ತಿದ್ದಂತೆ ರಕ್ಷಣೆಗೆ ಜಯಂತ್ ನೀರಿಗೆ ಧುಮುಕಿದ್ದು ಇಬ್ಬರು ನೀರು ಪಾಲಾಗಿದ್ದಾರೆ. ಶ್ರೀಶ ಹೆಬ್ರಿಯ ಎಸ್‌ಆರ್‌ಎಸ್ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿ

    ಸ್ಥಳದಲ್ಲಿದ್ದ ಇತರ ಮಕ್ಕಳು ಬೊಬ್ಬೆ ಹೊಡೆದಿದ್ದನ್ನು ಕೇಳಿ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ನೀರಿನಲ್ಲಿ ಮುಳುಗಿದ್ದ ಮಕ್ಕಳ ಹುಡುಕಲು ಮುಂದಾದರು. ತಕ್ಷಣ ಶಂಕರನಾರಾಯಣ ಪೊಲೀಸ್ ಠಾಣೆಗೂ ಮಾಹಿತಿ ನೀಡಲಾಯಿತು. ನೀರಿನಲ್ಲಿ ಮುಳುಗಿದ್ದ ಮಕ್ಕಳನ್ನು ಹುಡುಕಲು ಸ್ಥಳೀಯರು ಪೊಲೀಸರಿಗೆ ಸಹಕರಿಸಿದ್ದು, ಸ್ಥಳೀಯ ಈಜು ತಜ್ಞ ನಾಗರಾಜ್ ಅವರು ಕೆಲವೇ ಹೊತ್ತಿನಲ್ಲಿ ಎರಡು ಮೃತದೇಹಗಳು ಪತ್ತೆಮಾಡಿದರು. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನಲ್ಲಿ ವಿವೇಕಾನಂದ ಜಯಂತಿ

    14/01/2026

    ಕೋಟ: ಮಹಿಳಾ ಮಂಡಲದ 61ನೇ ವಾರ್ಷಿಕೋತ್ಸವ

    14/01/2026

    ಕಚ್ಚಾತೈಲ ಸಂಗ್ರಹಣಾ ಘಟಕದ ಕಾಮಗಾರಿ ಕೈಗೊಳ್ಳುವಾಗ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿ: ಜಿಲ್ಲಾಧಿಕಾರಿ

    14/01/2026
    Leave A Reply Cancel Reply

    4 × 5 =

    Call us

    Click Here

    Call us

    Call us

    Call us
    Highest Viewed Recently
    • ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನಲ್ಲಿ ವಿವೇಕಾನಂದ ಜಯಂತಿ
    • ಕೋಟ: ಮಹಿಳಾ ಮಂಡಲದ 61ನೇ ವಾರ್ಷಿಕೋತ್ಸವ
    • ಕಚ್ಚಾತೈಲ ಸಂಗ್ರಹಣಾ ಘಟಕದ ಕಾಮಗಾರಿ ಕೈಗೊಳ್ಳುವಾಗ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿ: ಜಿಲ್ಲಾಧಿಕಾರಿ
    • ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಂಐಟಿಕೆ ವಿದ್ಯಾರ್ಥಿನಿ ಗೀತಾಂಜಲಿ ಸಾಧನೆ
    • ಫುಲ್ ಮ್ಯಾರಥಾನ್ 42 ಕಿಲೋಮೀಟರ್ ಓಟ: ಎ.ಆರ್.ಎಸ್.ಐ ಶಂಕರ್ ಅವರಿಗೆ ಕಂಚು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.