Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗರ್ಭಿಣಿ ತಾಯಂದಿರ ಆರೋಗ್ಯ ತಪಾಸಣೆಯನ್ನು ಕಾಲಕಾಲಕ್ಕೆ ನಡೆಸಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಗರ್ಭಿಣಿ ತಾಯಂದಿರ ಆರೋಗ್ಯ ತಪಾಸಣೆಯನ್ನು ಕಾಲಕಾಲಕ್ಕೆ ನಡೆಸಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಗರ್ಭಿಣಿ ಮಹಿಳೆಯರಿಗೆ ಆರಂಭದಲ್ಲಿಯೇ ತಾಯಿ ಕಾರ್ಡ್ ಅನ್ನು ನೀಡುವುದರೊಂದಿಗೆ ಕಾಲಕಾಲಕ್ಕೆ ಅವರ ಆರೋಗ್ಯ ತಪಾಸಣೆ ನಡೆಸುವುದರ ಜೊತೆಗೆ ಪೌಷ್ಠಿಕ ಆಹಾರಗಳ ಸೇವನೆ ಸೇರಿದಂತೆ ಮತ್ತಿತರ ಮಾಹಿತಿಗಳನ್ನು ಅವರುಗಳಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಸೂಚನೆ ನೀಡಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ತಾಯಿ ಮರಣ ತನಿಖಾ ಸಮಿತಿ ಸಭೆ, ಜಿಲ್ಲಾ ಲಸಿಕಾ ಕಾರ್ಯಪಡೆ ಸಮಿತಿ ಸಭೆ ಹಾಗೂ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ತಾಯಿ ಮತ್ತು ಮಕ್ಕಳ ಮರಣವನ್ನು ತಡೆಗಟ್ಟಲು ಎಲ್ಲಾ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಬೇಕು. ಗರ್ಭಿಣಿ ಹಾಗೂ ಬಾಣಂತಿಯರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ, ಅವುಗಳ ಪ್ರಯೋಜನ ಪಡೆದುಕೊಳ್ಳುವಂತೆ ನೋಡಿಕೊಳ್ಳಬೇಕು. ಇವುಗಳ ಜೊತೆಗೆ ತಮ್ಮ ಮಗುವಿನ ಆರೈಕೆ ಕೈಗೊಳ್ಳುವ ಕುರಿತು ಮಾಹಿತಿಗಳನ್ನು ಒದಗಿಸಬೇಕು ಎಂದರು.

    ಬಾಲ ಸುರಕ್ಷತಾ ಕಾರ್ಯಕ್ರಮದಡಿ ಶಾಲೆಗಳಲ್ಲಿ ಹಾಗೂ ಅಂಗನವಾಡಿಗಳಲ್ಲಿ ಮಕ್ಕಳಿಗೆ ಆರೋಗ್ಯ ತಪಾಸಣೆ ನಡೆಸುವ ಸಂದರ್ಭದಲ್ಲಿ ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದ್ದಲ್ಲಿ ಅವರ ಪೋಷಕರುಗಳಿಗೆ ಈ ವಿಚಾರವನ್ನು ತಿಳಿಸುವುದರ ಜೊತೆಗೆ ಉಚಿತವಾಗಿ ಚಿಕಿತ್ಸೆ ಪಡೆಯಲು, ಸರಕಾರದ ಯೋಜನೆಗಳ ಮಾಹಿತಿಯನ್ನು ಅವರಿಗೆ ನೀಡುವುದರ ಜೊತೆಗೆ ಅಂತಹ ಮಕ್ಕಳು ಚಿಕಿತ್ಸೆ ಪಡೆದುಕೊಂಡ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು ಎಂದರು.

    ನವಜಾತ ಶಿಶುಗಳಿಗೆ ಕಾಲಕಾಲಕ್ಕೆ ನೀಡುವ ಸಾರ್ವತ್ರಿಕ ಲಸಿಕೆಗಳನ್ನು ಹಾಕಿಸಲು ತಾಯಂದಿರುಗಳಿಗೆ ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡಿ, ತಪ್ಪದೇ ಮಕ್ಕಳಿಗೆ ಸಂಪೂರ್ಣ ಲಸಿಕೆ ಪಡೆಯುವಂತೆ  ನೋಡಿಕೊಳ್ಳಬೇಕು ಎಂದ ಅವರು, 5 ವರ್ಷದ ವರೆಗಿನ ಮಕ್ಕಳಿಗೆ ಶೇ.87.24, 10 ವರ್ಷದ ವರೆಗಿನ ಮಕ್ಕಳಿಗೆ ಶೇ. 62.16 ಹಾಗೂ 16 ವರ್ಷದ ವರೆಗಿನ ಮಕ್ಕಳಿಗೆ ಶೇ. 55.43 ರಷ್ಟು ಲಸಿಕೆ ನೀಡಿದ್ದು, ಇದರ ಪ್ರಮಾಣ ಕಡಿಮೆ ಇದೆ. ಇವುಗಳನ್ನು ಪ್ರತಿಶತಃ ನೂರರಷ್ಟು ಸಾಧನೆ ಆಗಬೇಕು ಎಂದರು.

    Click here

    Click here

    Click here

    Call us

    Call us

    ಜಂತುಹುಳು ನಿವಾರಣಾ ದಿನಾಚರಣೆಯು ಡಿಸೆಂಬರ್ 9 ರಂದು ಜರುಗಲಿದ್ದು, ಮಾಫ್ ಅಫ್ ಡೇ ಯು ಡಿಸೆಂಬರ್ 16 ರಂದು ಜರುಗಲಿದೆ. ಜಿಲ್ಲೆಯ ಎಲ್ಲಾ 1 ರಿಂದ 19 ವರ್ಷದ ಮಕ್ಕಳಿಗೆ ಜಂತು ಹುಳು ನಿವಾರಣಾ ಮಾತ್ರೆಯನ್ನು ಅಂಗನವಾಡಿ, ಶಾಲೆ, ಕಾಲೇಜು ಹಾಗೂ ಕೈಗಾರಿಕಾ ತರಬೇತಿ ಹಾಗೂ ವೃತ್ತಿ ತರಬೇತಿ ಸಂಸ್ಥೆಗಳಲ್ಲಿ ನೀಡಲು ಸಂಬಂದಿಸಿದ ಎಲ್ಲಾ ಇಲಾಖೆಗಳು ಕ್ರಮ ವಹಿಸುವಂತೆ ತಿಳಿಸಿದರು.

    ಜಂತುಹುಳು ನಿವಾರಣಾ ಉಚಿತ ಮಾತ್ರೆ ವಿತರಣೆ ಯಶಸ್ವಿಗೊಳಿಸಲು ಆರೋಗ್ಯ ಇಲಾಖೆಯ ಜೊತೆಗೆ ಇತರೆ ಎಲ್ಲಾ ಇಲಾಖೆಯವರು ಕೈಜೋಡಿಸಿ, ಯಶಸ್ವಿಗೊಳಿಸಬೇಕು ಎಂದರು. 

    ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ ಗಡಾದ, ಜಿಲ್ಲಾ ಆರ್.ಸಿ. ಹೆಚ್ ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ, ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶ್ರೀರಾಮರಾವ್, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ಲತಾ ನಾಯಕ್, ಡಿ.ಎಸ್.ಓ ಡಾ. ನಾಗರತ್ನ, ವಿವಿಧ ಇಲಾಖೆಯ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    three − two =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.