Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಿ.16ರಿಂದ 3 ದಿನಗಳ ಕಾಲ ಸಂಚಲನ ಹೊಸೂರು ಆಶ್ರಯದಲ್ಲಿ ರಂಗ ಸಂಚಲನ -2024
    ಊರ್ಮನೆ ಸಮಾಚಾರ

    ಡಿ.16ರಿಂದ 3 ದಿನಗಳ ಕಾಲ ಸಂಚಲನ ಹೊಸೂರು ಆಶ್ರಯದಲ್ಲಿ ರಂಗ ಸಂಚಲನ -2024

    Updated:13/12/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಹೊಸೂರು ಸಂಚಲನ ಆಶ್ರಯದಲ್ಲಿ 3 ದಿನಗಳ ರಾಜ್ಯಮಟ್ಟದ ನಾಟಕೋತ್ಸವ, ವನಸಿರಿಯಲ್ಲೊಂದು ರಂಗ ಸುಗ್ಗಿ ರಂಗ ಸಂಚಲನ 2024 ಕಾರ್ಯಕ್ರಮವು  ಡಿ.16ರಿಂದ 18ರ ತೂದಳ್ಳಿ ಹೊಸೂರಿನ ಕೆ.ವಿ ಸುಬ್ಬಣ್ಣ ವನರಂಗದಲ್ಲಿ ಪ್ರತಿದಿನ ಸಂಜೆ 7-ಕ್ಕೆ ನಡೆಯಲಿದೆ ಎಂದು ಸಂಚಲನ ಹೊಸೂರು ಖಜಾಂಜಿ ನಾಗಪ್ಪ ಮರಾಠಿ ಹೇಳಿದರು.

    Click Here

    Call us

    Click Here

    ಅವರು ಬೈಂದೂರು ಪ್ರೆಸ್‍ ಕ್ಲಬ್‍ನಲ್ಲಿ ಶನಿವಾರ ನಡೆದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕಳೆದ 16 ವರ್ಷದಿಂದ ಪರಿಶಿಷ್ಠ ಪಂಗಡದ ಮರಾಠಿ ಕಲಾವಿದರ ರಂಗ ತಂಡವಾಗಿರುವ ಸಂಚಲನ ರಿ. ಹೊಸೂರು ಮೂಲಕ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಾಟಕೋತ್ಸವವನ್ನು ಆಯೋಜಿಸುತ್ತಾ ಬರಲಾಗುತ್ತಿದ್ದು ಈ ವರ್ಷವು 3 ದಿನಗಳ ಕಾಲ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

    ಡಿ.16ರಂದು ನಡೆಯುವ  ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ವಹಿಸಲಿದ್ದಾರೆ. ಗಂಗೊಳ್ಳಿ ಎಸ್.ವಿ ಕಾಲೇಜಿನ ಉಪನ್ಯಾಸಕರಾದ ಸುಜಯೀಂದ್ರ ಹಂದೆ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬೈಂದೂರು ವಲಯ ಮರಾಟಿ ಸಮಾಜ ಸುಧಾರಕರ ಸಂಘದ ಅಧ್ಯಕ್ಷರಾದ ಭೋಜ ನಾಯ್ಕ ಶುಭ ಶಂಸನೆ ಮಾಡಲಿದ್ದಾರೆ. ಅಂದು ನಾಟಿ ವೈದ್ಯರಾದ ಮಂಜ ಮರಾಠಿ ಗಂಗನಾಡು ಅವರಿಗೆ ಸನ್ಮಾನಿಸಲಾಗುತ್ತದೆ.

    ಡಿ.17ರಂದು ನಡೆಯುವ ಕಾರ್ಯಕ್ರಮದಲ್ಲಿ  ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೆ. ಬಾಬು ಶೆಟ್ಟಿ ಅವರು ಅಧ‍್ಯಕ್ಷತೆ ವಹಿಸಲಿದ್ದಾರೆ.ಅಂದು ಸಮಾಜಸೇವಕ ಲಿಜೋ ಇ.ಜೆ ಅಂಬಿಕಾನ್‍ ಅವರಿಗೆ ಸನ್ಮಾನಿಸಲಾಗುತ್ತದೆ

    ಡಿ.18ರಂದು ನಡೆಯುವ ಕಾರ್ಯಕ್ರಮದಲ್ಲಿ  ಬೈಂದೂರು ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಜಿ.ಪಂ ಮಾಜಿ ಅಧ್ಯಕ್ಷರಾದ ಎಸ್‍. ರಾಜು ಪೂಜಾರಿ ಸಮಾರೋಪ ನುಡಿಗಳಾನ್ನಾಡಲಿದ್ದಾರೆ.

    Click here

    Click here

    Click here

    Call us

    Call us

    ಅಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಮಹಾಲಿಂಗ ನಾಯ್ಕ್‌ ಅವರಿಗೆ ಸನ್ಮಾನಿಸಲಾಗುತ್ತದೆ.

    ಡಿ.16ರಂದು ಸಂಗಮ್‍ ಕಲಾವಿದೆರ್ ಮಣಿಪಾಲ್‍ ಇವರಿಂದ ಮೃತ್ಯಂಜಯ ನಾಟಕ ಪ್ರದರ್ಶನಗೊಳ್ಳಲಿದೆ. ಡಿ.17ರಂದು ಅರೆಹೊಳೆ ಪ್ರತಿಷ್ಠಾನ ಮಂಗಳೂರು ಇವರಿಂದ ಬಿಡುವನೇ ಬ್ರಹ್ಮಲಿಂಗ ನೃತ್ಯ ರೂಪಕ ಹಾಗೂ ಇತರ ನೃತ್ಯಗಳು ಪ್ರದರ್ಶನಗೊಳ್ಳಲಿದೆ. ಡಿ.18ರಂದು ಸುರಭಿ ರಿ. ಬೈಂದೂರು ಬಾಲಕಲಾವಿದರಿಂದ ಅಭಿಮನ್ಯು ಕಾಳಗ ಯಕ್ಷಗಾನ  ಪ್ರದರ್ಶನಗೊಳ್ಳಲಿದೆ.

    ಮಾಧ್ಯಮಗೋಷ್ಠಿಯಲ್ಲಿ ಅಧ್ಯಕ್ಷರಾದ ಮಹಾದೇವ ಮರಾಠಿ, ಉಪಾಧ್ಯಕ್ಷರುಗಳಾದ ನಾರಾಯಣ ಮರಾಠಿ, ದಯಾನಂದ ಮರಾಠಿ, ಕಾರ್ಯದರ್ಶಿ ರಾಜು ಮರಾಠಿ, ಸಂಸ್ಥೆಯ ಮಾರ್ಗದರ್ಶಕ ಸುಧಾಕರ್ ಪಿ. ಉಪಸ್ಥಿತರಿದ್ದರು.

    Like this:

    Like Loading...

    Related

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನೆಹರೂ ಮೈದಾನದ ನೆಲ ಬಾಡಿಗೆಗೆ ತಾಲ್ಲೂಕು ರೈತ ಸಂಘ ವಿರೋಧ: ಕೆ. ವಿಕಾಸ್ ಹೆಗ್ಡೆ

    10/12/2025

    ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಕಗೋತ್ಸವ ಕಾರ್ಯಕ್ರಮ

    10/12/2025

    ಮೂಡುಗಿಳಿಯರಿನ ಹೊನ್ನಾರಿ ಅಂಗನವಾಡಿ ಕೇಂದ್ರದಲ್ಲಿ ಅನ್ನಪ್ರಾಶನ

    10/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ನೆಹರೂ ಮೈದಾನದ ನೆಲ ಬಾಡಿಗೆಗೆ ತಾಲ್ಲೂಕು ರೈತ ಸಂಘ ವಿರೋಧ: ಕೆ. ವಿಕಾಸ್ ಹೆಗ್ಡೆ
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಕಗೋತ್ಸವ ಕಾರ್ಯಕ್ರಮ
    • ಮೂಡುಗಿಳಿಯರಿನ ಹೊನ್ನಾರಿ ಅಂಗನವಾಡಿ ಕೇಂದ್ರದಲ್ಲಿ ಅನ್ನಪ್ರಾಶನ
    • ಯುವ ಬರಹಗಾರರ ಚೊಚ್ಚಲ ಕೃತಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ
    • ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d