Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತಲ್ಲೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ತಾಮ್ರಪಟ ಶಾಸನ ಪತ್ತೆ
    ಊರ್ಮನೆ ಸಮಾಚಾರ

    ತಲ್ಲೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ತಾಮ್ರಪಟ ಶಾಸನ ಪತ್ತೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ತಲ್ಲೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿನ ತಾಮ್ರಪಟ ಶಾಸನವು, 46 ಸೆ.ಮೀ. ಉದ್ದ, 33 ಸೆ.ಮೀ. ಅಗಲ ಮತ್ತು 3 ಮಿ.ಮೀ. ದಪ್ಪವಿರುವ ಏಕೈಕ ತಾಮ್ರದ ಹಾಳೆಯಾಗಿದೆ. ಆಯತಾಕಾರದ ಈ ತಾಮ್ರಪಟದ ಎರಡೂ ಬದಿ ಕನ್ನಡ ಲಿಪಿ ಮತ್ತು ಭಾಷೆಯಲ್ಲಿ ಕಂಡರಿಸಿದ ಬರವಣಿಗೆಯಿದೆ. ಶಾಸನದ ಮುಮ್ಮುಖದಲ್ಲಿ ಹದಿನೇಳು ಸಾಲಿನ ಬರವಣಿಗೆ ಇದೆ, ಹಿಮ್ಮುಖದಲ್ಲಿ ಹದಿಮೂರು ಸಾಲುಗಳ ಬರಹವಿದೆ.

    Click Here

    Call us

    Click Here

    ಶಾಸನವು ಶೈವಸ್ತುತಿಯೊಂದಿಗೆ ಆರಂಭವಾಗಿದ್ದು, ನಂತರ ಶಾಲಿವಾಹನ ಶಕ ವರುಷ 1,666 ನೆ ರುಧಿರೋದ್ಗಾರಿ ಸಂವತ್ಸರದ ಆಷಾಢ ಬ 5 ಯಲ್ಲು ಎಂಬ ಕಾಲಮಾನದ ಉಲ್ಲೇಖವಿದೆ. ಶಾಸನೋಕ್ತ ಕಾಲಮಾನವು ಕ್ರಿ.ಶ. 1744ರ ಜುಲೈ 4ಕ್ಕೆ ಸರಿಹೊಂದುತ್ತದೆ. ನಂತರ ಶ್ರೀಮದ್ ಎಡವ ಮುರಾರಿ, ಕೋಟೆ ಕೋಟೆ ಕೋಳಾಹಳ ವಿಶುಧ ವೈದಿಕ ಸಿದ್ಧಾಂತ ಪ್ರತಿಷ್ಠಾಪಕ ಕೆಳದಿ ಸದಾಶಿವರಾಯ ನಾಯಕರ ವಂಶೋದ್ಭವ ಸೋಮಶೇಖರ ನಾಯಕರ ಧರ್ಮಪತ್ನಿ ಚೆನ್ನಮ್ಮಾಜಿಯವರ ಪ್ರಪೌತ್ರರು ಬಸವಪ್ಪ ನಾಯಕರ ಪೌತ್ರರು ಸೋಮಶೇಖರ ನಾಯಕರ ಅನುಜ ವೀರಭದ್ರ ನಾಯಕರ ಪುತ್ರರು ಬಸವಪ್ಪ ನಾಯಕರು. ಈ ಎರಡನೇ ಬಸವಪ್ಪ ನಾಯಕರ ಆಳ್ವಿಕೆಯ ಕಾಲದಲ್ಲಿ ನೀಡಿದ ದಾನ ಶಾಸನವಿದು.

    ಶಾಸನದ ಮಹತ್ವ:
    ಕೆಳದಿಯ ಎರಡನೇ ಬಸವಪ್ಪ ನಾಯಕರು ಬಿದನೂರಿನ ತಮ್ಮ ರಾಜಧಾನಿಯಲ್ಲಿ ಹೊಸಪೇಟೆಯೊಳಗೆ ತಂಮ ತಾಯಿ ಮಲ್ಲಮ್ಮಾಜಿಯವರ ಹೆಸರಿನಲ್ಲಿ ಒಂದು ಸ್ವತಂತ್ರ ಮಠವನ್ನು ಕಟ್ಟಿಸಿ, ಆ ಮಠವನ್ನು ಡಂಬಳದ ಫಕೀರ ದೇವರಿಗೆ ಕೊಟ್ಟರು. ಗುರುವಪ್ಪ ನವರ ವಿನಂತಿಯ ಮೇರೆಗೆ ಆರು ಲಕ್ಷ ಹಾಗ ಮತ್ತು ಭೂ ಸ್ವಾಸ್ತೆಯನ್ನು ಮಠಕ್ಕೆ ಶಿವಾರ್ಪಿತವಾಗಿ ಕೊಟ್ಟರು.

    ಶಾಸನೋಕ್ತ ಫಕೀರ ದೇವರು, ಡಂಬಳದ ಪ್ರಖ್ಯಾತ ಸೂಫಿ ಸಂತರ ಫಕೀರೇಶ್ವರ ಮಠ ಡಂಬಳದಲ್ಲಿದೆ. ಸೂಫಿ ಪಂಥದ ಫಕೀರರಿಗೆ ತನ್ನ ರಾಜಧಾನಿ ಬಿದನೂರಿನಲ್ಲಿ ಮಠವನ್ನು ಕಟ್ಟಿಸಿ ಭಾರಿ ಮೊತ್ತದ ಹಣ ಮತ್ತು ಭೂ ದಾನವನ್ನು ನೀಡಿರುವುದು ಕೆಳದಿ ಅರಸರ ಧಾರ್ಮಿಕ ಸೌಹಾರ್ದತೆಗೆ ಈ ಶಾಸನ ಸಾಕ್ಷಿಯಾಗಿದೆ. ಶಾಸನದ ಕೊನೆಯಲ್ಲಿ ಶ್ರೀ ಸದಾಶಿವ ಎಂಬ ರುಜುವಿದೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.