Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಂಕರನಾರಾಯಣ: ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ನೇತ್ರಾಲಯ ಲೋಕಾರ್ಪಣೆ
    ಊರ್ಮನೆ ಸಮಾಚಾರ

    ಶಂಕರನಾರಾಯಣ: ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ನೇತ್ರಾಲಯ ಲೋಕಾರ್ಪಣೆ

    Updated:09/12/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ತಾಲೂಕಿನ ಶಂಕರನಾರಾಯಣ ಗ್ರಾಮದ ಕುಳ್ಳಂಜೆಯಲ್ಲಿ ವಿಶ್ವದರ್ಜೆಯ ಸೌಲಭ್ಯಗಳೊಂದಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಉದ್ದೇಶದೊಂದಿಗೆ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯನ್ನು ಭಾನುವಾರ ಲೋಕಾರ್ಪಣೆಗೊಳಿಸಲಾಯಿತು.

    Click Here

    Call us

    Click Here

    ನೂತನ ಆಸ್ಪತ್ರೆಯನ್ನು ನಾರಾಯಣ ನೇತ್ರಾಲಯ ನಿರ್ವಹಣೆ ಮಾಡಲಿದೆ. ವಿಸ್ತಾರವಾದ ಒಳಾಂಗಣವನ್ನು ಹೊಂದಿರುವ ಕಟ್ಟಡವು ಕಣ್ಣಿನ ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಹೊಂದಿದ್ದು ಉನ್ನತ ಗುಣಮಟ್ಟದ ಚಿಕಿತ್ಸೆ ಒದಗಿಸಲು ಆಸ್ಪತ್ರೆಯು ಅತ್ಯಾಧುನಿಕ ಉಪಕರಣಗಳನ್ನು ಅಳವಡಿಸಲಾಗಿದೆ. ಹೆಸರಾಂತ ವೈದ್ಯರು ಮತ್ತು ಆರೋಗ್ಯ ವೃತ್ತಿಪರರ ತಂಡದೊಂದಿಗೆ ಸೇವೆಯನ್ನು ಒದಗಿಸಲು ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯು ಸಜ್ಜಾಗಿದೆ.

    ನೂತನ ಆಸ್ಪತ್ರೆಯನ್ನು ಉದ್ಘಾಟಿಸಿದ ಎಸ್‌.ಎನ್‌.ಸಿ. ಕಾರ್ಯಾಧ್ಯಕ್ಷ, ಡಾ.ಎನ್ ಸೀತಾರಾಮ ಶೆಟ್ಟಿ ಮಾತನಾಡಿ, “ಎಸ್‌ಎನ್‌ಸಿಯ ದಾರ್ಶನಿಕ ಸಂಸ್ಥಾಪಕ ಸಿ. ನಾರಾಯಣ ಶೆಟ್ಟಿ ಅವರ 100ನೇ ಜನ್ಮ ವಾರ್ಷಿಕೋತ್ಸವ ಅಂಗವಾಗಿ ಈ ಆಸ್ಪತ್ರೆಯನ್ನು ಜನತೆಯ ಸೇವೆಗಾಗಿ ಸಿದ್ಧಗೊಳಿಸಲಾಗಿದೆ. ಶಂಕರನಾರಾಯಣದಲ್ಲಿ ಹೊಸ ಚಾರಿಟಬಲ್ ಆಸ್ಪತ್ರೆಯನ್ನು ನಿರ್ಮಿಸಲಾಗಿರುವುದು ಸಾಮಾಜಿಕ ಜವಾಬ್ದಾರಿಯ ನಿರಂತರ ಪರಂಪರೆಗೆ ಸಾಕ್ಷಿಯಾಗಿದೆ”. ಜನಸಾಮಾನ್ಯರು ಯಾವುದೇ ವೆಚ್ಚವಿಲ್ಲದ, ಉತ್ತಮ ಗುಣಮಟ್ಟದ ಆರೋಗ್ಯ ಸೇವೆಯನ್ನು ಬಳಸಿಕೊಳ್ಳಲು ಪ್ರೋತ್ಸಾಹಿಸಲಾಗುತ್ತದೆ ಎಂದರು.

    ಪ್ರಖ್ಯಾತ ಆರೋಗ್ಯ ತಜ್ಞರುಗಳಾದ ನಾರಾಯಣ ಹೆಲ್ತ್ ಸಂಸ್ಥೆ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ,  ಮಣಿಪಾಲ್ ಗ್ರೂಪ್ ಅಧ್ಯಕ್ಷರಾದ ಡಾ.‌ ಎಚ್. ಸುದರ್ಶನ್ ಬಲ್ಲಾಳ್, ಮಣಿಪಾಲ್ ಹೆಲ್ತ್ ಎಂಟರ್‌ಪ್ರೈಸಸ್ ಪ್ರೈವೇಟ್ ಲಿಮಿಟೆಡ್ ಪ್ರತಿನಿಧಿಗಳು ಮತ್ತು ಇತರ ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ ಹೇಳಿದರು. 

    ಶಂಕರನಾರಾಯಣದ ಈ ಕಣ್ಣಿನ ಆಸ್ಪತ್ರೆಯನ್ನು ಶಂಕರನಾರಾಯಣ ಕನ್‌ಸ್ಟ್ರಕ್ಷನ್ಸ್ (ಎಸ್‌ಎನ್‌ಸಿ) ಪ್ರೈವೇಟ್ ಲಿಮಿಟೆಡ್‌ನ ಕಾರ್ಯನಿರ್ವಾಹಕ ಅಧ್ಯಕ್ಷ ಡಾ. ಎನ್. ಸೀತಾರಾಮ್ ಶೆಟ್ಟಿ ಅವರ ಸಿಎಸ್‌ಆರ್ ಉಪಕ್ರಮದ ಅಡಿಯಲ್ಲಿ ನಿರ್ಮಿಸಲಾಗಿದೆ. ಅವರ ಹಿರಿಯ ಸಹೋದರ, ನಾರಾಯಣ ನೇತ್ರಾಲಯ ಗ್ರೂಪ್ ಆಫ್ ಹಾಸ್ಪಿಟಲ್ಸ್‌ನ ಸಂಸ್ಥಾಪಕ ದಿವಂಗತ ಡಾ. ಭುಜಂಗ ಶೆಟ್ಟಿ ಅವರು ಈ ಯೋಜನೆಯನ್ನು ಬೆಂಬಲಿಸಿದ್ದರು.  ಭೂಮಿಪುತ್ರ ಆರ್ಕಿಟೆಕ್ಚರ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಕಾರ್ಯಾಧ್ಯಕ್ಷ, ಡಾ. ಎನ್. ಸೀತಾರಾಮ್ ಶೆಟ್ಟಿ ಪುತ್ರ ಅಲೋಕ್‌ ಶೆಟ್ಟಿ ಈ ಆಸ್ಪತ್ರೆ ಕಟ್ಟಡದ ವಿನ್ಯಾಸದ ಜವಾಬ್ದಾರಿಯನ್ನು ಹೊತ್ತಿದ್ದರು.

    Click here

    Click here

    Click here

    Click Here

    Call us

    Call us

    ಆಸ್ಪತ್ರೆಯ ವೈಶಿಷ್ಟ್ಯ:
    ಅತ್ಯಾಧುನಿಕ ಉಪಕರಣಗಳನ್ನು ಹೊಂದಿರುವ ಈ ಕಣ್ಣಿನ ಆಸ್ಪತ್ರೆಯು ಸಂಪೂರ್ಣವಾಗಿ ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಳನ್ನು ಮಾಡುತ್ತದೆ. ಅತ್ಯುನ್ನತ ಗುಣಮಟ್ಟದ ಕಣ್ಣಿನ ಆರೈಕೆಯನ್ನು ಮಾಡಲು ವಿನ್ಯಾಸಗೊಳಿಸಲಾದ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದೆ. ವಾರ್ಷಿಕವಾಗಿ 70,000 ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಳನ್ನು ನಿರ್ವಹಿಸುವ ಸಾಮರ್ಥ್ಯವಿರುವ ಎರಡು ಅಲ್ಟ್ರಾ-ಆಧುನಿಕ ಆಪರೇಷನ್ ಥಿಯೇಟರ್‌ಗಳನ್ನು ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿದೆ. ಫಾಕೊ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಳನ್ನು ಉನ್ನತ-ಕಾರ್ಯಕ್ಷಮತೆ, ವಿದೇಶದಿಂದ ಆಮದು ಮಾಡಿದ ಫ್ಯಾಕೊ ಯಂತ್ರಗಳನ್ನು ಬಳಸಿಕೊಂಡು ಉತ್ತಮ ಚಿಕಿತ್ಸೆಯ ನೀಡಲಾಗುತ್ತದೆ.

    ಆಸ್ಪತ್ರೆಯಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರವು ಉಚಿತ ಸಮಾಲೋಚನೆಗಳು, ವ್ಯಾಕ್ಸಿನೇಷನ್‌ಗಳು, ಲ್ಯಾಬ್ ಪರೀಕ್ಷೆಗಳು ಮತ್ತು ಸಣ್ಣ ಗಾಯದ ಆರೈಕೆಯನ್ನು ನೀಡುವ ಮೂಲಕ ಈ ಪ್ರದೇಶದಲ್ಲಿ ಆರೋಗ್ಯವನ್ನು ಸುಧಾರಿಸಲು ಗುರಿಯನ್ನು ಹೊಂದಿದೆ. ಯಾವುದೇ ಹಣ ಪಾವತಿಸುವ  ಕೌಂಟರ್‌ಗಳಿಲ್ಲದೆ, ಸಮುದಾಯದ ಪ್ರತಿಯೊಬ್ಬರಿಗೂ ಆರೋಗ್ಯ ಸೇವೆ ಲಭ್ಯವಾಗುವಂತೆ ಎಲ್ಲಾ ಸೇವೆಗಳನ್ನು ಆಸ್ಪತ್ರೆಯಲ್ಲಿ ಉಚಿತವಾಗಿ ನೀಡಲಾಗುತ್ತದೆ. ಜಾಗೃತಿ ಮೂಡಿಸಲು ಮತ್ತು ಈ ಅಗತ್ಯ ಸೇವೆಗಳ ಬಳಕೆಯನ್ನು ಉತ್ತೇಜಿಸಲು, ಲಸಿಕೆಗಳ ಪ್ರಾಮುಖ್ಯತೆ, ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟುವ ಆರೈಕೆ ಮತ್ತು ಸರಿಯಾದ ಆರೋಗ್ಯದ ಕ್ರಮಗಳ ಕುರಿತು ಗ್ರಾಮಸ್ಥರಿಗೆ ಅರಿವು ಮೂಡಿಸುವ ಉದ್ದೇಶವನ್ನೂ  ಹೊಂದಿದೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟೇಶ್ವರ: ಕಂಟೇನ‌ರ್ ಲಾರಿ ಹಾಗೂ ಬೈಕ್‌ ನಡುವೆ ಭೀಕರ ಅಪಘಾತ – ಬೈಕ್‌ ಸವಾರ ಸಾವು

    09/06/2026

    ಸಾಸ್ತಾನ: ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ನೋಟ್ ಬುಕ್ ವಿತರಣೆ, ಪ್ರತಿಭಾ ಪುರಸ್ಕಾರ ಸಮಾರಂಭ

    09/06/2026

    ಕುಂದಾಪುರ ಶಾಸಕರ ಅಧಿಕಾರ ವೀಕೆಂದ್ರಿಕರಣ ವಿರೋಧಿ ಮನಸ್ಥಿತಿ: ಕೆ. ವಿಕಾಸ್ ಹೆಗ್ಡೆ

    09/06/2026
    Leave A Reply Cancel Reply

    11 + sixteen =

    Call us

    Click Here

    Call us

    Call us

    Call us
    Highest Viewed Recently
    • ಪ್ರಕೃತಿಗೆ ಮರಳಿ ನೀಡದೆ ಪ್ರತಿಕ್ಷಣ ಬಳಸುತ್ತಿದ್ದೇವೆ: ಆರ್.ಕೆ. ನಾಯರ್
    • ಕೋಟೇಶ್ವರ: ಕಂಟೇನ‌ರ್ ಲಾರಿ ಹಾಗೂ ಬೈಕ್‌ ನಡುವೆ ಭೀಕರ ಅಪಘಾತ – ಬೈಕ್‌ ಸವಾರ ಸಾವು
    • ಸಾಸ್ತಾನ: ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ನೋಟ್ ಬುಕ್ ವಿತರಣೆ, ಪ್ರತಿಭಾ ಪುರಸ್ಕಾರ ಸಮಾರಂಭ
    • ಕುಂದಾಪುರ ಶಾಸಕರ ಅಧಿಕಾರ ವೀಕೆಂದ್ರಿಕರಣ ವಿರೋಧಿ ಮನಸ್ಥಿತಿ: ಕೆ. ವಿಕಾಸ್ ಹೆಗ್ಡೆ
    • ಬೆಳ್ವೆ: ಕುಂದಾಪುರ ಶಾಸಕ ಹಾಗೂ ಸಂಸದರಿಂದ ಮಲ್ಟಿ ಪರ್ಪಸ್ ಸೆಂಟರ್ ವೀಕ್ಷಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.