Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗುರುವನ್ನು ಗೌರವಿಸಿ ರಾಜ್ಯೋತ್ಸವ ಆಚರಿಸುವ ಕನ್ನಡದ ಕಟ್ಟಾಳು ಕೆ.ಜಿ ರಾವ್
    ವಿಶೇಷ ವರದಿ

    ಗುರುವನ್ನು ಗೌರವಿಸಿ ರಾಜ್ಯೋತ್ಸವ ಆಚರಿಸುವ ಕನ್ನಡದ ಕಟ್ಟಾಳು ಕೆ.ಜಿ ರಾವ್

    Updated:22/11/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ವಿನೂತನ ರೀತಿಯಲ್ಲಿ ಆಚರಿಸಲಾಯಿತು. ಅರೇ, ಈ ಕಾರ್ಯಕ್ರಮದಲ್ಲೇನಿದೆ ವಿಶೇಷ ಎಂದು ಮೂಗು ಮುರಿಯಬೇಡಿ.  ಕಾರ್ಯಕ್ರಮ ಆಯೋಜಿಸಿದ್ದು ಕನ್ನಡವನ್ನು ತನ್ನ ಉಸಿರಾಗಿಟ್ಟಕೊಂಡು ಕನ್ನಡ ಕಟ್ಟುವ ಕೆಲಸವನ್ನು ಅರ್ಥಪೂರ್ಣವಾಗಿ ಮಾಡುತ್ತಾ, ಎಲೆಯ ಮರೆಯ ಕಾಯಿಯಂತೆ ಏಕಾಂಗಿಯಾಗಿ ತನ್ನನ್ನು ತೊಡಗಿಸಿಕೊಂಡಿರುವ ಹೆಬ್ರಿಯ ಕೆ. ಗಂಗಾಧರ ರಾವ್ ಎನ್ನುವವರು. ರಾವ್ ಸರಕಾರಿ ಕಾಲೇಜೊಂದರ ಪ್ರಥಮ ದರ್ಜೆ ಸಹಾಯಕ ನೌಕರನಾಗಿ ನಿವೃತ್ತರಾದವರು. ನಿವೃತ್ತಿಯ ಬಳಿಕ ಕನ್ನಡ ರಾಜ್ಯೋತ್ಸವವನ್ನು ತಿಂಗಳು ಪೂರ್ತಿ ಅರ್ಥಪೂರ್ಣವಾಗಿ ಆಚರಿಸುವ ಅವರು ಎಲ್ಲರಿಗಿಂತ ಭಿನ್ನವಾಗಿ ನಿಲ್ಲುತ್ತಾರೆ.

    Click Here

    Call us

    Click Here

    ಸುಮಾರು 35 ವರ್ಷಗಳಕಾಲ ಸರ್ಕಾರಿ ಸೇವೆ ಮಾಡಿ ವಯೋನಿವೃತ್ತ ಬಳಿಕ ರಾವ್ ಕೈಗೊಂಡ ಯೋಜನೆ ಸ್ವಲ್ಪ ಭಿನ್ನವಾದುದು. ಶಾಲಾ-ಕಾಲೇಜುಗಳಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ಸಾಮಾನ್ಯವಾಗಿ ಗುರುತಿಸಿ ಸನ್ಮಾನಿಸುವುದು ನೋಡುತ್ತೆವೆ. ಆದರೆ ಇದಕ್ಕೆ ಕಾರಣೀಕರ್ತರಾದ ಶಿಕ್ಷಕ-ಶಿಕ್ಷಕಿಯರನ್ನು ಗುರುತಿಸುವವರಿಲ್ಲ. ಇದನ್ನು ಗಮನಿಸಿದ ರಾವ್‌ ಅವರಿಗೆ ಒಂದು ಯೋಜನೆ ಸಿದ್ದಪಡಿಸಿದ್ದರು. ಜಿಲ್ಲೆಯಲ್ಲಿರುವ ಎಲ್ಲಾ ಪ್ರೌಢಶಾಲೆ ಮತ್ತು ಕಾಲೇಜುಗಳ ಶೇಕಡಾವಾರು ಫಲಿತಾಂಶದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಸಂಸ್ಥೆಯ ಮುಖ್ಯಸ್ಥರನ್ನು ಗೌರವಿಸಿ ಸನ್ಮಾನಿಸುವುದರ ಮೂಲಕ ರಾಜ್ಯೋತ್ಸವವನ್ನು ಆಚರಿಸುತ್ತಿದ್ದಾರೆ.

    ಕಳೆದ ಕೆಲವು ವರ್ಷಗಳಿಂದ ಈ ರೀತಿಯಲ್ಲಿ ಕನ್ನಡದ ಸೇವೆಯನ್ನು ಮಾಡುತ್ತಿರುವ ಇವರು ಈ ಬಾರಿ ಶೇ97.96 ಫಲಿತಾಂಶ ಪಡೆದು ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದ ಬೈಂದೂರು ಸ.ಪ.ಪೂ ಕಾಲೇಜಿನ ಪ್ರಾಂಶುಪಾಲ ಪಾಲಾಕ್ಷ ಟಿ. ಅವರನ್ನು ರಾವ್ ಗೌರವಿಸಿ ಸನ್ಮಾನಿಸಿದರು. ಅಷ್ಟೇ ಅಲ್ಲದೇ ವಿದ್ಯಾರ್ಥಿಗಳಿಗೆ ಜಾನಪದ, ಭಾವಗೀತೆಯ ಸ್ಪರ್ಧೆಯನ್ನು ಏರ್ಪಡಿಸಿ ಫಲಕ ಹಾಗೂ ಪ್ರಶಸ್ತಿಪತ್ರವನ್ನು ವಿತರಿಸಿದರು. ನಿವೃತ್ತ ಉಪನ್ಯಾಸಕ ಪಿ. ಶೇಷಪ್ಪಯ್ಯ, ಕಸಾಪ ಹೋಬಳಿ ಅಧ್ಯಕ್ಷ ಡಾ. ಸುಬ್ರಹ್ಮಣ್ಯ ಭಟ್, ಉಪನ್ಯಾಸಕರಾದ ಗುರುಮೂರ್ತಿ ತಾಮ್ರಗೌರಿ, ರಾಮನಾಥ್ ನಾಯ್ಕ್, ರಾಮಕುಮಾರ್ ಹಾಗೂ ವಿದ್ಯಾರ್ಥಿಗಳು ವಿನೂತನವಾಗಿ ಆಚರಿಸಲ್ಪಟ್ಟ ಕನ್ನಡ ರಾಜ್ಯೋತ್ಸವಕ್ಕೆ ಸಾಕ್ಷಿಯಾದರು.

    ವರದಿ – ಜನನಿ ಉಪ್ಪುಂದ 

    Byndoor Kannada
    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ರಂಗಭೂಮಿಯಿಂದ ಸಮಾಜದ ಸವಾಲುಗಳನ್ನು ಎದುರಿಸುವ ಶಿಕ್ಷಣ: ಸಂಸದ ಕೋಟ ಶ್ರೀನಿವಾಸ ಪೂಜಾರಿ

    15/12/2025

    ಡಿ.14ರಿಂದ 08 ದಿನಗಳ ಕಾಲ ಬೈಂದೂರಿನಲ್ಲಿ ರಾಜ್ಯ ಮಟ್ಟದ ನಾಟಕ ಸ್ಪರ್ಧೆ: ಆನಂದ ಮದ್ದೋಡಿ

    12/12/2025

    ಡಿ.25ರಂದು ಮಿಯ್ಯಾಣಿ ಕಾಡಿನತಾರು ಸೂರ್ಯ ಕಂಬಳೋತ್ಸವ

    12/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.