Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗುರುವನ್ನು ಗೌರವಿಸಿ ರಾಜ್ಯೋತ್ಸವ ಆಚರಿಸುವ ಕನ್ನಡದ ಕಟ್ಟಾಳು ಕೆ.ಜಿ ರಾವ್
    ವಿಶೇಷ ವರದಿ

    ಗುರುವನ್ನು ಗೌರವಿಸಿ ರಾಜ್ಯೋತ್ಸವ ಆಚರಿಸುವ ಕನ್ನಡದ ಕಟ್ಟಾಳು ಕೆ.ಜಿ ರಾವ್

    Updated:22/11/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ವಿನೂತನ ರೀತಿಯಲ್ಲಿ ಆಚರಿಸಲಾಯಿತು. ಅರೇ, ಈ ಕಾರ್ಯಕ್ರಮದಲ್ಲೇನಿದೆ ವಿಶೇಷ ಎಂದು ಮೂಗು ಮುರಿಯಬೇಡಿ.  ಕಾರ್ಯಕ್ರಮ ಆಯೋಜಿಸಿದ್ದು ಕನ್ನಡವನ್ನು ತನ್ನ ಉಸಿರಾಗಿಟ್ಟಕೊಂಡು ಕನ್ನಡ ಕಟ್ಟುವ ಕೆಲಸವನ್ನು ಅರ್ಥಪೂರ್ಣವಾಗಿ ಮಾಡುತ್ತಾ, ಎಲೆಯ ಮರೆಯ ಕಾಯಿಯಂತೆ ಏಕಾಂಗಿಯಾಗಿ ತನ್ನನ್ನು ತೊಡಗಿಸಿಕೊಂಡಿರುವ ಹೆಬ್ರಿಯ ಕೆ. ಗಂಗಾಧರ ರಾವ್ ಎನ್ನುವವರು. ರಾವ್ ಸರಕಾರಿ ಕಾಲೇಜೊಂದರ ಪ್ರಥಮ ದರ್ಜೆ ಸಹಾಯಕ ನೌಕರನಾಗಿ ನಿವೃತ್ತರಾದವರು. ನಿವೃತ್ತಿಯ ಬಳಿಕ ಕನ್ನಡ ರಾಜ್ಯೋತ್ಸವವನ್ನು ತಿಂಗಳು ಪೂರ್ತಿ ಅರ್ಥಪೂರ್ಣವಾಗಿ ಆಚರಿಸುವ ಅವರು ಎಲ್ಲರಿಗಿಂತ ಭಿನ್ನವಾಗಿ ನಿಲ್ಲುತ್ತಾರೆ.

    Click Here

    Call us

    Click Here

    ಸುಮಾರು 35 ವರ್ಷಗಳಕಾಲ ಸರ್ಕಾರಿ ಸೇವೆ ಮಾಡಿ ವಯೋನಿವೃತ್ತ ಬಳಿಕ ರಾವ್ ಕೈಗೊಂಡ ಯೋಜನೆ ಸ್ವಲ್ಪ ಭಿನ್ನವಾದುದು. ಶಾಲಾ-ಕಾಲೇಜುಗಳಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ಸಾಮಾನ್ಯವಾಗಿ ಗುರುತಿಸಿ ಸನ್ಮಾನಿಸುವುದು ನೋಡುತ್ತೆವೆ. ಆದರೆ ಇದಕ್ಕೆ ಕಾರಣೀಕರ್ತರಾದ ಶಿಕ್ಷಕ-ಶಿಕ್ಷಕಿಯರನ್ನು ಗುರುತಿಸುವವರಿಲ್ಲ. ಇದನ್ನು ಗಮನಿಸಿದ ರಾವ್‌ ಅವರಿಗೆ ಒಂದು ಯೋಜನೆ ಸಿದ್ದಪಡಿಸಿದ್ದರು. ಜಿಲ್ಲೆಯಲ್ಲಿರುವ ಎಲ್ಲಾ ಪ್ರೌಢಶಾಲೆ ಮತ್ತು ಕಾಲೇಜುಗಳ ಶೇಕಡಾವಾರು ಫಲಿತಾಂಶದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಸಂಸ್ಥೆಯ ಮುಖ್ಯಸ್ಥರನ್ನು ಗೌರವಿಸಿ ಸನ್ಮಾನಿಸುವುದರ ಮೂಲಕ ರಾಜ್ಯೋತ್ಸವವನ್ನು ಆಚರಿಸುತ್ತಿದ್ದಾರೆ.

    ಕಳೆದ ಕೆಲವು ವರ್ಷಗಳಿಂದ ಈ ರೀತಿಯಲ್ಲಿ ಕನ್ನಡದ ಸೇವೆಯನ್ನು ಮಾಡುತ್ತಿರುವ ಇವರು ಈ ಬಾರಿ ಶೇ97.96 ಫಲಿತಾಂಶ ಪಡೆದು ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದ ಬೈಂದೂರು ಸ.ಪ.ಪೂ ಕಾಲೇಜಿನ ಪ್ರಾಂಶುಪಾಲ ಪಾಲಾಕ್ಷ ಟಿ. ಅವರನ್ನು ರಾವ್ ಗೌರವಿಸಿ ಸನ್ಮಾನಿಸಿದರು. ಅಷ್ಟೇ ಅಲ್ಲದೇ ವಿದ್ಯಾರ್ಥಿಗಳಿಗೆ ಜಾನಪದ, ಭಾವಗೀತೆಯ ಸ್ಪರ್ಧೆಯನ್ನು ಏರ್ಪಡಿಸಿ ಫಲಕ ಹಾಗೂ ಪ್ರಶಸ್ತಿಪತ್ರವನ್ನು ವಿತರಿಸಿದರು. ನಿವೃತ್ತ ಉಪನ್ಯಾಸಕ ಪಿ. ಶೇಷಪ್ಪಯ್ಯ, ಕಸಾಪ ಹೋಬಳಿ ಅಧ್ಯಕ್ಷ ಡಾ. ಸುಬ್ರಹ್ಮಣ್ಯ ಭಟ್, ಉಪನ್ಯಾಸಕರಾದ ಗುರುಮೂರ್ತಿ ತಾಮ್ರಗೌರಿ, ರಾಮನಾಥ್ ನಾಯ್ಕ್, ರಾಮಕುಮಾರ್ ಹಾಗೂ ವಿದ್ಯಾರ್ಥಿಗಳು ವಿನೂತನವಾಗಿ ಆಚರಿಸಲ್ಪಟ್ಟ ಕನ್ನಡ ರಾಜ್ಯೋತ್ಸವಕ್ಕೆ ಸಾಕ್ಷಿಯಾದರು.

    ವರದಿ – ಜನನಿ ಉಪ್ಪುಂದ 

    Byndoor Kannada
    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಖಂಬದಕೋಣೆ ಸೊಸೈಟಿ: ನಿವೃತ್ತ ಶಾಖಾ ವ್ಯವಸ್ಥಾಪಕರಿಗೆ ಬೀಳ್ಕೊಡುಗೆ, ಸನ್ಮಾನ

    20/05/2026

    ಮಕ್ಕಳಿಗೆ ಪೋಷಕರೇ ಮಾದರಿ – ಪ್ರಾಶಸ್ತನ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಸುನಿಲ್ ಹೆಚ್. ಜಿ

    17/04/2026

    ಎ.19ರಂದು ಹಳಗೇರಿ ಶ್ರೀ ಕೊಕ್ಕೇಶ್ವರ ವನದುರ್ಗಾ ದೇವಾಸ್ಥಾನದ ವರ್ಧಂತ್ಯುತ್ಸವ

    16/04/2026
    Leave A Reply Cancel Reply

    three × 5 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.