Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸೌಹಾರ್ದತೆಯಿಲ್ಲದೆ ಬದುಕಿಗೆ ಅರ್ಥವಿಲ್ಲ: ಡಾ| ಎಂ. ಮೋಹನ ಆಳ್ವ
    alvas nudisiri

    ಸೌಹಾರ್ದತೆಯಿಲ್ಲದೆ ಬದುಕಿಗೆ ಅರ್ಥವಿಲ್ಲ: ಡಾ| ಎಂ. ಮೋಹನ ಆಳ್ವ

    Updated:13/12/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದರೆ:
    ಸೌಹಾರ್ದತೆಯಿಲ್ಲದೆ ಬದುಕಿಗೆ ಅರ್ಥವಿಲ್ಲ. ಪ್ರೀತಿ ಸೌಹಾರ್ದತೆಗಾಗಿ ನಾವು ಜೀವನದುದ್ದಕ್ಕೂ ಶ್ರಮಿಸಬೇಕು ಎಂದು  ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಆಯುಕ್ತರಾದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಹೇಳಿದರು.

    Click Here

    Call us

    Click Here

    ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಹಭಾಗಿತ್ವದಲ್ಲಿ ’30ನೇ ಆಳ್ವಾಸ್ ವಿರಾಸಾತ್’ ಅಂಗವಾಗಿ ನಡೆಯುತ್ತಿರುವ ರಾಜ್ಯ ಮಟ್ಟದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮತ್ತು ರೋವರ್ಸ್- ರೇಂಜರ್ಸ್ ಸಾಂಸ್ಕೃತಿಕ ಉತ್ಸವದ ಅಂಗವಾಗಿ ರತ್ನಾಕರವರ್ಣಿ ವೇದಿಕೆಯಲ್ಲಿ ಬುಧವಾರ ಅವರು ಉಪನ್ಯಾಸ ನಿಡಿದರು.

    ಜಾನಪದ ಕಲೆಗಳ ವೈವಿಧ್ಯತೆಯನ್ನು ವಿದ್ಯಾರ್ಥಿಗಳು ಅಪ್ಪಿಕೊಳ್ಳಬೇಕು. ದೇಶದ ಕಲೆಯನ್ನು ಪ್ರೀತಿಸಬೇಕು ಎಂದರು. ಶುಚಿತ್ವವನ್ನು ಬಿಟ್ಟರೆ ಬದುಕೇ ಇಲ್ಲ. ಶುಚಿತ್ವ ಕೇವಲ ಮಾತಿಗೆ, ಬರಹಕ್ಕೆ ಮೀಸಲಾಗಬಾರದು. ನಮ್ಮ ಜೀವನದಲ್ಲಿ ಅಂತರ್ಗತವಾಗಬೇಕು. ಇದರ ಜೊತೆಗೆ ಮಣ್ಣು ಗಾಳಿ ನೀರು ಆಕಾಶವನ್ನು ರಕ್ಷಿಸುವುದು ನಮ್ಮ ಕರ್ತವ್ಯ. ಈ ಅಂಶಗಳು ಮಾನವನ ಉಳಿವಿಗಿರುವ ಪ್ರಮುಖ ಅಂಶಗಳು. ಮಾನವ ಕುಲದ ರಕ್ಷಣೆಗೆ ಪರಿಸರದ ರಕ್ಷಣೆ ಬಹುಮುಖ್ಯ ಎಂದರು.

    ಜೀವನದಲ್ಲಿ ಸೇವಾಮನೋಭಾವವನ್ನು ಬೇಕಿಸಿಕೊಳ್ಳಬೇಕು. ಕೇವಲ ಓದಿ ತಿಳಿಯುವುದಲ್ಲ ಜೀವನದ ಅನುಭವದ ಮೂಲಕ ತಿಳಿಯುವುದು ಎಂದು ತಿಳಿಸಿದರು.

    ಮಾನವಧರ್ಮವನ್ನು ಹೊರತುಪಡಿಸಿ ಜಗತ್ತಿನಲ್ಲಿ ಯಾವುದೇ ಧರ್ಮವಿಲ್ಲ. ಧರ್ಮವೊಂದೇ, ಮತಗಳು ಹಲವಾರು ಎಲ್ಲಾ ಮತಗಳು ಸೇರಿ ಇರುವುದೇ ಧರ್ಮ ಎಂದರು.

    Click here

    Click here

    Click here

    Click Here

    Call us

    Call us

    ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿ. ಜಿ. ಆರ್. ಸಿಂಧ್ಯಾ ಮಾತನಾಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದೇಶಕ್ಕೆ ಮಾದರಿಯಾಗುವಂತೆ ಬೆಳೆಯುತ್ತಿದೆ. ವಿದ್ಯಾರ್ಥಿಗಳಲ್ಲಿ ಸ್ವಪರಿಪೂರ್ಣತೆಯನ್ನು  ಮೂಡಿಸುವ ಕೆಲಸವನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಾಡುತ್ತಿದೆ ಎಂದರು.

    ಶಿಕ್ಷಣ, ಕ್ರೀಡೆ, ಸಂಸ್ಕೃತಿಯ ದೃಷ್ಟಿಯಲ್ಲಿ ದೇಶಕ್ಕೆ ಮಾದರಿಯಾಗಿರುವ ಏಕೈಕ ಸಂಸ್ಥೆ ಆಳ್ವಾಸ್ ಎಂದು ಶ್ಲಾಘಿಸಿದರು.

    ಆಳ್ವಾಸ್ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ. ವಿರಾಸಾತ್ ಮೇಳಗಳನ್ನು ಪ್ರತಿಯೊಬ್ಬರೂ ಸೂಕ್ಷ್ಮತೆಯಿಂದ ಗಮನಿಸಿ, ಪ್ರೇರಿತರಾಗಬೇಕು ಎಂದು ತಿಳಿಸಿದರು.

    ರಾಜ್ಯ ಕಾರ್ಯದರ್ಶಿ ಗಂಗಪ್ಪ ಗೌಡ, ರಾಜ್ಯ ಸಂಘಟನಾ ಆಯುಕ್ತ ಎಂ. ಪ್ರಭಾಕರ ಭಟ್, ದಕ್ಷಿಣ ಕನ್ನಡ ಜಿಲ್ಲಾ ಕೋಶಾಧಿಕಾರಿ ನವೀನಚಂದ್ರ ಅಂಬೂರಿ ಶಿಬಿರದ ಮೇಲ್ವಿಚಾರಕಿ ಮಲ್ಲೇಶ್ವರಿ ಜೂಜಾರೆ ಇದ್ದರು. ಆಳ್ವಾಸ್ ಪದವಿ ಪೂರ್ವ ಕಾಲೇಜಿನ ರೇಂಜರ್ಸ್ ಶ್ವೇತಾಶ್ರೀ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026
    Leave A Reply Cancel Reply

    11 + 10 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.