ಕುಂದಾಪುರ: ತಾಲೂಕಿನ ಗಂಗೊಳ್ಳಿ-ಗುಜ್ಜಾಡಿ ಮೂಲದ ಯುವವೈದ್ಯ ಡಾ.ಗುರುಚರಣ್ ಖಾರ್ವಿ (34) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಇವರು ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಯೂರೋಲೋಜಿ ವಿಭಾಗದಲ್ಲಿ ವೈದ್ಯರಾಗಿ ಉತ್ತಮ ಸೇವೆ ಸಲ್ಲಿಸುವ ಮೂಲಕ ಜನಾನುರಾಗಿದ್ದರು. ಮೃತರು ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ನಿವೃತ್ತ ಮ್ಯಾನೇಜರ್ ಜಿ.ಮಾಧವ ಖಾರ್ವಿ, ತಾಯಿ ಆನಂದಿ ಎಂ.ಖಾರ್ವಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.