Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಂಡಿತ್ ಎಂ. ವೆಂಕಟೇಶ್ ಕುಮಾರ್‌ಗೆ ’ಆಳ್ವಾಸ್ ವಿರಾಸತ್-2024’ ಪ್ರಶಸ್ತಿ ಪ್ರದಾನ
    alvas nudisiri

    ಪಂಡಿತ್ ಎಂ. ವೆಂಕಟೇಶ್ ಕುಮಾರ್‌ಗೆ ’ಆಳ್ವಾಸ್ ವಿರಾಸತ್-2024’ ಪ್ರಶಸ್ತಿ ಪ್ರದಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ‘ಬಡವರು, ದೀನ ದಲಿತರು, ಅಂಗವಿಕಲರಿಗಾಗಿ ಬದುಕು ಮುಡುಪಾಗಿಟ್ಟಿದ್ದ ಪಂಡಿತ ಪುಟ್ಟರಾಜ ಗವಾಯಿಗಳಿಗೆ ಈ ಪ್ರಶಸ್ತಿ ಅರ್ಪಣೆ’ ಎಂದು ಖ್ಯಾತ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಗಾಯಕ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಭಾವುಕರಾದರು.

    Click Here

    Call us

    Click Here

    ಇಲ್ಲಿನ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ಬುಧವಾರ ಸಂಜೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ’30ನೇ ವರ್ಷದ ಆಳ್ವಾಸ್ ವಿರಾಸತ್’ನಲ್ಲಿ ಪ್ರತಿಷ್ಠಿತ ’ಆಳ್ವಾಸ್ ವಿರಾಸತ್-2024’ ಪ್ರಶಸ್ತಿಯನ್ನು ಸ್ವೀಕರಿಸಿದ ಅವರು ಮನದುಂಬಿ ಮಾತನಾಡಿದರು.

    ಶಿಸ್ತು, ಸಂಯಮ, ಸಮಯ ಬಹಳ ದೊಡ್ಡದು. ಅದನ್ನು ತೋರಿಸಿದ ಡಾ.ಎಂ. ಮೋಹನ ಆಳ್ವ ಅವರ ಸಾಧನೆ ಅನನ್ಯ. ಅವರಿಂದ 101 ವರ್ಷ ಕಾರ್ಯಕ್ರಮ ನಡೆಯಲಿ ಎಂದು ಹಾರೈಸಿದರು. ಇಂತಹ ಕಾರ್ಯಕ್ರಮ ಕಷ್ಟದ ಕಾರ್ಯ ಎಂದು ಉಲ್ಲೇಖಿಸಿದರು.

    ತಂದೆ- ತಾಯಿಗಳ ಬಳಿಕ ಗುರುವೇ ನಮ್ಮ ಪುಣ್ಯ ಗವಾಯಿಗಳು ರಾಜ್ಯದಲ್ಲಿ ಹಿಂದೂಸ್ತಾನಿ ಸಂಗೀತ ಪಸರಿಸಲು ಕಾರಣ. ಅದಕ್ಕಾಗಿ ಜೀವನ ಮುಡುಪಾಗಿಟ್ಟ ಮಹಾತ್ಮ ಎಂದರು.

    ಪ್ರಶಸ್ತಿ ಹುಡುಕಿಕೊಂಡು ಬರಬೇಕು. ನಾವು ಅದರ ಹಿಂದೆ ಹೋಗಬಾರದು ಎಂದು ಕಿವಿಮಾತು ಹೇಳಿದರು.

    Click here

    Click here

    Click here

    Call us

    Call us

    ಅದಕ್ಕೂ ಮೊದಲು, ಕಲೆ-ಸಂಸ್ಕೃತಿಯ ಸಮ್ಮಿಲನದ ಸ್ವರೂಪದಂತೆ ಅಲಂಕೃತ ಗೊಂಡ ವಿರಾಸತ್‌ನ ಬಯಲು ರಂಗಮಂದಿರದ ಬೃಹತ್ ವೇದಿಕೆಗೆ ಪಂಡಿತ್ ವೆಂಕಟೇಶ್ ಕುಮಾರ್ ಅವರನ್ನು ಸಾಂಪ್ರದಾಯಿಕ ಗೌರವದ ಅಪ್ಸರೆಯರ ಜೊತೆಯಾದ ಸ್ಯಾಕ್ಸೋಫೋನ್, ಗಟ್ಟಿಮೇಳ, ಚೆಂಡೆ, ಛತ್ರಿ ಚಾಮರ ಮತ್ತಿತರ ಗೌರವ ವಾದ್ಯಪರಿಕರಗಳ ನಿನಾದಗಳ ಮೂಲಕ  ಕರೆತರಲಾಯಿತು.

    ವೇದಿಕೆಯ ಗೌರವ ಪೀಠದಲ್ಲಿ ಕುಳ್ಳಿರಿಸಿ, ಆರತಿ ಬೆಳಗಿ ಹಾರ ಹಾಕಿ ಗೌರವಿಸಲಾಯಿತು. ಹೂ, ಪನ್ನೀರು, ಗಂಧ, ಚಂದನದ ಮೂಲಕ ಸಾಂಪ್ರದಾಯಿಕ ಗೌರವ ನೀಡಲಾಯಿತು.   

    ’ಸ ಎಂದರೆ ಸಂಗೀತ ಸಾಗರ. ಆರತಿಯು.ʼ ಹಾಡಿನ ಮೂಲಕ ಅಭಿವಂದನೆ ಸಲ್ಲಿಸಲಾಯಿತು. ಹೂ ಹಾರ, ಶಾಲು, ಹಣ್ಣು-ಹಂಪಲು, ಪ್ರಶಸ್ತಿ ಫಲಕ, ಸ್ಮರಣಿಕೆ ಸಹಿತ ಒಂದು ಲಕ್ಷ ರೂಪಾಯಿಯ ಪುರಸ್ಕಾರ ನೀಡಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹಾಗೂ ಅತಿಥಿಗಳು ಪ್ರಶಸ್ತಿ ಪ್ರದಾನ ಮಾಡಿದರು.

    ಆರಂಭದಲ್ಲಿ ದೀಪ ಪ್ರಜ್ವಲನ ಮಾಡಲಾಯಿತು. ಬೆಂಗಳೂರಿನ ಪ್ರಾರ್ಥನಾ ಶಿಕ್ಷಣ ಸಂಸ್ಥೆಯ ಕರ್ಣ ಬೆಳಗೆರೆ, ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ, ವಿಧಾನ ಪರಿ?ತ್ತಿನ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಪ್ರಧಾನ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಎಲ್. ಎಚ್. ಮಂಜುನಾಥ್,  ಪ್ರಮುಖರಾದ ನರೇಂದ್ರ ಎಲ್. ನಾಯಕ್, ಉದ್ಯಮಿ ಶ್ರೀಪತಿ ಭಟ್ ಇದ್ದರು.

    ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಕನ್ನಡ ಡೀನ್ ಕೆ. ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025

    ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ

    18/12/2025

    ಆರೋಗ್ಯ ಸೇವೆಯಲ್ಲಿ ಹೊಸ ಅಧ್ಯಾಯ: ಮೂಡುಬಿದಿರೆ ಭಾಗದ ಮೊದಲ ಹೃದಯ ಚಿಕಿತ್ಸಾ ಕೇಂದ್ರ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.