Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ: ಶ್ರೀದೇವಿಗೆ ಸಹಸ್ರಾಧಿಕ ಅಷ್ಟತ್ತರ ಶತ ಸ್ವರ್ಣ ನಾಣ್ಯ ಸಹಿತ ರಜತ ಕುಂಭಾಭಿಷೇಕ
    ಊರ್ಮನೆ ಸಮಾಚಾರ

    ಗಂಗೊಳ್ಳಿ: ಶ್ರೀದೇವಿಗೆ ಸಹಸ್ರಾಧಿಕ ಅಷ್ಟತ್ತರ ಶತ ಸ್ವರ್ಣ ನಾಣ್ಯ ಸಹಿತ ರಜತ ಕುಂಭಾಭಿಷೇಕ

    No Comments
    Facebook Twitter Pinterest LinkedIn WhatsApp Reddit Tumblr Email
    oplus_2
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ:
    ದೇವರಿಗೆ ಕುಂಭಾಬಿಷೇಕ ಮಾಡುವುದರಿಂದ ಆಯುಷ್ಯ, ಶ್ರಿಯ ಪ್ರಾಪ್ತಿಯಾಗುತ್ತದೆ. ಮಾಡಿದ ಕೆಲಸ ಅಕ್ಷಯವಾಗುತ್ತದೆ. ಜೀವನದಲ್ಲಿ ಕೀರ್ತಿ ಪ್ರಾಪ್ತಿಯಾಗುತ್ತದೆ. ಯೋಗ್ಯತೆಗೆ ತಕ್ಕಂತೆ ಫಲ, ಪುಣ್ಯ ಸಿಗುತ್ತದೆ. ಸಹಸ್ರ ಕನಕಾಭಿಷೇಕ ಮಾಡುವುದರಿಂದ ದೇಶಕ್ಕೆ, ಸಮಾಜಬಾಂಧವರಿಗೆ ಒಳಿತಾಗುತ್ತದೆ. ಸುಮಾರು 475 ವರ್ಷ ಇತಿಹಾಸವುಳ್ಳ ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನವು ಜೀರ್ಣೋದ್ಧಾರಗೊಂಡು, ಬಳಿಕ ಬ್ರಹ್ಮ ರಥೋತ್ಸವ, ಸಹಸ್ರ ಕುಂಭಾಬಿಷೇಕ ನಡೆದು ಸಮಾಜದಲ್ಲಿ ಅಭಿವೃದ್ಧಿ ಕಾಣುವಂತಾಗಿದೆ. ಇಂದು ಶ್ರೀದೇವಿಗೆ ಸಹಸ್ರಾಧಿಕ ಅಷ್ಟತ್ತರ ಶತ (1108) ಸ್ವರ್ಣ ನಾಣ್ಯ ಸಹಿತ ರಜತ ಕುಂಭಾಭಿಷೇಕ ನಡೆದಿದ್ದು, ಇದರ ಪುಣ್ಯದ ಫಲ ಸಮಸ್ತ ಸಮಾಜಬಾಂಧವರಿಗೆ ಪ್ರಾಪ್ತಿಯಾಗಿ ಉತ್ತರೋತ್ತರ ಅಭಿವೃದ್ಧಿ ಆಗಲಿ ಎಂದು ಶ್ರೀ ಸಂಸ್ಥಾನ ಕಾಶೀ ಮಠಾಧೀಶ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಅವರು ಹೇಳಿದರು.

    Click Here

    Call us

    Click Here

    ಅವರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ ಜೀರ್ಣೋದ್ಧಾರ ಪುನಃ ಪ್ರತಿಷ್ಠಾ ರಜತ ಮಹೋತ್ಸವ ಪ್ರಯುಕ್ತ ಶ್ರೀದೇವಿಗೆ ಸಹಸ್ರಾಧಿಕ ಅಷ್ಟತ್ತರ ಶತ ಸ್ವರ್ಣ ನಾಣ್ಯ ಸಹಿತ ರಜತ ಕುಂಭಾಭಿಷೇಕವು ನೆರವೇರಿಸಿ ಆಶೀರ್ವಚನ ನೀಡಿದರು.

    ಶ್ರೀದೇವಿಗೆ ಸಹಸ್ರಾಧಿಕ ಅಷ್ಟತ್ತರ ಶತ ಸ್ವರ್ಣ ನಾಣ್ಯ ಸಹಿತ ರಜತ ಕುಂಭಾಭಿಷೇಕವು ನೆರವೇರಿಸಿದ ಶ್ರೀಗಳು ಉಭಯ ದೇವರಿಗೆ ಸುವರ್ಣ ಹಾರ ಸಮರ್ಪಣೆ ಮಾಡಿದರು. ಬಳಿಕ ಶ್ರೀ ಮಹಾಲಸಾ ಸಭಾ ಭವನದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿ, ವಿಶೇಷ ಸೇವಾದಾರರಿಗೆ ಪ್ರಸಾದ ನೀಡಿ ಆಶೀರ್ವದಿಸಿದರು. ಇದೇ ಸಂದರ್ಭ ದೇವಸ್ಥಾನದ ವಠಾರದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಶಾಂತೇರಿ ಸಭಾ ಮಂಟಪವನ್ನು ಶ್ರೀಗಳು ಉದ್ಘಾಟಿಸಿದರು.

    ಮಧ್ಯಾಹ್ನ ಯಜ್ಞದ ಮಹಾ ಪೂರ್ಣಾಹುತಿ ಧ್ವಜಾವರೋಹಣ, ದೇವರಿಗೆ ಮಹಾ ನೈವೇದ್ಯ, ಮಹಾಮಂಗಳಾರತಿ, ಸೇವಾ ಪ್ರಸಾದ ವಿತರಣೆ, ಮಹಾ ಸಮಾರಾಧನೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡಿತು.

    ದೇವಸ್ಥಾನ ಆಡಳಿತ ಮಂಡಳಿಯ ಟಿ.ನಾರಾಯಣ ಪೈ, ದಿನಕರ ಶೆಣೈ, ಡಾ.ಕಾಶೀನಾಥ ಪೈ, ಬಿ. ನರಸಿಂಹ ಪೈ, ಡಾ. ವಿಶ್ವನಾಥ ಪೈ, ಪ್ರಭಾಕರ ಪೈ, ಆಡಳಿತ ಮಂಡಳಿ ಸದಸ್ಯರು, ಪುರೋಹಿತರು, ಅರ್ಚಕರು, ಹತ್ತು ಸಮಸ್ತರು, ಸಮಾಜ ಬಾಂಧವರು, ಭಾಜಕರು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    Gangolli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ

    19/12/2025

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.