Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಾಗರಿಕರು ಮೌಲ್ಯಯುತವಾದ ಆಧಾರ್ ಗುರುತಿನ ಚೀಟಿಯನ್ನು ಹೊಂದುವುದು ಅವಶ್ಯ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ನಾಗರಿಕರು ಮೌಲ್ಯಯುತವಾದ ಆಧಾರ್ ಗುರುತಿನ ಚೀಟಿಯನ್ನು ಹೊಂದುವುದು ಅವಶ್ಯ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿನ ನಾಗರಿಕರು ಮೌಲ್ಯಯುತವಾದ ಆಧಾರ್ ಗುರುತಿನ ಚೀಟಿಯನ್ನು ಹೊಂದುವುದು ಅವಶ್ಯ. ಹೊಸ ನೋಂದಣಿ, ಮರು ನೋಂದಣಿ ಹಾಗೂ ಬಯೋ ಮೆಟ್ರಿಕ್ ನೀಡಿ, ಆಧಾರ್ ಗುರುತಿನ ಚೀಟಿ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಕರೆ ನೀಡಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಆಧಾರ್ ಮಾನಿಟರಿಂಗ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಸರಕಾರ ದೇಶದ ಪ್ರತಿಯೊಬ್ಬ ಅರ್ಹ ನಾಗರಿಕರಿಗೆ ವಿಶಿಷ್ಟ ಗುರುತಿನ ಚೀಟಿಯನ್ನು ವಿತರಿಸುತ್ತಿದೆ. ಎಲ್ಲರೂ ಈ ಗುರುತಿನ ಚೀಟಿಯನ್ನು ಹೊಂದಬೇಕು. ಆಧಾರ್ ಗುರುತಿನ ಚೀಟಿ ಹೊಂದದೇ ಇರುವವರು ಅಗತ್ಯ ದಾಖಲೆಗಳನ್ನು ನೀಡಿ ನೋಂದಾಯಿಸಬೇಕು. ಕಡ್ಡಾಯ ಬಯೋ ಮೆಟ್ರಿಕ್, ನವೀಕರಣ ಹಾಗೂ ಸ್ಯಾಚುರೇಷನ್ ಗೊಳಿಸುವುದರೊಂದಿಗೆ ಮೌಲ್ಯಯುತವಾದ ಆಧಾರ್ ಕಾರ್ಡ್ ಹೊಂದಬೇಕು ಎಂದರು.

    ಜಿಲ್ಲೆಯಲ್ಲಿ ಈವರೆಗೆ 14,16,407 ಜನರು ಆಧಾರ್ ನೋಂದಣಿ ಮಾಡಿಕೊಂಡಿದ್ದಾರೆ. ಅವರಲ್ಲಿ 5 ವರ್ಷದೊಳಗಿನ 35,750, 5 ರಿಂದ 18 ವರ್ಷದವರು 2,07,021, 18 ವರ್ಷ ಮೇಲ್ಪಟ್ಟ 11,73,636 ಜನರು ಆಧಾರ್ ಕಾರ್ಡ್ ಅನ್ನು ಪಡೆದಿದ್ದಾರೆ. ರಾಜ್ಯ ಆಧಾರ್ ನೋಂದಣಿ ಪ್ರಾಧಿಕಾರವು ಜಿಲ್ಲೆಯ ಆಯ್ದ ಬ್ಯಾಂಕ್‌ಗಳು, ಅಂಚೆ ಕಚೇರಿಗಳಲ್ಲಿ ಆಧಾರ್ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದ್ದು, ಕಚೇರಿ ಸಮಯದಲ್ಲಿ ಸಾರ್ವಜನಿಕರು ಆಧಾರ್ ಸೇವೆಯನ್ನು ಪಡೆಯಬಹುದಾಗಿದೆ ಎಂದರು.

    ಕಳೆದ 10 ವರ್ಷಗಳ ಹಿಂದೆ ಆಧಾರ್ ನೋಂದಣಿ ಮಾಡಿಕೊಂಡ ಪ್ರತಿಯೊಬ್ಬರು ಗುರುತಿನ ಹಾಗೂ ವಿಳಾಸ ದಾಖಲೆಯನ್ನು ಸಮೀಪದ ಆಧಾರ್ ಕೇಂದ್ರದಲ್ಲಿ ಮರು ಅಪ್ಲೋಡ್ ಮಾಡಿ ನೊಂದಣಿ ಮಾಡಿಕೊಳ್ಳಬೇಕು. ಇದನ್ನು myAadhaar.uidai.gov.in. portal ನಲ್ಲಿ ಆನ್‌ಲೈನ್ ಮೂಲಕವಾಗಿ ನೇರವಾಗಿ ನವಿಕರಿಸಲು ಅವಕಾಶವಿದೆ. ಇದರ ಉಪಯೋಗ ಪಡೆದುಕೊಳ್ಳಬೇಕು. ಒಂದೊಮ್ಮೆ ನವೀಕರಿಸದೆ ಇದ್ದಲ್ಲಿ ಆಧಾರ್ ಕಾರ್ಡ್ ನಿಷ್ಕ್ರೀಯಗೊಳ್ಳುತ್ತದೆ. ಇದರಿಂದ ಸೌಲಭ್ಯ ಅಥವಾ ಸೇವೆ ಪಡೆಯಲು ಅನಾನುಕೂಲವಾಗುತ್ತದೆ ಎಂದರು.

    Click here

    Click here

    Click here

    Call us

    Call us

    ಪ್ರತಿಯೊಬ್ಬರೂ ಆಧಾರ್ ಬಯೋಮೆಟ್ರಿಕ್ ನವೀಕರಣ ಮಾಡಿಸಿಕೊಳ್ಳಬೇಕು.  ಇದು ಕಡ್ಡಾಯವಾಗಿದೆ. ಜಿಲ್ಲೆಯಲ್ಲಿ 5 ವರ್ಷ ಮೇಲ್ಪಟ್ಟವರು 38,680 ಜನರು, 15 ವರ್ಷ ಮೇಲ್ಪಟ್ಟ 38,188 ಜನ ಸೇರಿದಂತೆ ಒಟ್ಟು 76,868 ಜನರು ನವೀಕರಿಸಿಕೊಳ್ಳಬೇಕಿದೆ. ಈ ಬಗ್ಗೆ ಹೆಚ್ಚಿನಪ್ರಚಾರ ನೀಡಿ ನವೀಕರಣಗೊಳಿಸಲು ಉತ್ತೇಜಿಸಬೇಕು. ಶಾಲಾ ವಿದ್ಯಾರ್ಥಿಗಳಿದ್ದಲ್ಲಿ ಕ್ಲಸ್ಟರ್ ಮಟ್ಟದಲ್ಲಿ ಕ್ಯಾಂಪ್‌ಗಳನ್ನು ನಿಯೋಜಿಸಿ, ಬಯೋಮೆಟ್ರಿಕ್ ಮಾಡಿಸಬೇಕು ಎಂದು ಸೂಚನೆ ನೀಡಿದರು.  

    ಹೊರದೇಶಗಳಿಂದ ಬಂದಿರುವ ಜನರು ಸಹ ಸುಳ್ಳು ದಾಖಲೆ ಪತ್ರಗಳನ್ನು ನೀಡಿ ಆಧಾರ್ ನೋಂದಣಿಗೆ ಮುಂದಾಗುವ ಸಾಧ್ಯತೆ ಗಳಿರುತ್ತದೆ. ಈ ಬಗ್ಗೆ ಎಚ್ಚರ ವಹಿಸಬೇಕು ಎಂದ ಅವರು, ಕೆಲವರು ನಕಲಿ ಆಧಾರ್ ಪ್ರತಿಗಳನ್ನು ಹೊಂದಿರುವ ಬಗ್ಗೆಯೂ ದೂರುಗಳು ಕೇಳಿ ಬಂದಿರುತ್ತವೆ. ಇವುಗಳ ಬಗ್ಗೆ ಪರಿಶೀಲನೆ ಯನ್ನು ಆಗಿಂದಾಗ್ಗೆ ಮಾಡಬೇಕು ಎಂದರು. 

      5 ವರ್ಷದೊಳಗಿನ ಮಕ್ಕಳು ಹೊಸದಾಗಿ ಆಧಾರ್ ಕಾರ್ಡ್ ನೊಂದಣಿಯನ್ನು ಸಮೀಪದ ಅಂಚೆ ಕಚೇರಿ, ತಾಲೂಕು ಕಚೇರಿ ಅಥವಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ. ಇದರ ಸದುಪಯೋಗವನ್ನು ಅವಶ್ಯ ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದರು.

    ಆಧಾರ್ ಕಾರ್ಡ್ ಹೊಂದಿದವರು ಮರಣ ಹೊಂದಿದ್ದಲ್ಲಿ ಅವರ ಕಾನೂನು ಬದ್ಧ ವಾರಾಸುದಾರರು ಅವರ ಮರಣ ಪ್ರಮಾಣ ಪತ್ರವನ್ನು ನೀಡಿ, ಆಧಾರ್ ಕಾರ್ಡ್ ಅನ್ನು ತಪ್ಪದೇ ರದ್ದುಪಡಿಸಬೇಕು. ರದ್ದುಪಡಿಸದೇ ಇದ್ದಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಇದರ ಉಪಯೋಗ ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಈ ರೀತಿ ಆದಲ್ಲಿ ಕಾನೂನುಬದ್ಧ ವಾರಸುದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

    ಸಭೆಯಲ್ಲಿ ಯು.ಐ.ಡಿ.ಎ.ಐ ಡೈರೆಕ್ಟರ್ ಮನೋಜ್ ಕುಮಾರ್, ಯು.ಐ.ಡಿ.ಎ.ಐ ಅಸಿಸ್ಟೆಂಟ್ ಮ್ಯಾನೆಜರ್ ಮೊಹಮ್ಮದ್ ಮೂಸಾಬ್, ರಿಕೇಶ್, ಡಿಡಿಪಿಯು ಗಣಪತಿ, ಡಿಡಿಪಿಐ ಮಾರುತಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ, ಹಾಗೂ ಮತ್ತಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    06/12/2025

    ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್

    06/12/2025

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಚಾಂಪಿಯನ್‌ಶಿಪ್ ರೆಕಾರ್ಡ್ ಕ್ರಿಯೇಟ್‌ಗೈದ ಮಂಜುನಾಥ ಅವರಿಗೆ ಪ್ರಶಸ್ತಿ ಪ್ರದಾನ
    • ಕುಂದಾಪುರದ ರಚಿತಾಗೆ ಕರ್ನಾಟಕ 19 ವರ್ಷದೊಳಗಿನ ಮಹಿಳಾ ಏಕದಿನ ಕ್ರಿಕೆಟ್ ಟೂರ್ನಿ ನಾಯಕತ್ವ
    • ಕುಂದಾಪುರ: ಡಿ.15ರಿಂದ ಅಣಬೆ ಮತ್ತು ಜೇನು ಕೃಷಿ ತರಬೇತಿ
    • ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ವರ್ಷದ ಪರಿನಿರ್ವಾಣ ದಿನ
    • ಸ್ವಚ್ಛತೆ ಎಂಬುವುದು ಮನೆಮನಗಳನ್ನು ತಲುಪಲಿ: ಸಂಸದ ಕೋಟ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d