Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಡೇರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಮತ್ತು ಹಳೆ ವಿದ್ಯಾರ್ಥಿಗಳ ವಾರ್ಷಿಕೋತ್ಸವ
    ಊರ್ಮನೆ ಸಮಾಚಾರ

    ಕೊಡೇರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಮತ್ತು ಹಳೆ ವಿದ್ಯಾರ್ಥಿಗಳ ವಾರ್ಷಿಕೋತ್ಸವ

    No Comments
    Facebook Twitter Pinterest LinkedIn WhatsApp Reddit Tumblr Email
    Oplus_0
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಮತ್ತು ಹಳೆ ವಿದ್ಯಾರ್ಥಿಗಳ ವಾರ್ಷಿಕೋತ್ಸವ ಸಮಾರಂಭವು ಶನಿವಾರದಂದು ಕೊಡೇರಿ ಶಾಲಾ ಆವರಣದಲ್ಲಿ ಜರಗಿತು.

    Click Here

    Call us

    Click Here

    ಅಂದು ಪೂರ್ವಾಹ್ನ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೇಖರ ಖಾರ್ವಿ ಧ್ವಜಾರೋಹಣಗೈದು ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿದರು.

    ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸುರೇಶ ಎಚ್. ಖಾರ್ವಿ ಈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

    ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು ಮತ್ತು ಗ್ರಾಮ ಪಂಚಾಯತ್ ಸದಸ್ಯರಾದ ಆನಂದ ಪೂಜಾರಿ ಕೊಡೇರಿ, ಹಿರಿಯರು ಕೊಡುಗೈದಾನಿಗಳಾದ ಕೆ. ವಾಸುದೇವ ಕಾರಂತ, ಉದ್ಯಮಿ ಹರಿದಾಸ್ ಪ್ರಭು, ಪಂಚಾಯತ್ ಸದಸ್ಯರುಗಳಾದ ಕೃಷ್ಣ ಖಾರ್ವಿ, ರಮೇಶ ಖಾರ್ವಿ, ನೇತ್ರಾವತಿ, ಶಶಿಕಲಾ, ಶಿಕ್ಷಣ ಇಲಾಖೆಯ ಸಮನ್ವಯಾಧಿಕಾರಿ ಮಂಜುನಾಥ ದೇವಾಡಿಗ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ ಮೊಗವೀರ, ಕಾರ್ಯದರ್ಶಿ ಚಂದ್ರ ಶೆಟ್ಟಿ, ಮುಖ್ಯ ಶಿಕ್ಷಕಿ ಮರ್ಲಿ ಮೊಗವೀರ ವಿದ್ಯಾರ್ಥಿ ನಾಯಕ ರಕ್ಷಕ್ ದೇವಾಡಿಗ ಉಪಸ್ಥಿತರಿದ್ದರು.

    ಹಲವಾರು ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಮುಖ್ಯ ಶಿಕ್ಷಕಿ ಮರ್ಲಿ ಮೊಗವೀರ ಸ್ವಾಗತಿಸಿದರೆ ಸಹ ಶಿಕ್ಷಕಿಯರಾದ ಸೀತಾಲಕ್ಷ್ಮಿ, ಮಮತಾ, ರಮ್ಯಾ ಬಹುಮಾನ ವಿಜೇತರ ಯಾದಿ ವಾಚಿಸಿದರು ಸಹಶಿಕ್ಷಕಿ ಚಂದ್ರಾವತಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರೆ ಶಿಕ್ಷಕಿ ಶಾಂತ ವಂದಿಸಿದರು ತದನಂತರ ಶಾಲಾ ವಿದ್ಯಾರ್ಥಿಗಳಿಗೆ ಛದ್ಮಾ ವೇಷ ಸ್ಪರ್ಧೆ ನೆಡೆಸಲಾಯಿತು.

    Click here

    Click here

    Click here

    Call us

    Call us

    ಸಂಜೆ ನೆಡೆದ ವಾರ್ಷಿಕೋತ್ಸವ ಸಮಾರಂಭದ ಸಭಾ ಕಾರ್ಯಕ್ರಮದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ಶಾಸಕರಾದ ಗುರುರಾಜ್ ಗಂಟಿಹೊಳೆ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಶಾಲಾಭಿವೃಧ್ಧಿ ಸಮಿತಿಯ ಅಧ್ಯಕ್ಷರಾದ ಸುರೇಶ ಎಚ್. ಖಾರ್ವಿ ಅಧ್ಯಕ್ಷತೆ ವಹಿಸಿದ್ದರು.

    ಮುಖ್ಯ ಅತಿಥಿಗಳಾಗಿ ಬೈಂದೂರು ವಿಧಾನಸಭಾ ಕ್ಷೇತ್ರ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಬಿಲ್ಲವ ಸಮಾಜ ಸೇವಾ ಸಂಘ ಕೊಡೇರಿ ಇದರ ಗೌರವಾಧ್ಯಕ್ಷರು ಹಾಗೂ ಮುಂಬಯಿ ಉದ್ಯಮಿ ಮಹಾದೇವ ಪೂಜಾರಿ, ಸರಕಾರಿ ನೌಕರರ ಸಂಘದ ಬೈಂದೂರು ತಾಲೂಕು ಅಧ್ಯಕ್ಷರು ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶೇಖರ ಪೂಜಾರಿ, ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೇಖರ ಖಾರ್ವಿ, ಸದಸ್ಯೆ ನೇತ್ರಾವತಿ, ಶಿಕ್ಷಣ ಇಲಾಖೆಯ ಇ.ಸಿ.ಒ ಹಾಗೂ ಶಾಲಾ ಹಳೆ ವಿದ್ಯಾರ್ಥಿ ಸತ್ಯನಾ ಕೊಡೇರಿ, ಮತ್ಸ್ಯೋದ್ಯಮಿ ೮೮೮ ಮಂಜುನಾಥ, ಶ್ರೀರಾಮ್ ಮೀನುಗಾರರ ಸೇವಾ ಸಮಿತಿ ಅಧ್ಯಕ್ಷರಾದ ಚಂದ್ರ ಡಿ. ಖಾರ್ವಿ, ಉಪನ್ಯಾಸಕ ಸತ್ಯನಾರಾಯಣ ಪೂಜಾರಿ, ಜಯಾನಂದ ಪಟಗಾರ, ವಿಶ್ವನಾಥ ಪೂಜಾರಿ, ಕೊಲ್ಲೂರು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯೆ  ಧನಾಕ್ಷಿ ವಿ. ಪೂಜಾರಿ, ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು ಮತ್ತು ಪಂಚಾಯತ್ ಸದಸ್ಯರಾದ  ಆನಂದ ಪೂಜಾರಿ ಕೊಡೇರಿ, ಮುಖ್ಯ ಶಿಕ್ಷಕಿ ಮರ್ಲಿ ಮೊಗವೀರ, ವಿದ್ಯಾರ್ಥಿ ನಾಯಕ ರಕ್ಷಕ್ ದೇವಾಡಿಗ ಉಪಸ್ಥಿತರಿದ್ದರು.

    ಹಳೆ ವಿದ್ಯಾರ್ಥಿಗಳಿಗೆ ಮತ್ತು ಶಾಲಾ ವಿದ್ಯಾರ್ಥಿಗಳ ಪೋಷಕರಿಗೆ ನೆಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ವಿಜೇತರ ಯಾದಿಯನ್ನು ದೈಹಿಕ ಶಿಕ್ಷಕರಾದ ಚಿತ್ತರಂಜನ್ ಹೆಗ್ಡೆ ಮತ್ತು ಶಿಕ್ಷಕಿ ಚಂದ್ರಾವತಿ ಶೆಟ್ಟಿ ವಾಚಿಸಿದರು. ಸಾಧನೆಗೈದ ವಿದ್ಯಾರ್ಥಿಗಳಾದ ಸಾಗರಿಕಾ ಮತ್ತು ಧನುಷ್ ಹಾಗೂ ಹಳೆ ವಿದ್ಯಾರ್ಥಿಗಳಾದ ಸತ್ಯನಾ ಕೊಡೇರಿ ಮತ್ತು ಸತ್ಯನಾರಾಯಣ ಹಾಗೂ ಸರಕಾರಿ ನೌಕರರ ಸಂಘದ ಬೈಂದೂರು ತಾಲೂಕು ಅಧ್ಯಕ್ಷರಾದ ಶೇಖರ್ ಪೂಜಾರಿ ಇವರುಗಳನ್ನು ಸನ್ಮಾನಿಸಿದರೆ ಕೊಡುಗೈದಾನಿಗಳಿಗೆ ಮತ್ತು ವಿದ್ಯಾರ್ಥಿಗಳ ಪೋಷಕರಿಗೆ ಗೌರವ ಅಭಿನಂದನೆ ಸಲ್ಲಿಸಲಾಯಿತು.

    ಶಾಲಾ ಹಳೆ ವಿದ್ಯಾರ್ಥಿ ಉಪನ್ಯಾಸಕ ಸತ್ಯನಾರಾಯಣ ಪೂಜಾರಿ ಸ್ವಸ್ತಿವಾಚನಗೈದರು. ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರೆ ಮುಖ್ಯ ಶಿಕ್ಷಕಿ ಮರ್ಲಿ ಮೊಗವೀರ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು.

    ಶಾಲಾ ವರದಿಯನ್ನು ಶಿಕ್ಷಕಿ ಸೀತಾಲಕ್ಷ್ಮಿ ಮತ್ತು ಹಳೆ ವಿದ್ಯಾರ್ಥಿಗಳ ಸಂಘದ ವರದಿಯನ್ನು ಸಂಘದ ಕೋಶಾಧಿಕಾರಿ ಹಾಗೂ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಖಾರ್ವಿ ವಾಚಿಸಿದರು.

    ಶಿಕ್ಷಕಿ ಸ್ವಾತಿ ಹೆಬ್ಬಾರ್ ನಿರೂಪಿಸಿ, ಶಿಕ್ಷಕಿ ಚಂದ್ರಾವತಿ ಶೆಟ್ಟಿ ವಂದಿಸಿದರು. ಬಳಿಕ ಜರಗಿದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅಂಗನವಾಡಿ ಪುಟಾಣಿಗಳು ಮತ್ತು ಶಾಲಾ ವಿದ್ಯಾರ್ಥಿಗಳು ನೃತ್ಯಗೈದರೆ, ವಿದ್ಯಾರ್ಥಿಗಳು ಏಕಲವ್ಯ ನಾಟಕ ಹಾಗೂ ಹಳೆ ವಿದ್ಯಾರ್ಥಿಗಳು ನೃತ್ಯ ಪ್ರಸ್ತುತಪಡಿಸಿ ನೆರೆದ ವಿದ್ಯಾಭಿಮಾನಿಗಳ ಮನರಂಜಿಸಿದರು.

    ಈ ಸಮಾರಂಭದ ಯಶಸ್ಸಿಗಾಗಿ ಗೌರವ ಶಿಕ್ಷಕಿಯರಾದ ಮಮತಾ, ರಮ್ಯಾ, ಲಕ್ಷ್ಮಿ, ಜಯಲಕ್ಷ್ಮಿ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಶ್ರೀಧರ ಖಾರ್ವಿ, ದಿಲೀಪ್ ಖಾರ್ವಿ, ಶಶಿಧರ್ ಖಾರ್ವಿ, ರಾಜೇಶ್ ಖಾರ್ವಿ, ನಾಗರತ್ನಾ, ಶಾಂತ ಪ್ರಭು ಹಳೆ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳಾದ ಹೆಚ್. ಮಂಜುನಾಥ, ವಿಜಯ್ ಪೂಜಾರಿ, ಚಂದ್ರ ಪೂಜಾರಿ, ರಾಮ ಪೂಜಾರಿ, ಪ್ರದ್ಯುಮ್ನ ಹೆಬ್ಬಾರ್, ಶ್ಯಾಮಲಾ, ಪಾರ್ವತಿ, ರಾಮಚಂದ್ರ ಖಾರ್ವಿ ಸಹಕರಿಸಿದರು.              

    Like this:

    Like Loading...

    Related

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನೆಹರೂ ಮೈದಾನದ ನೆಲ ಬಾಡಿಗೆಗೆ ತಾಲ್ಲೂಕು ರೈತ ಸಂಘ ವಿರೋಧ: ಕೆ. ವಿಕಾಸ್ ಹೆಗ್ಡೆ

    10/12/2025

    ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಕಗೋತ್ಸವ ಕಾರ್ಯಕ್ರಮ

    10/12/2025

    ಮೂಡುಗಿಳಿಯರಿನ ಹೊನ್ನಾರಿ ಅಂಗನವಾಡಿ ಕೇಂದ್ರದಲ್ಲಿ ಅನ್ನಪ್ರಾಶನ

    10/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ನೆಹರೂ ಮೈದಾನದ ನೆಲ ಬಾಡಿಗೆಗೆ ತಾಲ್ಲೂಕು ರೈತ ಸಂಘ ವಿರೋಧ: ಕೆ. ವಿಕಾಸ್ ಹೆಗ್ಡೆ
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಕಗೋತ್ಸವ ಕಾರ್ಯಕ್ರಮ
    • ಮೂಡುಗಿಳಿಯರಿನ ಹೊನ್ನಾರಿ ಅಂಗನವಾಡಿ ಕೇಂದ್ರದಲ್ಲಿ ಅನ್ನಪ್ರಾಶನ
    • ಯುವ ಬರಹಗಾರರ ಚೊಚ್ಚಲ ಕೃತಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ
    • ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d