Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಟ್ಟಿಅಂಗಡಿ ವಸತಿ ಶಾಲೆಯಲ್ಲಿ ಡಾ. ಮನಮೋಹನ್ ಸಿಂಗ್‌ ಅವರಿಗೆ ಶ್ರದ್ಧಾಂಜಲಿ
    ಊರ್ಮನೆ ಸಮಾಚಾರ

    ಹಟ್ಟಿಅಂಗಡಿ ವಸತಿ ಶಾಲೆಯಲ್ಲಿ ಡಾ. ಮನಮೋಹನ್ ಸಿಂಗ್‌ ಅವರಿಗೆ ಶ್ರದ್ಧಾಂಜಲಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಭಾರತದ ಪ್ರಸಿದ್ಧ ಆರ್ಥಿಕ ತಜ್ಞರು ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ಡಾ. ಮನಮೋಹನ್ ಸಿಂಗ್‌ ಅವರ ನಿಧನದ ಹಿನ್ನೆಲೆಯಲ್ಲಿ  ಹಟ್ಟಿಅಂಗಡಿ ವಸತಿ ಶಾಲೆಯಲ್ಲಿ ಡಿ. 27 ರಂದು ಮೌನ ಪ್ರಾರ್ಥನೆಯ ಮೂಲಕ ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು.

    Click Here

    Call us

    Click Here

    ಶಾಲೆಯ ಸಂಯೋಜಕರಾದ ಸವಿತಾ ಭಟ್ ಪ್ರಾಸ್ತಾವಿಕವಾಗಿ ಮಾತನಾಡುತ್ತಾ “ಹತ್ತು ವರ್ಷಗಳಷ್ಟು ದೀರ್ಘಕಾಲ ಭಾರತದ ಪ್ರಧಾನಿಯಾಗಿದ್ದು, ಕಾಯಕವೇ ಕೈಲಾಸವೆಂದು ಸದಾ ಕಾರ್ಯದಲ್ಲಿಯೇ ತಮ್ಮನ್ನು ತೊಡಗಿಸಿಕೊಂಡ ಮಹಾನ್ ಚೇತನ ಮನಮೋಹನ ಸಿಂಗ್. ಗ್ರಾಮಗಳ ಅಭಿವೃದ್ಧಿಗೆ ವಿಶೇಷ ಆದ್ಯತೆಯನ್ನು ನೀಡಿದವರು. ಮಾಹಿತಿ ತಂತ್ರಜ್ಞಾನ ಕ್ಶೇತ್ರದಲ್ಲಿ ಭಾರತವು ಸಾಧಿಸಿದ ಅಭಿವೃದ್ಧಿಯಲ್ಲಿ ಇವರದ್ದು ಸಿಂಹಪಾಲು. ಮೌನವಾಗಿದ್ದು ಕಾರ್ಯ ನಿರ್ವಹಿಸುವ ಇವರ ಜೀವನ ವಿದ್ಯಾರ್ಥಿಗಳಿಗೆ ಆದರ್ಶಪ್ರಾಯವಾದುದು.” ಎಂದರು.

    ಮನಮೋಹನಸಿಂಗರ ಭಾವಚಿತ್ರಕ್ಕೆ ಪುಷ್ಪಾಂಜಲಿಯೊಂದಿಗೆ ಗೌರವ ನಮನ ಸಲ್ಲಿಸಲಾಯಿತು.

    ನಂತರ ಶಾಲೆಯ ಉಪಪ್ರಾಂಶುಪಾಲರಾದ ರಾಮ ದೇವಾಡಿಗ ಮಾತನಾಡುತ್ತಾ  “ಯಾವುದೇ ವ್ಯಕ್ತಿ ಉತ್ತಮವಾಗಿ ಬೆಳೆಯಬೇಕಾದರೆ ಉತ್ತಮ ವಿದ್ಯಾಭ್ಯಾಸ ಅತ್ಯಗತ್ಯ. ಮನಮೋಹನ್ ಸಿಂಗ್‌ ಅವರ ವಿದ್ಯಾರ್ಥಿಜೀವನ  ಆಕ್ಸ್‌ಫರ್ಡ್‌ನಂತಹ ಜಗದ್ವಿಖ್ಯಾತ ಸಂಸ್ಥೆಯಲ್ಲಿ ನಡೆದಿದ್ದು ಅವರ ಜೀವನದ ಉತ್ಕರ್ಷಕ್ಕೆ ಕಾರಣವಾಯಿತು. ಭಾರತ ಮಾತ್ರವಲ್ಲ. ವಿದೇಶಗಳಲ್ಲಿಯೂ ಆರ್ಥಿಕತಜ್ಞರಾಗಿ ಗುರುತಿಸಿಕೊಂಡಿದ್ದರು. ವಿದ್ಯಾವಂತರಾಗಿ, ಉತ್ತಮ ಕೆಲಸದ ಮೂಲಕ ಜಗದಗಲಕ್ಕೂ ಭಾರತದ ಕೀರ್ತಿಯನ್ನು ಪಸರಿಸಿದ ನಾಯಕರ ಮಧ್ಯೆ ಗುರುತಿಸಲ್ಪಡುವ, ಪರಮಾಣು ಒಪ್ಪಂದದಂತಹ ದಿಟ್ಟ ಹೆಜ್ಜೆಯನ್ನಿರಿಸಿದ ಮಹಾನ್ ನಾಯಕ ಇವರಾಗಿದ್ದಾರೆ. ಮಿತಭಾಷಿಯಾಗಿ, ಆರ್ಥಿಕ ತಜ್ಞನಾಗಿ ಜಗತ್ತಿಗೆ ಹಿತವನ್ನುಂಟುಮಾಡುತ್ತಾ ಸರ್ವರಿಗೂ ಮಾದರಿಯಾಗಿ ಬೆಳೆದವರಿವರು. ಅವರ ಆದರ್ಶಗುಣಗಳನ್ನು ನಮ್ಮದನ್ನಾಗಿಸಿಕೊಂಡು ನಾವೆಲ್ಲ ಈ ನಾಡಿಗೆ ಕೊಡುಗೆ ನೀಡುವಂತಾಗಬೇಕು.” ಎಂದರು.

    ಈ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.