Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರನ ಸನ್ನಿಧಿಯಲ್ಲಿ ವಾರ್ಷಿಕ ಮಕರ ಸಂಕ್ರಮಣ ಉತ್ಸವಕ್ಕೆ ಚಾಲನೆ
    ಊರ್ಮನೆ ಸಮಾಚಾರ

    ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರನ ಸನ್ನಿಧಿಯಲ್ಲಿ ವಾರ್ಷಿಕ ಮಕರ ಸಂಕ್ರಮಣ ಉತ್ಸವಕ್ಕೆ ಚಾಲನೆ

    Updated:14/01/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ. | ಚಿತ್ರಗಳು – ದಿವಾಕರ ವಂಡ್ಸೆ
    ಕುಂದಾಪುರ:
    ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲದಲ್ಲಿ ಜ.14 ರಿಂದ 16ರ ವರೆಗೆ ನಡೆಯಲಿರುವ ಮಕರ ಸಂಕ್ರಮಣ ಉತ್ಸವಕ್ಕೆ ಮಂಗಳವಾರ ಚಾಲನೆ ದೊರೆತಿದ್ದು, ಬೆಳಿಗ್ಗೆಯಿಂದ ಸಾವಿರಾರು ಭಕ್ತರು ದೇವರ ದರ್ಶನ ಪಡೆದಿದ್ದಾರೆ.

    Click Here

    Call us

    Click Here

    ಹಬ್ಬದ ಸಂದರ್ಭ ಭಕ್ತರು ಸೇವಂತಿಗೆ, ಸಿಂಗಾರ ಹೂವನ್ನು ಬುಟ್ಟಿಯಲ್ಲಿಟ್ಟು ತಲೆಯಲ್ಲಿ ಹೊತ್ತು ಹರಕೆ ರೂಪದಲ್ಲಿ ಶ್ರೀ ದೇವರಿಗೆ ಸಮರ್ಪಿಸುವ ಪದ್ಧತಿ ಇದ್ದು, ಅದರಂತೆ ಭಕ್ತರು ಸರತಿಸಾಲಿನಲ್ಲಿ ಬಂದು ದೇವರಿಗೆ ಹೂವು ಹರಕೆ ಅರ್ಪಿಸಿದರು. ಧನು ಸಂಕ್ರಮಣದಂದು ಕ್ಷೇತ್ರದ ಚಿಕ್ಕು ದೇವರ ಪಾತ್ರಿ ಇಲ್ಲಿನ ಚಕ್ರ ಉಪನದಿಯನ್ನು ದಾಟಿ ತುಳುನಾಡಿನ ಭಕ್ತರ ಮನೆಯಲ್ಲಿ ಮೈದರ್ಶನ ಮಾಡುತ್ತಾ ಕೊನೆಗೆ ಮಕರ ಸಂಕ್ರಮಣದಂದು ಕ್ಷೇತ್ರಕ್ಕೆ ಆಗಮಿಸುವ ಪದ್ಧತಿ ಇಂದಿಗೂ ನಡೆಯುತ್ತಾ ಬಂದಿದೆ. ಮಾರಣಕಟ್ಟೆ ಕ್ಷೇತ್ರವನ್ನು ಬಡಗಿನ ದೇವರೆಂದು ಭಕ್ತರು ನಂಬಿದ್ದಾರೆ. ಕುಂದಾಪುರ, ಬೈಂದೂರು ಸೇರಿದಂತೆ ತುಳುನಾಡಿನವರು ಭಕ್ತರು ಮಾರಣಕಟ್ಟೆ ಕ್ಷೇತ್ರಕ್ಕೆ ಆಗಮಿಸುತ್ತಾರೆ.

    ಅಲಂಕಾರಗೊಂಡ ಮಾರಣಕಟ್ಟೆ ಪರಿಸರ:
    ಚಿತ್ತೂರು ಸ್ವಾಗತ ಗೋಪುರದ ತಿರುವಿನಿಂದ ಮಾರಣಕಟ್ಟೆ ದೇಗುಲದವರೆಗೆ ಮಕರ ಸಂಕ್ರಮಣ ಉತ್ಸವದ ಸಲುವಾಗಿ ವಿಶೇಷವಾಗಿ ಅಲಂಕರಿಸಲಾಗಿದೆ. ಗ್ರಾಮಸ್ಥರು, ಕ್ಷೇತ್ರದ ಅರ್ಚಕರು, ಸಿಬಂದಿ, ದರ್ಶನ ಪಾತ್ರಿಗಳು, ಚಿತ್ತೂರು ಗುಡಿಕೇರಿ ಮನೆ ಕುಟುಂಬಸ್ಥರ ನೇತೃತ್ವದಲ್ಲಿ ಆಗಮಿಸುವ ಭಕ್ತರಿಗೆ ವಿವಿಧ ಸೌಕರ್ಯಕ್ಕೆ ವ್ಯವಸ್ಥೆಗೊಳಿಸಲಾಗಿದೆ. ಭಕ್ತರ ನೂಕುನುಗ್ಗಲಾಗದಂತೆ ಸರತಿಯಲ್ಲಿ ವಿಶೇಷ ವ್ಯವಸ್ಥೆ ಅಣಿಗೊಳಿಸಲಾಗಿದೆ.

    ಕಂಹಾಸುರ ಎಂಬ ರಾಕ್ಷಸನನ್ನು ಜಗಜ್ಜನನಿ ಮೂಕಾಂಬಿಕೆ ವಧಿಸಿದ ಸ್ಥಳವೇ ಮಾರಣಕಟ್ಟೆ ಎಂಬುದು ಸ್ಕಂದ ಪುರಾಣದಲ್ಲಿ ಉಲ್ಲೇಖಿಸಲ್ಪಟ್ಟಿದೆ. ಜಗನ್ಮಾತೆ ಅಸುರನನ್ನು ವಧಿಸುವಾಗ ಕೊನೆ ಕ್ಷಣದಲ್ಲಿ ಕಂಹಾಸುರನಿಗೆ ತನ್ನ ಹಿಂದಿನ ಜನ್ಮದ ಪುಣ್ಯಫಲದಿಂದ ರಕ್ಕಸ ಬುದ್ದಿ ತೊರೆದು ಅನನ್ಯ ಭಕ್ತಿಯಿಂದ ದೇವಿಯನ್ನು ಆರಾಧಿ ಸಿದ್ದರಿಂದ ಭಕ್ತಿಗೆ ಮೆಚ್ಚಿದ ದೇವಿ ಭೂತಗಳಿಗೆ ಒಡೆಯನಾಗಿ ಮಾರಣಕಟ್ಟೆ ಬ್ರಹ್ಮನೆಂದು ಪ್ರಸಿದ್ಧಿಯುಳ್ಳವನಾಗು, ನಿನ್ನ ಪರಿವಾರದವರು ಕೂಡ ಮಾರಣಕಟ್ಟೆಗಣಗಳು ಎಂದು ಪ್ರಸಿದ್ಧವಾಗಲಿ, ಮುಂದೆ ನಿನ್ನ ಕೊಂದ ಸ್ಥಳ ಮಾರಣಕಟ್ಟೆ ಎಂದು ಕಲಿಯುಗದಲ್ಲಿ ಖ್ಯಾತಿ ಪಡೆಯಲಿ ಎಂದು ಹರಿಸಿದ್ದಳು. ಮುಂದೆ ಕೊಲ್ಲೂರಿಗೆ ಬಂದ ಆದಿಶಂಕರಾಚಾರ್ಯರು ಇಲ್ಲಿಗೆ ಆಗಮಿಸಿ ಇಲ್ಲಿನ ಕಟ್ಟೆಯ ಮೂಲ ಸ್ಥಾನದಲ್ಲಿ ಶ್ರೀ ಚಕ್ರ ಪೀಠ ಸ್ಥಾಪಿಸಿದ್ದರಿಂದ ಸಕಲ ಭಕ್ತರ ಈಡೇರಿಕೆಯ ಕ್ಷೇತ್ರವಾಗಿ ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇಗುಲ ಇಂದು ಪ್ರಸಿದ್ಧ ದೇವಾಲಯವಾಗಿದೆ.

    ಚಿತ್ರಗಳು: ದಿವಾಕರ ವಂಡ್ಸೆ

    Click here

    Click here

    Click here

    Call us

    Call us

    ಜ.14ರಂದು ಬೆಳಗ್ಗೆ 9ಕ್ಕೆ ಶ್ರೀ ಬ್ರಹ್ಮಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಮಹಾಮಂಗಳಾರತಿ, ರಾತ್ರಿ 10.30ಕ್ಕೆ ಗೆಂಡ ಸೇವೆ, ಜ.15, 16 ರಂದು ಬೆಳಗ್ಗೆ ಮಹಾಮಂಗಳಾರತಿ, ಬೆಳಿಗ್ಗೆ  9.30ಕ್ಕೆ ಮಂಡಲ ಸೇವೆ, ಜ.17 ರಂದು ಬೆಳಗ್ಗೆ ಸಂಪ್ರೋಕ್ಷಣೆ ನಡೆಯಲಿದೆ. ಕೆಂಡಸೇವೆ,ಮಂಡಲಸೇವೆ, ಮಹಾ ಪೂಜೆ ನಡೆಯುವ ಸಮಯ ಭಕ್ತರ ಪೂಜೆ, ಹಣ್ಣುಕಾಯಿ ಸೇವೆ ಜರಗುವುದಿಲ್ಲವೆಂದು ಆನುವಂಶೀಯ ಆಡಳಿತ ಮೊಕ್ತಸರ ಸಿ. ಸದಾಶಿವ ಶೆಟ್ಟಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.