Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ವೀಕ್ಷಿಸಿ, ಕ್ರೀಡಾಪಟುಗಳನ್ನು ಉತ್ತೇಜಿಸಿ: ಜಿಲ್ಲಾಧಿಕಾರಿ ಕರೆ
    ಉಡುಪಿ ಜಿಲ್ಲೆ

    ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ವೀಕ್ಷಿಸಿ, ಕ್ರೀಡಾಪಟುಗಳನ್ನು ಉತ್ತೇಜಿಸಿ: ಜಿಲ್ಲಾಧಿಕಾರಿ ಕರೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಉಡುಪಿ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ ಹಾಗೂ ಮಾಹೆ ವಿ.ವಿ ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ ಕ್ರೀಡಾಪಟುಗಳು ಕ್ರೀಡಾ ಪ್ರದರ್ಶನವನ್ನು ನೀಡಲಿದ್ದಾರೆ. ಸಾರ್ವಜನಿಕರು ಈ ಕ್ರೀಡಾಸ್ಪರ್ಧೆಗಳನ್ನು ವೀಕ್ಷಿಸುವುದರೊಂದಿಗೆ ಕ್ರೀಡಾಪಟುಗಳನ್ನು ಉತ್ತೇಜಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಕರೆ ನೀಡಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟ-2025 ರ ಸಮಾರೋಪ ಸಮಾರಂಭದ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಜಿಲ್ಲೆಯಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಕ್ರೀಡಾ ಚಟುವಟಿಕೆಯಲ್ಲಿ ಉತ್ತಮ ಪ್ರದರ್ಶನ ನೀಡಿ, ಉನ್ನತ ಸ್ಥಾನ ಪಡೆದ 8 ಕ್ರೀಡಾ ಸ್ಪರ್ಧಿಗಳು ಅಥವಾ ತಂಡಗಳು ಭಾಗವಹಿಸುತ್ತಿದ್ದಾರೆ. ಕ್ರೀಡಾ ಸ್ಪರ್ಧೆಗಳನ್ನು ವೀಕ್ಷಿಸಲು ಉಚಿತ ಪ್ರವೇಶವನ್ನು ಕಲ್ಪಿಸಲಾಗಿದೆ. ಜಿಲ್ಲೆಯ ಕ್ರೀಡಾಭಿಮಾನಿಗಳು, ಕ್ರೀಡಾ ಪಟುಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕ್ರೀಡೆಗಳನ್ನು ಪ್ರೋತ್ಸಾಹಿಸಬೇಕು ಎಂದರು.

    ಕರ್ನಾಟಕ ಕ್ರೀಡಾ ಕೂಟದ ಸಮಾರೋಪ ಸಮಾರಂಭವು ಇದೇ ಜನವರಿ 23 ರಂದು ಸಂಜೆ 5 ಗಂಟೆಗೆ ನಗರದ ಅಜ್ಜರಕಾಡುವಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಘನತೆವೆತ್ತ ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ವಿವಿಧ ಸಚಿವರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿಯೂ ಸಹ ಹೆಚ್ಚಿನ ಜನರು ಭಾಗವಹಿಸಬೇಕು ಎಂದರು.

    ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜೊತೆಯಲ್ಲಿಯೇ ಕ್ರೀಡಾ ಚಟವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಶಾಲಾ ಶಿಕ್ಷಕರು, ಪೋಷಕರು ಪ್ರೋತ್ಸಾಹಿಸಬೇಕು. ಕ್ರೀಡೆ ಮಾನವನ ಸದೃಢ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದ ಅವರು, ರಾಜ್ಯ ಸರಕಾರದ ಪೊಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಶೇ. 3 ರಷ್ಟು ಹಾಗೂ ಇತರೆ ಇಲಾಖೆಗಳಲ್ಲಿ ನೇಮಕಾತಿಯ ಸಂದರ್ಭದಲ್ಲಿ ಶೇ. 2 ರಷ್ಟು ಉದ್ಯೋಗ ಮೀಸಲಾತಿಯನ್ನು ಕ್ರೀಡಾ ಪಟುಗಳಿಗೆ ವಿಧಿಸುವುದು ವಿಶೇಷವಾಗಿದೆ ಎಂದರು.

    Click here

    Click here

    Click here

    Call us

    Call us

    ಕ್ರೀಡಾ ಇಲಾಖೆಯ ಆಯುಕ್ತ ಚೇತನ್ ಆರ್ ಮಾತನಾಡಿ, ಕರ್ನಾಟಕ ಕ್ರೀಡಾಕೂಟದ ಸಮಾರೋಪ ಸಮಾರಂಭವು ಅದ್ಧೂರಿಯಾಗಿ ನಡೆಯುತ್ತಿದ್ದು, ಆಳ್ವಾಸ್ ವಿರಾಸತ್‌ನ ವಿದ್ಯಾರ್ಥಿಗಳ ತಂಡದಿAದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಸೌಂಡ್ ಆಂಡ್ ಲೈಟ್ಸ್ ಕಾರ್ಯಕ್ರಮ ಸಹ ಅಂದು ಸಂಜೆ ನಡೆಯಲಿದೆ ಎಂದರು.

    ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಕ್ರೀಡೆಯ ಬಗ್ಗೆ ಮಕ್ಕಳಿಗೆ ಹಾಗೂ ಯುವ ಜನರಿಗೆ ದೇಹಕ್ಕೆ ಹಾಗೂ ಮನಸ್ಸಿಗೆ ಆಗುವ ಲಾಭಗಳ ಬಗ್ಗೆ ಅವರುಗಳಲ್ಲಿ ಅರಿವು ಮೂಡಿಸಿ, ಕ್ರೀಡಾ ಚಟವಟಿಕೆಗಳಲ್ಲಿ ಭಾಗವಹಿಸುವುದು, ವೀಕ್ಷಿಸುವುದಕ್ಕೆ ಪ್ರೋತ್ಸಾಹಿಸಬೇಕು ಎಂದರು.

    ಸಭೆಯಲ್ಲಿ ಎ.ಎಸ್.ಪಿ ಸಿದ್ಧಲಿಂಗಪ್ಪ, ಪೌರಾಯುಕ್ತ ಡಾ. ಉದಯ್ ಕುಮಾರ್ ಶೆಟ್ಟಿ, ವಿವಿಧ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅನುಷ್ಟಣಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    nineteen − 17 =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.