Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಾನಪದ ಕ್ಷೇತ್ರಕ್ಕೆ ಉಪ್ಪಿನಕುದ್ರು ಗೊಂಬೆಯಾಟ ತಂಡದ ಕೊಡುಗೆ ಅಪಾರ: ಡಾ. ಹರಿಕೃಷ್ಣ ಪುನರೂರು
    ಊರ್ಮನೆ ಸಮಾಚಾರ

    ಜಾನಪದ ಕ್ಷೇತ್ರಕ್ಕೆ ಉಪ್ಪಿನಕುದ್ರು ಗೊಂಬೆಯಾಟ ತಂಡದ ಕೊಡುಗೆ ಅಪಾರ: ಡಾ. ಹರಿಕೃಷ್ಣ ಪುನರೂರು

    Updated:21/01/2025No Comments
    Facebook Twitter Pinterest LinkedIn WhatsApp Reddit Tumblr Email
    ??????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಜಾನಪದ ಕ್ಷೇತ್ರಕ್ಕೆ ಉಪ್ಪಿನಕುದ್ರು ಗೊಂಬೆಯಾಟ ತಂಡದ ಕೊಡುಗೆ ಅಪಾರ. ಇಂದು 7 ನೇ ತಲಾಂತರದಲ್ಲಿ ನಡೆಯುತ್ತಿರುವ ಈ ಕಲೆಯನ್ನು ನಾವೆಲ್ಲರೂ ಸೇರಿ ಉಳಿಸಬೇಕು ಎಂದು ಡಾ. ಹರಿಕೃಷ್ಣ ಪುನರೂರು ಅವರು ಹೇಳಿದರು.

    Click Here

    Call us

    Click Here

    ಅವರು ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ನಡೆದ ಗೊಂಬೆಯಾಟ ಅಕಾಡೆಮಿಯ 10ನೇ ವಾರ್ಷಿಕೋತ್ಸವ ಹಾಗೂ ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ -2024ರ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

    ಕರ್ನಾಟಕ ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಎಂ. ಎಲ್. ಸಾಮಗರು ಅವರು ಸಮಾರಂಭವನ್ನು ಉದ್ಘಾಟಿಸಿ, ಯಕ್ಷಗಾನದ ಇತಿಹಾಸಕ್ಕಿಂತ ಗೊಂಬೆಯಾಟ ಕಲೆಯೇ ಪುರಾತನವಾದದ್ದು ಎಂದು ಅಭಿಪ್ರಾಯಪಟ್ಟರು.

    ಗಂಗೊಳ್ಳಿ ಹಾಲ್ಮಕ್ಕಿ ಶ್ರೀ ಜಟ್ಟಿಗೇಶ್ವರ ಭಜನಾ ಮಂಡಳಿಯಿಂದ ವಿಷ್ಣು ಸಹಸ್ರನಾಮದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಗಂಗೊಳ್ಳಿಯ ಡಾ. ಕಾಶೀನಾಥ್ ಪೈ ಅವರು ಪ್ರಾರ್ಥಿಸಿದರು.

    ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್‌ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಮುಖ್ಯ ಅತಿಥಿಗಳಾಗಿ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನ ಕುಂದಾಪುರದ ಮೊಕ್ತೇಸರರಾದ ರಾಧಾಕೃಷ್ಣ ಶೆಣೈ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ತಲ್ಲೂರು ಇದರ ಮೊಕ್ತೇಸರ ವಸಂತ ಆರ್. ಹೆಗ್ಡೆ, ಓಂ ಗಣೇಶ್ ಟ್ರಾಕ್ಟರ್ಸ್‌ ಶಿವಮೊಗ್ಗದ ಆಡಳಿತ ಪಾಲುದಾರ ಭಾಸ್ಕರ್ ಜಿ. ಕಾಮತ್, ಎಸ್. ವಿ. ಪದವಿಪೂರ್ವ ಕಾಲೇಜು, ಗಂಗೊಳ್ಳಿ ಇದರ ಉಪನ್ಯಾಸಕ ಸುಜಯೀಂದ್ರ ಹಂದೆ ಅವರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಪಾಕಶಾಲೆಯನ್ನು ನಿವೃತ್ತ ಕೆನರಾ ಬ್ಯಾಂಕ್ ಅಧಿಕಾರಿ ವಿಲಾಸಿನಿ ಉಡುಪಿ ಬಾಬುರಾಯ ಶೆಣೈ ಅವರು ಉದ್ಘಾಟಿಸಿದರು. ಅಕಾಡೆಮಿಯು ವರ್ಷಂಪ್ರತಿ ಕೊಡಮಾಡುವ ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ-2024ನ್ನು ಬಹುಮುಖ ಪ್ರತಿಭೆಯ ಕಲಾವಿದ ಓಂ ಗಣೇಶ್ ಉಪ್ಪುಂದ ಅವರಿಗೆ ನೀಡಲಾಯಿತು. ಪ್ರಶಸ್ತಿ ಪತ್ರವನ್ನು ರಾಜೇಂದ್ರ ಪೈ ವಾಚಿಸಿದರು.

    ಇದೇ ವೇದಿಕೆಯಲ್ಲಿ ಧಾರ್ಮಿಕ ಕ್ಷೇತ್ರದ ಧುರೀಣ ವಸಂತ ಆರ್. ಹೆಗ್ಡೆ, ಹಿಂದೂಸ್ತಾನಿ ಸಂಗೀತದಲ್ಲಿ ವಿದ್ವಾನ್ ಪದವಿ ಗಳಿಸಿದ ವಿದ್ವಾನ್ ಡಾ. ಹೆಚ್. ಆರ್. ಹೆಬ್ಬಾರ್, ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್‌ನಲ್ಲಿ ಚಿನ್ನದ ಪದಕ ಗಳಿಸಿದ ಶಿಶಿರ ಶಂಕರ ಪೂಜಾರಿ ಹಾಗೂ ಬಾಲ ಚಿತ್ರ ಕಲಾವಿದ ವಿವೇಕ್ ಭಟ್ ರನ್ನು ಸನ್ಮಾನಿಸಲಾಯಿತು. ರಾಜಶ್ರೀ ಆರ್. ಪೈ ಮತ್ತು ಎಮ್. ರತ್ನಾಕರ ಪೈ ಅವರು ಶ್ರೀ ಗಣೇಶ ಯಕ್ಷಗಾನ ಮಂಡಳಿ, ಉಪ್ಪಿನಕುದ್ರು ಇದರ ಚಂಡೆಗಾರ ಶಂಕರ ಕುಮಾರ ಮೊಗವೀರ ಅವರಿಗೆ ಗೃಹ ನಿರ್ಮಾಣದ ಬಗ್ಗೆ ಧನಸಹಾಯ ನೀಡಿದರು.

    ಪ್ರತೀಕ್ಷಾ ಕಾಮತ್ ಅವರು ದೀಕ್ಷಾಳಿಗೆ ಹಾಗೂ ಸಹನಾ ಶ್ರೀಲತಾ ನಾಯಕ್ ಮುಂಬಯಿ ಅವರು ಸಮೀಕ್ಷಾಳಿಗೆ ಶಾಲಾ ಸಾಮಾಗ್ರಿಗಳನ್ನು ಕೊಡುಗೆಯಾಗಿ ನೀಡಿದರು. ಉಪ್ಪಿನಕುದ್ರು ನಿವಾಸಿ ವಾಸುದೇವ ಆಚಾರ್ ಅವರಿಗೆ ಗಂಗೊಳ್ಳಿ ಜಿ. ಜಯಂತಿ ಗಣಪತಿ ಸೇರುಗಾರ್ ಅವರು ವೈದ್ಯಕೀಯ ನೆರವು ನೀಡಿದರು. ಸ್ಥಳಿಯ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಮಹಿಳೆಯರಿಗೆ ಏರ್ಪಡಿಸಿದ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹಮಾನ ವಿತರಿಸಲಾಯಿತು.

    ಮನೋರಂಜನಾ ಕಾರ್ಯಕ್ರಮದ ಅಂಗವಾಗಿ ಜನಾರ್ಧನ ಹಂದೆ ಮಂಗಳೂರು ಇವರ ಗೀತೆಗಳು, ವಸಂತಿ ಆರ್. ಪಂಡಿತ್ ಅವರ ದೇವರ ನಾಮ, ಪೂಜಾ ಭಟ್ ಹಾಗೂ ಶ್ರೀ ಲಕ್ಷ್ಮೀ ವೆಂಕಟರಮಣ ಮಹಿಳಾ ಮಂಡಳಿ ಚೇಂಪಿ ಅವರ ಕುಣಿತದ ಭಜನೆ, ತಲ್ಲೂರಿನ ಅಂಗನವಾಡಿ ಕೇಂದ್ರ, ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಮತ್ತು ಸ್ಥಳೀಯ ವಿದ್ಯಾರ್ಥಿಗಳ ನೃತ್ಯ ವೈಭವ ನೆರೆದ ಪ್ರೇಕ್ಷರನ್ನು ರಂಜಿಸಿತು.

    ಕಾರ್ಯಕ್ರಮವನ್ನು ನಿವೃತ್ತ ಶಿಕ್ಷಕ ನಾಗೇಶ್ ಶ್ಯಾನುಭಾಗ್ ನಿರೂಪಿಸಿ, ನಿವೃತ್ತ ಶಿಕ್ಷಕ ಉದಯ ಭಂಡಾರ್‌ಕಾರ್ ಅವರು ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    3 × five =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.