Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ವಿದ್ಯಾರ್ಥಿಸಿರಿ-15: ಶಾಲಿಕಾ ಸಮ್ಮೇಳನಾಧ್ಯಕ್ಷೆ, ಸುಶ್ಮಿತಾ ಕವಿಗೋಷ್ಠಿ ಅಧ್ಯಕ್ಷೆ
    alvas nudisiri

    ಆಳ್ವಾಸ್ ವಿದ್ಯಾರ್ಥಿಸಿರಿ-15: ಶಾಲಿಕಾ ಸಮ್ಮೇಳನಾಧ್ಯಕ್ಷೆ, ಸುಶ್ಮಿತಾ ಕವಿಗೋಷ್ಠಿ ಅಧ್ಯಕ್ಷೆ

    Updated:26/11/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಇತ್ತೀಚೆಗೆ ವಿದ್ಯಾಗಿರಿಯ ಆಳ್ವಾಸ್ ಸಭಾಂಗಣದಲ್ಲಿ ನಡೆದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಯ ವಿವಿಧ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಲಿಖಿತ ಪರೀಕ್ಷೆ, ಆಶು ಭಾಷಣ ಸ್ಪರ್ಧೆ ಮತ್ತು ಸಂದರ್ಶನದ ಮೂಲಕ ಈ ಆಯ್ಕೆಗಳನ್ನು ನಡೆಸಲಾಯಿತು. ಇದೇ ಸಂದರ್ಭದಲ್ಲಿ ಕವಿಗೋಷ್ಠಿಯಲ್ಲಿ ಭಾಗವಹಿಸುವ ಕವಿಗಳನ್ನು ಮತ್ತು ಇತರ ಗೋಷ್ಠಿಗಳಿಗಿರುವ ಭಾಷಣಕಾರರನ್ನು ಆಯ್ಕೆ ಮಾಡಲಾಯಿತು. ಆಯ್ಕೆ ಪ್ರಕ್ರಿಯೆಯಲ್ಲಿ ಮೌಲ್ಯ ಮಾಪಕರಾಗಿ ಅಂಡಾರು ಗುಣಪಾಲ ಹೆಗ್ಡೆ, ಶ್ರೀಧರ ಜೈನ್ , ಡಾ. ಧನಂಜಯ ಕುಂಬ್ಳೆ ಭಾಗವಹಿಸಿದ್ದರು.

    Click Here

    Call us

    Click Here

    ಅದ್ಯಕ್ಷೆಯಾಗಿ ಆಯ್ಕೆಯಾದ ಶಾಲಿಕಾ ಎಕ್ಕಾರು ರಂಗಭೂಮಿ, ಯಕ್ಷಗಾನ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ವಿಶೇಷ ಆಸಕ್ತಿ. ಹಲವು ಶ್ರೇಷ್ಠ ನಿರ್ದೇಶಕರು ನಿರ್ದೇಶಿಸಿದ ನಾಟಕಗಳಲ್ಲಿ ಮುಖ್ಯ ಪಾತ್ರಗಳಲ್ಲಿ ನಟನೆ. ನೀಲಿಕುದುರೆ, ನಿದ್ರಾನಗರಿ, ಪಂಜರ ಶಾಲೆ, ಪುಷ್ಪರಾಣಿ, ಅಗ್ನಿಪಥ, ಮಕ್ಕಳ ರಾಮಾಯಣ, ಗೆಲಿಲಿಯೋ, ಮೇರಿಕ್ಯೂರಿ, ಮಹಿಳಾ ಭಾರತ ಅವರು ನಟಿಸಿದ ಮುಖ್ಯ ನಾಟಕಗಳು. ಖ್ಯಾತ ಯಕ್ಷಗಾನ ಭಾಗವತ ಶ್ರೀ ಸದಾನಂದ ಐತಾಳರ ನಿರ್ದೇಶನದಲ್ಲಿ ಬಬ್ರುವಾಹನ ಕಾಳಗ, ಸುಧನ್ವ ಕಾಳಗ, ಗದಾಯುದ್ಧ ಮುಂತಾದ ಮಕ್ಕಳ ಯಕ್ಷಗಾನದಲ್ಲ್ಲಿ ಮುಖ್ಯ ಪಾತ್ರ. ಕವಿಗೋಷ್ಠಿಗಳಲ್ಲಿ ಕವನವಾಚನ, ಕನ್ನಡ ಸಾಹಿತ್ಯದ ಅಧ್ಯಯನ ಆಸಕ್ತಿಯ ಕ್ಷೇತ್ರ.

    alvas sushmitha2012ರಲ್ಲಿ ಜ್ಞಾನ ಮಂದಾರ ಸಾಂಸ್ಕೃತಿಕ ಅಕಾಡೆಮಿಯಿಂದ ’ಅರಳು ಮಲ್ಲಿಗೆ’ ರಾಜ್ಯ ಪ್ರಶಸ್ತಿ. 2011ರಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ನಡೆಸಿದ ರಾಜ್ಯ ಮಟ್ಟದ ಕಲಾಪ್ರತಿಭೋತ್ಸವದಲ್ಲಿ ಜಿಲ್ಲೆ, ವಿಭಾಗ ಮತ್ತು ರಾಜ್ಯಮಟ್ಟದಲ್ಲಿ ಏಕಪಾತ್ರಾಭಿನಯದಲ್ಲಿ ಬಹುಮಾನ ಪಡೆದಿದ್ದಾರೆ. ಜಿಲ್ಲಾ ಮಟ್ಟದ ಕಲಾಶ್ರೀ ಪ್ರಶಸಿ, 2012-13ನೇ ಸಾಲಿನಲ್ಲಿ ಎಲ್.ಐ.ಸಿ. ಉಡುಪಿ ವಿಭಾಗದಿಂದ ’ಸ್ಟೂಡೆಂಟ್ ಆಫ್ ದಿ ಇಯರ್’ ಪುರಸ್ಕಾರ. ಪ್ರತಿಭಾ ಕಾರಂಜಿಯಲ್ಲಿ ಏಕಪಾತ್ರಾಭಿನಯ, ಚರ್ಚೆ, ಆಶುಭಾಷಣ, ನಾಟಕ ಸ್ಪರ್ಧೆಗಳಲ್ಲಿ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಹಲವು ಬಹುಮಾನಗಳನ್ನು ಪಡೆದಿದ್ದಾರೆ. ಈಕೆ ಡಾ. ಗಣನಾಥ ಎಕ್ಕಾರು ಮತ್ತು ಡಾ. ನಿಕೇತನ ಅವರ ಪುತ್ರಿ.

    ಕವಿಗೋಷ್ಠಿಯ ಅಧ್ಯಕ್ಷೆಯಾಗಿ ಆಯ್ಕೆಗೊಂಡ ಸುಶ್ಮಿತಾ ಎಸ್ ರೈ ಮುಳ್ಳೇರಿಯಾ ಇವರು ಭರತನಾಟ್ಯ, ಕೂಚುಪುಡಿ, ಜಾನಪದ ನೃತ್ಯ ಮತ್ತು ಯಕ್ಷಗಾನ ಕಲಾವಿದೆ. ಕವಿತಾ ರಚನೆ, ಪ್ರಬಂಧ ರಚನೆ ಭಾಷಣ ಕಂಠಪಾಠ ಸ್ಪರ್ಧೆಗಳಲ್ಲಿ ಹಲವು ಬಹುಮಾನಗಳನ್ನು ಪಡೆದಾಕೆ. ಕೇರಳ ಜನಪದ ಜಾತ್ರೆ ಸನ್ಮಾನ, ಯಕ್ಷಪ್ರಭಾ ಪ್ರಶಸ್ತಿ, ಗಡಿನಾಡಧ್ವನಿ ರಾಜ್ಯ ಪ್ರಶಸ್ತಿ, ಯಕ್ಷಭಾವೈಕ್ಯ ಪ್ರಶಸ್ತಿ ಮೊದಲಾದ ಹಲವು ಗೌರವಗಳು ಇವರಿಗೆ ಸಂದಿವೆ. ಈಕೆ ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾದ ಸುಧೀರ್ ಕುಮಾರ್ ರೈ ಮತ್ತು ಕುಶಿತ ಕುಮಾರಿ ಇವರ ಪುತ್ರಿ.

    Alvas nudisiri
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ

    21/04/2026

    ಆಳ್ವಾಸ್ ನ್ಯಾಚುರೋಪಥಿ ಕಾಲೇಜಿಗೆ 12 ರ‍್ಯಾಂಕ್‌

    20/04/2026
    Leave A Reply Cancel Reply

    four × 5 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.