Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಖ್ಯಾತ ಸಾಹಿತಿ – ನಿರೂಪಕ ಡಾ. ನಾ. ಸೋಮೇಶ್ವರ ಅವರು ಬಿಂದುಶ್ರೀ ಪ್ರಶಸ್ತಿಗೆ ಆಯ್ಕೆ
    ಊರ್ಮನೆ ಸಮಾಚಾರ

    ಖ್ಯಾತ ಸಾಹಿತಿ – ನಿರೂಪಕ ಡಾ. ನಾ. ಸೋಮೇಶ್ವರ ಅವರು ಬಿಂದುಶ್ರೀ ಪ್ರಶಸ್ತಿಗೆ ಆಯ್ಕೆ

    Updated:21/01/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಸುರಭಿ ರಿ. ಬೈಂದೂರು ಸಂಸ್ಥೆಯ ಮೂಲಕ ಕಳೆದ 10 ವರ್ಷಗಳಿಂದ ನಾಡಿನ ಸಾಂಸ್ಕೃತಿಕ ಕ್ಷೇತ್ರದ ಖ್ಯಾತನಾಮರಿಗೆ ನೀಡಲಾಗುತ್ತಿರುವ ಬಿಂದುಶ್ರೀ ಪ್ರಶಸ್ತಿಯನ್ನು ಈ ಭಾರಿ ನಾಡಿನ ಖ್ಯಾತ ಸಾಹಿತಿ, ವೈದ್ಯ, ನಿರೂಪಕ ಡಾ. ನಾ. ಸೋಮೇಶ್ವರ ಅವರಿಗೆ ನೀಡಲಾಗುತ್ತಿದೆ. ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ಸುರಭಿ, ಜನವರಿ 29ರಿಂದ 5 ದಿನಗಳ ಕಾಲ ಸುರಭಿ ಜೈಸಿರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಜನವರಿ 30ರಂದು ಡಾ. ನಾ. ಸೋಮೇಶ್ವರ ಅವರಿಗೆ 11ನೇ ಬಿಂದುಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. 

    Click Here

    Call us

    Click Here

    ಡಾ. ನಾ. ಸೋಮೇಶ್ವರ:
    ಡಾ. ನಾ. ಸೋಮೇಶ್ವರ ಅವರು ವಿದ್ಯುನ್ಮಾನ ಮಾಧ್ಯಮ ಮತ್ತು ಬರವಣಿಗೆಗಳ ಮೂಲಕ ಜನರ ಹೃದಯ ತಟ್ಟಿದವರು. ಚಂದನ ವಾಹಿನಿಯಲ್ಲಿ ಥಟ್ ಅಂತ ಹೇಳಿ ಎನ್ನುವ ಕನ್ನಡ ಕ್ವಿಜ್ ಕಾರ್ಯಕ್ರಮದ ರೂವಾರಿಯಾಗಿ ಪ್ರಸಿದ್ಧರಾದವರು. ಅವರು ಕಳೆದ 22 ವರ್ಷಗಳಿಂದ ನಡೆಸುತ್ತಿರುವ ಈ ಕಾರ್ಯಕ್ರಮ 4,800ಕ್ಕೂ ಹೆಚ್ಚು ಸಂಚಿಕೆಗಳನ್ನು ಪೂರೈಸಿದೆ.

    ಸೋಮೇಶ್ವರ ಅವರು ಬಿ.ಎಸ್.ಸಿ ಪದವಿಯ ಬಳಿಕ, ಎಮ್.ಬಿ.ಬಿ.ಎಸ್ ಪದವಿಯನ್ನು ಗಳಿಸಿದರು. ವೃತ್ತಿಯಿಂದ ವೈದ್ಯರಾದ ಸೋಮೇಶ್ವರ ಅವರು ಪ್ರಸ್ತುತ ಅಸ್ಟ್ರಾಜೆನಿಕ್ ಫಾರ್ಮಾ ಇಂಡಿಯಾ ಲಿಮಿಟೆಡ್ ಸಂಸ್ಥೆಯುಲ್ಲಿ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜೊತೆಗೆ ಥಟ್‌ ಅಂತ ಹೇಳಿ ಕಾರ್ಯಕ್ರಮದ ನಿರೂಪಕರಾಗಿದ್ದಾರೆ.

     ಅವರು ವಿದ್ಯಾರ್ಥಿಯಾಗಿದ್ದಾಗಲೇ ‘ಜೀವನಂದಿ’ ಎಂಬ ಮಾಸಿಕ ಪತ್ರಿಕೆಯನ್ನು ಪ್ರಕಟಿಸಿದ್ದರು. ಬರವಣಿಗೆಗೆ ಮತ್ತು ಉಪನ್ಯಾಸಗಳೆರಡರಲ್ಲಿಯೂ ತಮ್ಮದೇ ಆದ ಶೈಲಿ ರೂಢಿಸಿಕೊಂಡವರು. ಹಂಪಿ ಕನ್ನಡ ವಿಶ್ವವಿದ್ಯಾಲಯ ಪ್ರಕಟಿಸಿರುವ ವೈದ್ಯವಿಶ್ವಕೋಶದಲ್ಲಿ ಇವರು ಬರೆದ ಅನುವಂಶಿಕ ರೋಗಗಳನ್ನು ಕುರಿತು ಲೇಖನಗಳು ಪ್ರಕಟಗೊಂಡಿವೆ. ಬೆಂಗಳೂರು ದೂರದರ್ಶನದಲ್ಲಿ ವಿಜ್ಞಾನ ಹಾಗೂ ಆರೋಗ್ಯದ ಕುರಿತು ಅನೇಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ. ಆಕಾಶವಾಣಿಯಲ್ಲಿಯೂ ಹಲವಾರು ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ.

    ಅವರ ಒಟ್ಟು 30ಕ್ಕೂ ಅಧಿಕ ಪುಸ್ತಕಗಳು ಪ್ರಕಟಗೊಂಡಿದ್ದು ಅವುಗಳಲ್ಲಿ “ಬಹಿರಂಗ ಶುದ್ಧ”, “ಏಳುಸುತ್ತಿನ ಕೋಟೆಯಲ್ಲಿ ಎಂಟು ಕೋಟಿ ಬಂಟರು”, “ಬದುಕು ನೀಡುವ ಬದಲೀ ಜೋಡಣೆ”, “ಪ್ರಕೃತಿಯ ಸೂಪರ್ ಕಂಪ್ಯೂಟರ್-ಮಿದುಳು”, ಪ್ರಮುಖವಾದವುಗಳು.

    Click here

    Click here

    Click here

    Call us

    Call us

    ಸೋಮೇಶ್ವರ್ ಅವರು ನಾರಪ್ಪ ಹಾಗೂ ತಾಯಿ ಅಂಜನಾರವರ ಮಗನಾಗಿ 14 ಮೇ 1955 ರಲ್ಲಿ ಬೆಂಗಳೂರಿನ ಮಲ್ಲೇಶ್ವರದಲ್ಲಿ ಜನಿಸಿದರು. ಅವರ ಪತ್ನಿ ರುಕ್ಮಾವತಿ. ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಆರ್ಯಭಟ್ಟ ಅಂತಾರಾಷ್ಟ್ರೀಯ ಪ್ರಶಸ್ತಿ, ಡಾ|| ಬಿ.ಸಿ. ರಾಯ್ ವೈದ್ಯ ದಿನಾಚರಣೆ ಪ್ರಶಸ್ತಿ, ರನ್ನ ಸಾಹಿತ್ಯ ಪ್ರಶಸ್ತಿ, ವೈದ್ಯಸಾಹಿತ್ಯ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಪ್ರಶಸ್ತಿ ಪುರಸ್ಕಾರಗಳು ಸಂದಿವೆ.

    ಬಹುಮುಖ ವ್ಯಕ್ತಿತ್ವದ ಡಾ. ನಾ. ಸೋಮೇಶ್ವರ ಅವರಿಗೆ ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ಸುರಭಿ ಸಂಸ್ಥೆ 11ನೇ ಬಿಂದುಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡುತ್ತಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಸ್.‌ ಆನಂದ ಮದ್ದೋಡಿ, ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.