Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಋಣಮುಕ್ತರಾಗುವಲ್ಲಿಯೇ ಬದುಕಿನ ಸಾರ್ಥಕ್ಯವಿದೆ – ಬಿಂದುಶ್ರೀ ಪ್ರಶಸ್ತಿ ಸ್ವೀಕರಿಸಿ ಡಾ. ನಾ. ಸೋಮೇಶ್ವರ್ ಅಭಿಮತ
    ಊರ್ಮನೆ ಸಮಾಚಾರ

    ಋಣಮುಕ್ತರಾಗುವಲ್ಲಿಯೇ ಬದುಕಿನ ಸಾರ್ಥಕ್ಯವಿದೆ – ಬಿಂದುಶ್ರೀ ಪ್ರಶಸ್ತಿ ಸ್ವೀಕರಿಸಿ ಡಾ. ನಾ. ಸೋಮೇಶ್ವರ್ ಅಭಿಮತ

    Updated:31/01/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಪ್ರತಿಯೊಬ್ಬ ಮನಷ್ಯನಿಗೂ ನಮ್ಮ ಸಂಸ್ಕೃತಿ ಹೊರೆಸಿರುವ ದೈವ ಋಣ, ಪಿತೃ ಋಣ, ಆಚಾರ್ಯ ಋಣ, ಸಮಾಜದ ಋಣ ಎಂಬ ನಾಲ್ಕು ಋಣಗಳನ್ನು ತೀರಿಸುವ ಹೊಣೆ ಇದೆ. ಇವು ಕೇಳಲು ಸರಳ ಎನಿಸಿದರೂ ತೀರಿಸಲು ಒಂದು ಜನ್ಮ ಸಾಲದು. ಋಣಮುಕ್ತರಾಗುವಲ್ಲಿಯೇ ಬದುಕಿನ ಸಾರ್ಥಕ್ಯವಿದೆ ಎಂದು ವೈದ್ಯ, ಸಾಹಿತಿ ಡಾ. ನಾ. ಸೋಮೇಶ್ವರ್‌ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ಶಾರದಾ ವೇದಿಕೆಯಲ್ಲಿ ಗುರುವಾರ ಸುರಭಿ ರಿ. ಬೈಂದೂರು ಸಂಸ್ಥೆಯ ಸುರಭಿ ಜೈಸಿರಿ ಹಾಗೂ ಬೆಳಿಹಬ್ಬದ ಸಂಭ್ರಮಾಚರಣೆಯಲ್ಲಿ ಸುರಭಿಯ 11ನೇ ಬಿಂದುಶ್ರೀ ಪ್ರಶಸ್ತಿ ಸ್ವೀಕರಿಸಿ ಮಾತನಾಡಿ ಕೆಲವು ಸೇವೆಯನ್ನು ಹಣದಿಂದ ಅಳೆಯಲು ಸಾಧ್ಯವಿಲ್ಲ. ಭವ್ಯ ಭಾರತದ ಭವಿಷ್ಯವನ್ನು ರೂಪಿಸುವ ಅದ್ಯುತ ಶಿಲ್ಪಿಗಳು ಅಧ್ಯಾಪಕರು. ಅವರ ಋಣವನ್ನು ನಾವು ಉತ್ತಮ ವಿಚಾರವನ್ನು ಹಂಚುವ ಮೂಲಕ ತೀರಿಸಬೇಕಾದ ಹೊಣೆ ನಮ್ಮದಾಗಿದೆ. ಚಂದನ ವಾಹಿಯ ನಿರೂಪಕನಾಗಿ ಆ ಕಾರ್ಯವನ್ನು ಆತ್ಮತೃಪ್ತಿಯೊಂದಿಗೆ ಮಾಡುತ್ತಿದ್ದೇನೆ ಎಂದರು.

    ಪ್ರಶಸ್ತಿ ಸ್ವೀಕರಿಸುವ ವೇಳೆ ಭಾವುಕರಾಗಿದ್ದ ಅವರು ಮುಂದುವರಿದು ಮಾತನಾಡಿ, ಮಕ್ಕಳಿಗೆ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಕಲಿಸಬೇಕಾದದ್ದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಕಳೆದ ಇಪ್ಪತ್ತೈದು ವರ್ಷಗಳಲ್ಲಿ ಸುಮಾರು ಐದು ಸಾವಿರ ವಿದ್ಯಾರ್ಥಿಗಳಿಗೆ ಭಾರತೀಯ ಕಲೆಗಳನ್ನು ದಾಟಿಸುವ ಕಾಯಕದಲ್ಲಿ ತೊಡಗಿರುವ ಸುರಭಿ ತಂಡ ಸಮಾಜದ ಋಣ ತೀರಿಸುತ್ತಾ  ಋಣಮುಕ್ತವಾಗುತ್ತಿದೆ ಎಂದರು.

    ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಶಸ್ತಿಗಳು ಎಷ್ಟು ಬಂತು ಎಂದು ಲೆಕ್ಕಹಾಕುವ ಬದಲಿಗೆ ಅದನ್ನು ಯಾರಿಗೆ ಕೊಡುವುದರಿಂದ ಮೌಲ್ಯ ಹೆಚ್ಚಾಯಿತೆಂದು ಸಂಘಟನೆಗಳು ಭಾವಿಸುವಂತಾದರೆ, ಪ್ರಶಸ್ತಿ ಸ್ವೀಕರಿಸುವ ಜೊತೆಗೆ ತಮ್ಮವರೆಲ್ಲರನ್ನೂ ನೆನೆಯುತ್ತಾ ಸ್ವೀಕರಿಸುವವರು ಅದರ ಸಾರ್ಥಕ್ಯತೆ ಅನುಭವಿಸಿದರೆ ಪ್ರಶಸ್ತಿಯ ಘನತೆ ಹೆಚ್ಚುತ್ತದೆ. ಬಿಂದುಶ್ರೀ ಪ್ರಶಸ್ತಿ ನಾ. ಸೋಮೇಶ್ವರ ಅವರಿಗೆ ನೀಡುವ ಅಂತಹ ಸುಂದರ ಕ್ಷಣಕ್ಕೆ ನಾವು ಸಾಕ್ಷಿಯಾಗಿದ್ದೇವೆ ಎಂಬುದೇ ಸಂತಸ ಎಂದರು.

    ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಆಶಯ ನುಡಿಗಳನ್ನಾಡಿದರು. ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಅಭಿನಂದನಾ ನುಡಿಗಳನ್ನಾಡಿದರು.

    Click here

    Click here

    Click here

    Call us

    Call us

    ನಿವೃತ್ತ ಬ್ಯಾಂಕ್ ಅಧಿಕಾರಿ ಎಚ್. ವಸಂತ ಹೆಗ್ಡೆ, ಉದ್ಯಮಿ ಚಂದ್ರಶೇಖರ್‌ ಕಲ್ಪತರು, ಮೂಡುಬಿದಿರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ ಪಿ., ಸುರಭಿ ಪ್ರಾಕ್ತನ ವಿದ್ಯಾರ್ಥಿನಿ ಬಿಂದುಶ್ರೀ ಸನತ್‌ ಸುರತ್ಕಲ್, ಸುರಭಿ ನಿರ್ದೇಶಕ ಸುಧಾಕರ ಪಿ, ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಉಪ್ಪುಂದ ಉಪಸ್ಥಿತರಿದ್ದರು.

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಸದಸ್ಯ ಜಯಾನಂದ ಹೋಬಳಿದಾರ್ ಅವರನ್ನು ಸನ್ಮಾನಿಸಲಾಯಿತು. ಸುರಭಿ ಭರತನಾಟ್ಯ ಗುರುಗಳಾದ ವಿದ್ವಾನ್‌ ಚಂದ್ರಶೇಖರ ನಾವಡ ಸುರತ್ಕಲ್‌ ಅವರಿಗೆ ಗುರುವಂದನೆ, ಸುರಭಿ ನಿರ್ದೇಶಕರಾದ ಗಣಪತಿ ಹೋಬಳಿದಾರ್‌ ಅವರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.

    ಸುರಭಿ ಬೈಂದೂರು ಅಧ್ಯಕ್ಷ ಆನಂದ ಮದ್ದೋಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ನಿಕಟಪೂರ್ವಾಧ್ಯಕ್ಷ ನಾಗರಾಜ ಪಿ. ಯಡ್ತರೆ ಸ್ವಾಗತಿಸಿ, ಉಪಾಧ್ಯಕ್ಷ ಲಕ್ಷ್ಮಣ ಕೊರಗ ಬೈಂದೂರು ವಂದಿಸಿದರು. ಸುರಭಿ ಕಾರ್ಯಕಾರಿ ಸಮಿತಿ ಸದಸ್ಯರಾದ ಮಂಜುನಾಥ ದೇವಾಡಿಗ ಹಾಗೂ ಗಣೇಶ್‌ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸುರಭಿ ವಿದ್ಯಾರ್ಥಿಗಳಿಂದ ವಿದ್ವಾನ್‌ ಚಂದ್ರಶೇಖರ ನಾವಡ ಸುರತ್ಕನೃತ್ಯ ನೃತ್ಯಾಂಕುರ ಭರತನಾಟ್ಯ ಹಾಗೂ ದಶಾವತಾರ ನೃತ್ಯ ರೂಪಕ ನಡೆಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ

    19/12/2025

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.