Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕರಾವಳಿ, ಮಲೆನಾಡಿನಲ್ಲಿ ಕುಖ್ಯಾತರಾಗಿದ್ದ ಕಳ್ಳಬೇಟೆಗಾರರ ಬಂಧನ
    ಉಡುಪಿ ಜಿಲ್ಲೆ

    ಕರಾವಳಿ, ಮಲೆನಾಡಿನಲ್ಲಿ ಕುಖ್ಯಾತರಾಗಿದ್ದ ಕಳ್ಳಬೇಟೆಗಾರರ ಬಂಧನ

    Updated:14/02/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಬ್ರಹ್ಮಾವರ ತಾಲ್ಲೂಕಿನ ವಂಡಾರು ಗ್ರಾಮದ ಬೋರ್ಡ್‌ ಗಲ್ಲು ಎಂಬಲ್ಲಿ ವನ್ಯಪ್ರಾಣಿಗಳ ಹತ್ಯೆಗೈಯ್ಯಲು ವಂಡಾರು ಬ್ಲಾಕ್ ಅರಣ್ಯ ಪ್ರದೇಶದೊಳಗೆ ರಾತ್ರಿ ವೇಳೆ ಬಂದ ಭಟ್ಕಳ – ಶಿರೂರು ಮೂಲದ ಮೂವರು ವನ್ಯಜೀವಿ ಹಂತಕ ಆರೋಪಿಗಳನ್ನು ಶಂಕರನಾರಾಯಣ ವಲಯ ಅರಣ್ಯ ಅಧಿಕಾರಿಗಳ ತಂಡ  ಬಂಧಿಸಿದೆ. ಭಟ್ಕಳದ ಮೊಹಮ್ಮದ್ ಅಶ್ರಫ್ ಯಾನೆ ಮಾವಿಯಾ, ಶಿರೂರಿನವರಾದ ವಾಸೀಂ ಅಕ್ರಂ, ಆಲಿ ಬಾವು ಯಾಸಿನ್ ಬಂಧಿತರು.

    Click Here

    Call us

    Click Here

    ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಆರೋಪಿಗಳಿಂದ ಒಂದು ಬಂದೂಕು, 11 ಕಾಡತೂಸು, 4 ಚಾಕುಗಳು, 01 ಮಚ್ಚು, 01 ಟಾರ್ಚ್, 03 ಮೊಬೈಲುಗಳು ಹಾಗೂ ಸಂಚಾರಕ್ಕೆ ಬಳಸಿದ ಒಂದು ಆಟೋ ರಿಕ್ಷಾವನ್ನು ವಶ ಪಡೆಯಲಾಗಿದೆ.

    ಸೆಪ್ಟೆಂಬರ್ ತಿಂಗಳಲ್ಲಿ ಅರೋಪಿಗಳು ಶಂಕರನಾರಾಯಣ ಅರಣ್ಯ ವಲಯದ ವಂಡಾರಿನ ಬಳಿ ಕಾಡು ಪ್ರಾಣಿಯನ್ನು ಹತ್ಯೆಗೈದು, ಕಾಡು ಪ್ರದೇಶದಲ್ಲಿ ಕರುಳನ್ನು ಎಸೆದಿದ್ದರು. ಇದರ ಸ್ಯಾಂಪಲ್  ಭಾರತೀಯ ವೈಡ್ ಲೈಫ್ ಸಂಸ್ಥೆಯಲ್ಲಿ ಪರೀಕ್ಷೆ ನಡೆಸಲಾಗಿದ್ದು, ಇದು ಕಾಡುಕೋಣ ಎಂಬುದಾಗಿ ದೃಢಪಟ್ಟಿರುತ್ತದೆ. ವನ್ಯಪ್ರಾಣಿ ಹತ್ಯೆ ಮಾಡಲಾದ ಸ್ಥಳದಲ್ಲಿ ಈ ಆರೋಪಿಗಳ ಪೋನ್ ಲೋಕೇಶನ್ ಪತ್ತೆಯಾಗಿತ್ತು. ಅಲ್ಲಿಂದ ಈ ಆರೋಪಿಗಳಿಗೆ ಬಂಧನಕ್ಕೆ ಬಲೆ ಬೀಸಲಾಗಿತ್ತು. ಈ ಹವ್ಯಾಸಿ ವನ್ಯಜೀವಿ ಬೇಟೆಗಾರರಾಗಿದ್ದು ಉಡುಪಿ, ಶಿವಮೊಗ್ಗ ಸೇರಿ  ಬೇರೆ ಬೇರೆ ವಲಯಗಳಲ್ಲಿ ಕಾಡುಪ್ರಾಣಿಗಳನ್ನು ಬೇಟೆಯಾಡಿದ್ದಾರೆ.

    ಶಿವಮೊಗ ಜಿಲ್ಲೆ ಸಾಗರ ವಿಭಾಗದ ನಗರ ವಲಯದಲ್ಲಿ ವನ್ಯಜೀವಿ  ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದಾರೆ‌. ಖಚಿತ ಮಾಹಿತಿ ಮೇರೆಗೆ ಸರಣಿ ಕಳ್ಳಬೇಟೆಯಲ್ಲಿ ಪಾಲ್ಗೊಂಡಿದ್ದ ಆರೋಪಿಗಳನ್ನು  ಅರಣ್ಯ ಪ್ರದೇಶದ ಒಳಗೆ ರೆಡ್ ಹ್ಯಾಂಡ್ ಆಗಿ ಬಂಧಿಸುವಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.

    ಕಾರ್ಯಾಚರಣೆಯು ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯವರಾದ ಗಣಪತಿ ಕೆ. ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಪ್ರಕಾಶ ಪೂಜಾರಿ, ಸಿದ್ಧಾಪುರ ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ಜಿ.ಡಿ. ದಿನೇಶ ಅವರ ಮಾರ್ಗದರ್ಶನದಲ್ಲಿ  ನಡೆದಿದೆ.

    Click here

    Click here

    Click here

    Call us

    Call us

    ಈ‌ ಕಾರ್ಯಾಚರಣೆಯಲ್ಲಿ ಶಂಕರನಾರಾಯಣ ವಲಯ ಅರಣ್ಯಾಧಿಕಾರಿ ಜ್ಯೋತಿ ‌ಕೆ.ಸಿ. ಹಾಗೂ ವಲಯದ ಸಿಬ್ಬಂದಿಗಳು, ಬೈಂದೂರು ವಲಯದ ಅರಣ್ಯಾಧಿಕಾರಿ ಸಂದೇಶ್ ಕುಮಾರ್ ಹಾಗೂ ವಲಯದ ಸಿಬ್ಬಂದಿಗಳು, ಸಿದ್ಧಾಪುರ ವಲಯ ಅರಣ್ಯಾಧಿಕಾರಿ ಗಣಪತಿ ವಿ. ನಾಯ್ಕ್ ಹಾಗೂ ಸಿಬ್ಬಂದಿಗಳು, ಕುಂದಾಪುರ ವಲಯದ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    06/12/2025

    ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್

    06/12/2025

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಚಾಂಪಿಯನ್‌ಶಿಪ್ ರೆಕಾರ್ಡ್ ಕ್ರಿಯೇಟ್‌ಗೈದ ಮಂಜುನಾಥ ಅವರಿಗೆ ಪ್ರಶಸ್ತಿ ಪ್ರದಾನ
    • ಕುಂದಾಪುರದ ರಚಿತಾಗೆ ಕರ್ನಾಟಕ 19 ವರ್ಷದೊಳಗಿನ ಮಹಿಳಾ ಏಕದಿನ ಕ್ರಿಕೆಟ್ ಟೂರ್ನಿ ನಾಯಕತ್ವ
    • ಕುಂದಾಪುರ: ಡಿ.15ರಿಂದ ಅಣಬೆ ಮತ್ತು ಜೇನು ಕೃಷಿ ತರಬೇತಿ
    • ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ವರ್ಷದ ಪರಿನಿರ್ವಾಣ ದಿನ
    • ಸ್ವಚ್ಛತೆ ಎಂಬುವುದು ಮನೆಮನಗಳನ್ನು ತಲುಪಲಿ: ಸಂಸದ ಕೋಟ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d