ಕರ್ನಾಟಕ ಇತಿಹಾಸ ಪರಿಷತ್ತು ಮಹಾ ಅಧಿವೇಶನದ ಸರ್ವಾಧ್ಯಕ್ಷರಾಗಿ ಡಾ. ಕೇಶವನ್ ವೆಳುತ್ತಾಟ್

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಭಂಡಾರ್‌ಕಾರ್ಸ್‌ ಕಾಲೇಜಿನಲ್ಲಿ ಫೆ. 21ರಿಂದ ಮೂರು ದಿನಗಳ ಕಾಲ ನಡೆಯುವ “ಕರ್ನಾಟಕ ಇತಿಹಾಸ ಪರಿಷತ್ತು 35ನೇ ವಾರ್ಷಿಕ ಮಹಾ ಅಧಿವೇಶನ”ದ ಸರ್ವಾಧ್ಯಕ್ಷರಾಗಿ ಭಾರತೀಯ ಇತಿಹಾಸ ತಜ್ಞ, ಶಿಕ್ಷಣ ತಜ್ಞ, ದೆಹಲಿಯ ಕೇಶವನ್ ವೆಳುತ್ತಾಟ್ ಅವರನ್ನುಆಯ್ಕೆ ಮಾಡಲಾಗಿದೆ.

Call us

Click Here

ಅವರು ಕೇರಳ ಮೂಲದವರಾಗಿದ್ದು ಮಧ್ಯಯುಗದ ದಕ್ಷಿಣ ಭಾರತೀಯ ಇತಿಹಾಸದಲ್ಲಿ ವಿಶೇಷ ಪರಿಣಿತರು. ಶಾಸನ ತಜ್ಞರು, ಸಂಸ್ಕೃತ, ತಮಿಳು, ಕನ್ನಡ, ಮಲೆಯಾಳಂ ಭಾಷೆ ಅರಿತಿರುವ. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಇತಿಹಾಸ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿದ್ದರು. ಆನಂತರ ದೆಹಲಿ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿದ್ದರು.

ದೇಶದ ಹಲವು ವಿಶ್ವ ವಿದ್ಯಾನಿಲಯಗಳಲ್ಲಿ ಸಂದರ್ಶನ ಪ್ರಾಧ್ಯಾಪಕರಾಗಿದ್ದಾರೆ. ಹಲವು ಗ್ರಂಥಗಳನ್ನು ಬರೆದಿದ್ದಾರೆ. ಕ್ಯಾಲಿಕಟ್ ವಿ.ವಿ. ಯಿಂದ  ಸ್ನಾತ್ತಕೋತ್ತರ ಪದವಿ ಹಾಗೂ ಡಾಕ್ಟರೇಟ್, ಜವಹರಲಾಲ್ ನೆಹರು ವಿ.ವಿ. ಯಿಂದ ಎಂ.ಫಿಲ್. ಪದವಿ ಪಡೆದ ಅವರು ದೇಶದ ಶ್ರೇಷ್ಠ ಇತಿಹಾಸ ಹಾಗೂ ಶಿಕ್ಷಣ ತಜ್ಞ, ಶಾಸನತಜ್ಞರಲ್ಲಿ ಪ್ರಮುಖರಾಗಿದ್ದಾರೆ.

Leave a Reply