ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಶಿರೂರು ಗ್ರಾಮದ ನ್ಯಾಯಬೆಲೆ ಅಂಗಡಿಗಳಲ್ಲಿ ಮಧ್ಯಾಹ್ನ ಪಡಿತರ ವಿತರಣೆ ಮಾಡದೆ ಸಾರ್ವಜನಿಕರಿಗೆ ತೊಂದರೆ ಉಂಟಾಗಿದ್ದು ಸರ್ಕಾರ ನಿಗದಿಪಡಿಸಿದಂತೆ ಬೆಳಿಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೂ ಪಡಿತರ ವಿತರಿಸುವಂತೆ ಮತ್ತು ನ್ಯಾಯಬೆಲೆ ಅಂಗಡಿಗಳಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಗಳು ಆಗದಂತೆ ತಡೆಯುವಂತೆ ಕೋರಿ ಶಿರೂರು ಗ್ರಾಮದ ಆಹಾರ ಖಾತ್ರಿ ಸಮಿತಿಯ ಅಧ್ಯಕ್ಷರು ಹಾಗು ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ಯುವ ಸಾಮಾಜಿಕ ಹೋರಾಟಗಾರರಾದ ರಾಘು ಶಿರೂರು, ಯೋಗೇಶ್ ಶಿರೂರು, ರಾಮಚಂದ್ರ ಆಚಾರಿ, ಸಾಯಿನಾಥ ಜೋಗುರು, ರವಿ ಹಕ್ಲರ್ ಮುಂತಾದವರು ಉಪಸ್ಥಿತರಿದ್ದರು.