Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ರಂಜಿತ್ ಕುಮಾರ್ ಶೆಟ್ಟಿ ಅನುಭವದ ಬರವಣಿಗೆ ಹೃದಯಕ್ಕೆ ತಟ್ಟುತ್ತದೆ: ಡಾ. ಗಿರಿಜಾ ರಾವ್
    ಊರ್ಮನೆ ಸಮಾಚಾರ

    ಡಾ. ರಂಜಿತ್ ಕುಮಾರ್ ಶೆಟ್ಟಿ ಅನುಭವದ ಬರವಣಿಗೆ ಹೃದಯಕ್ಕೆ ತಟ್ಟುತ್ತದೆ: ಡಾ. ಗಿರಿಜಾ ರಾವ್

    Updated:04/03/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಜೀವನದಲ್ಲಿ ಪಡೆದ ಅನುಭವವನ್ನೇ ಸ್ವಾರಸ್ಯಕರ ಶೈಲಿಯಲ್ಲಿ ಬರೆಯುವುದರಿಂದ ಡಾ. ರಂಜಿತ್ ಕುಮಾರ್ ಶೆಟ್ಟಿ ಅವರ ಬರವಣಿಗೆ ಇಷ್ಟವಾಗುತ್ತದೆ . ಹಾಗಾಗಿ ಅವರ ನೆನಪಿನಾಳದಲ್ಲಿ, 20 ಕಥೆಗಳು, ಜಯಂತಣ್ಣನಿಗಾಗಿ ಕಾದಂಬರಿ ಓದುಗರನ್ನು ತಲುಪಿತು. ಹೊಸತನದ ಕಥೆಯೊಂದಿಗೆ ಹೀಗೂ ಕಾದಂಬರಿ ಬರೆಯಬಹುದು ಎಂದು ಜಾಲಿ ಮತ್ತು ಅಪ್ಪು ಕೃತಿಯಿಂದ ತೋರಿಸಿ ಕೊಟ್ಟಿದ್ದಾರೆ ಎಂದು ಖ್ಯಾತ ಪ್ರಸೂತಿ ತಜ್ಞ ಮಣಿಪಾಲದ ಸೋನಿಯಾ ಆಸ್ಪತ್ರೆಯ ಡಾ. ಗಿರಿಜಾ ರಾವ್ ಹೇಳಿದರು.

    Click Here

    Call us

    Click Here

    ಅವರು ಭಂಡಾರ್‌ಕಾರ್ಸ್‌ ಕಾಲೇಜಿನ ಆರ್. ಎನ್. ಶೆಟ್ಟಿ ಸಭಾಂಗಣದಲ್ಲಿ ನಡೆದ ಡಾ. ರಂಜಿತ್ ಕುಮಾರ್ ಶೆಟ್ಟಿ ಅವರ ಮೂರು ಕೃತಿಗಳ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಸಂವಹನದ ಕೊರತೆ ಮತ್ತು ಪರಸ್ಪರ ಅಪನಂಬಿಕೆ ಡಾಕ್ಟರು ಮತ್ತು ರೋಗಿಗಳ ಸಂಬಂಧ ಕೆಡಲು ಕಾರಣ. ಜನರು ವೈದ್ಯರ ಮೇಲೆ ವಿಶ್ವಾಸವಿಡಬೇಕು. ಗೌರವದ ನಡವಳಿಕೆ ಇರಬೇಕು. ವೈದ್ಯರ ಸೇವೆಯ ವಿಷಯದಲ್ಲಿ ಎಂದೂ ಅಪ್ರಾಮಾಣಿಕರಾಗಿರಬಾರದು. ವೈದ್ಯಕೀಯ ಸೇವೆಯ ಒತ್ತಡದಲ್ಲಿ ರೋಗಿಗಳ ಪೋಷಕರಿಂದ ಬೆಂಬಲವನ್ನು ಪ್ರಾಮಾಣಿಕ ವೈದ್ಯರು ನಿರೀಕ್ಷಿಸುತ್ತಾರೆ. ಎಂದು ಅವರು ಹೇಳಿ ಡಾ. ರಂಜಿತರ ಕೃತಿಗಳು ವೈದ್ಯಲೋಕದ ಚಿತ್ರಣ ತೆರೆದಿಟ್ಟಿದೆ ಎಂದರು.

    ಡಾ| ರಂಜಿತ್ ಕುಮಾರ್ ಅವರ ಜನಪ್ರಿಯ ಕಥೆಗಳ ಗುಚ್ಚ 10+10=20 ಕಥೆಗಳು ಕೃತಿಯನ್ನು ಓಕವುಡ್ ಶಿಕ್ಷಣ ಸಂಸ್ಥೆಯ ಆಡಳಿತ ನಿರ್ದೇಶಕರಾದ ನೀತಾ ಎ. ಶೆಟ್ಟಿ ಬಿಡುಗಡೆಗೊಳಿಸಿ ಮಾತನಾಡಿ, “ಡಾ. ರಂಜಿತ್ ಕುಮಾರ್ ಅವರ ಪ್ರತಿಯೊಂದು ಕಥೆಗಳು ಬೇರೆ ವಿದ್ಯಮಾನಗಳನ್ನು ವಿವರಿಸುವುದರಿಂದ ಅವರ ಎಲ್ಲ ಬರಹಗಳು ಇಷ್ಟವಾಗುತ್ತವೆ. ಅವರ ಜೀವನದ ಅನುಭವಗಳ ವಿಷಯವೇ ಓದುವುದರಿಂದ ನಮಗೆ ಸಮಾಜದ ಎಲ್ಲಾ ಮುಖಗಳ ಪರಿಚಯವಾಗುತ್ತದೆ. ಒಂದು ಶಿಕ್ಷಣ ಸಂಸ್ಥೆಯನ್ನು ನಡೆಸುವ ನಾವು ಪೋಷಕರಿಗೆ ಮಕ್ಕಳ ವ್ಯಕ್ತಿತ್ವ ವಿಕಸನವಾಗುವಂತಹ ಆಸಕ್ತಿಯನ್ನು ಮಕ್ಕಳಲ್ಲಿ ಬೆಳೆಸಿ ಎನ್ನುತ್ತೇವೆ” ಎಂದು ಅವರು ಡಾ. ರಂಜಿತ್ ಕುಮಾರ್ ಶೆಟ್ಟಿ ಅವರನ್ನು ಅಭಿನಂದಿಸಿದರು.

    ನೆನಪಿನಾಳದಿಂದ ಕೃತಿಯನ್ನು ಹಿರಿಯ ಜ್ಯೋತಿಷಿ, ಸಾಮಾಜಿಕ ಧುರೀಣ, ಖ್ಯಾತ ಚಿತ್ರ ನಿರ್ದೇಶಕ ರಿಷಬ್ ಶೆಟ್ಟಿ ಅವರ ತಂದೆ ಭಾಸ್ಕರ ಶೆಟ್ಟಿ ಬಿಡುಗಡೆಗೊಳಿಸಿದರು.

    ಮೂರು ಕೃತಿಗಳ ಬಿಡುಗಡೆ ಕಾರ್ಯಕ್ರಮದಲ್ಲಿ ರೂಪಕಲಾ ಮೂರು ಮುತ್ತು ಕಲಾವಿದರಾದ ಸತೀಶ ಪೈ ಮತ್ತು ಸಂತೋಷ ಪೈ ಅವರ ಪ್ರಹಸನ ಬಹಳ ಖುಷಿ ನೀಡಿತು.

    Click here

    Click here

    Click here

    Call us

    Call us

    ಲೇಖಕಿ ಕಾತ್ಯಾಯಿನಿ ಕುಂಜಿಬೆಟ್ಟು ಮೂರು ಕೃತಿಗಳ ಬಗ್ಗೆ ಮಾತನಾಡಿ, ಮೂರು ಕೃತಿಗಳು ಸಾಹಿತ್ಯ ಲೋಕಕ್ಕೆ ಅಮೂಲ್ಯ ಕೊಡುಗೆ ಎಂದರು.

    ʼಕುಂದಪ್ರಭ’ ಸಂಸ್ಥೆಯ ಅಧ್ಯಕ್ಷ ಯು. ಎಸ್. ಶೆಣೈ ಸ್ವಾಗತಿಸಿದರು. ಡಾ. ರಂಜಿತ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿ, ’ಬದುಕಿನಲ್ಲಿ ಅವರಿಗೆ ದೊರೆತ ಜೀವನಾನುಭವದ ಪಾಠʼ ವಿವರಿಸಿದರು. ಡಾ. ರಂಜಿತ್ ಕುಮಾರ್ ಶೆಟ್ಟಿ ಅವರ ಐದು ದಶಕಗಳ ಹಿಂದಿನ ವೈದ್ಯ ಸಹಪಾಠಿಗಳು ಅವರನ್ನು ಸನ್ಮಾನಿಸಿ ಗೌರವಿಸಿದರು. ಡಾ. ಗಣೇಶ ಪೈ ಮಣಿಪಾಲ ಶುಭ ಹಾರೈಸಿದರು.

    ಭಂಡಾರ್‌ಕಾ‍ರ್ಸ್‌ ಕಾಲೇಜಿನ ವಿಶ್ವಸ್ಥರು, ಪ್ರಾಂಶುಪಾಲರು, ಕಾಲೇಜಿನ ಆಡಳಿತ ಮಂಡಳಿ ಸದಸ್ಯರೂ ಆಗಿರುವ ಡಾ. ರಂಜಿತ್ ಕುಮಾರ್ ಶೆಟ್ಟಿ ಅವರನ್ನು ಗೌರವಿಸಿದರು. ಕೆ. ಶಾಂತಾರಾಮ ಪ್ರಭು, ಪ್ರಕಾಶ ಸೋನ್ಸ್ ಕಾಲೇಜಿನ ಪರವಾಗಿ ಶುಭ ಹಾರೈಸಿದರು. ವೈದ್ಯರಾದ ಡಾ. ಪ್ರಕಾಶ ಕಾಮತ್, ಡಾ. ಸಂಧ್ಯಾ ಅಡಿಗ, ಡಾ. ವಿವೇಕ ಶೆಟ್ಟಿ, ಡಾ. ರಮೇಶ ಶೆಟ್ಟಿ ಹಾಗೂ ಅನಿಕಾ, ಶಿಪ್ರ ಚಾತ್ರ, ಪಾರ್ವತಿ ಶುಶ್ರಾವ್ಯವಾದ ಗೀತೆಗಳನ್ನು ಹಾಡಿದರು. ಜ್ಯೋತಿ ಸಾಲಿಗ್ರಾಮ ಹಾಗೂ ರೋಹಿಣಿ ಶರಣ್ ಸಂವಹನ ಕಾರ್ಯಕ್ರಮ ನಡೆಸಿಕೊಟ್ಟರು.

    ತೆಂಕ ನಿಡಿಯೂರು ಪ. ಪೂ. ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕರಬ ಕಾರ್ಯಕ್ರಮ ನಿರೂಪಿಸಿದರು. ಬೀನಾ ರಂಜಿತ್ ಕುಮಾರ್ ಶೆಟ್ಟಿ ಧನ್ಯವಾದ ಅರ್ಪಿಸಿದರು. ಸಭಾಂಗಣದಲ್ಲಿ ತುಂಬಿದ ಗಣ್ಯರು ವೈಶಿಷ್ಟ್ಯಪೂರ್ಣವಾದ ಪುಸ್ತಕ ಬಿಡುಗಡೆ ಸಮಾರಂಭವನ್ನು ಶ್ಲಾಘಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.