ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ರೈಲ್ವೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬಂದಿ ಕರ್ತವ್ಯ ಮುಗಿಸಿ ಬೈಕ್ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಬೈಕ್ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಚರಂಡಿಗೆ ಬಿದ್ದ ಪರಿಣಾಮ ಅವರು ಸಾವನ್ನಪ್ಪಿದ ಘಟನೆ ಗುರುವಾರ ಸಂಭವಿಸಿದೆ. ಬೈಂದೂರು ಬಾಡ ನಿವಾಸಿ ಸಂಜಯ ಕುಮಾರ (52) ಮೃತ ದುರ್ದೈವಿ.
ಕೊಂಕಣ ರೈಲ್ವೆಯಲ್ಲಿ ಇಂಜಿನಿಯರಿಂಗ್ ವಿಭಾಗದಲ್ಲಿ ಟ್ರಾಕ್ಮ್ಯಾನ್ ಕಾರ್ಯನಿರ್ವಹಿಸುತ್ತಿದ್ದು ಇವರು ರಾತ್ರಿ ಪಾಳಿ ಡ್ಯೂಟಿ ಮುಗಿಸಿ ಬೆಳಗ್ಗೆ 7 ರಿಂದ 7:30 ಸುಮಾರಿಗೆ ಭಟ್ಕಳ ದಿಂದ ಬೈಂದೂರು ಕಡೆಗೆ ತಮ್ಮ ಬೈಕ್ ಮೇಲೆ ತೆರಳುವ ಸಂದರ್ಭದಲ್ಲಿ ಘಟನೆ ನಡೆದಿದೆ. ಬೆಳಕೆ ಸೊಸೈಟಿಯ ಹತ್ತಿರದ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಆಕಸ್ಮಿಕವಾಗಿ ಬೈಕ್ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿ ಇದ್ದ ಚರಂಡಿಯಲ್ಲಿ ಬಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲಿ ಮೃತಪಟ್ಟಿದ್ದರು.
ಈ ಬಗ್ಗೆ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ರೈಲ್ವೇ ಜೂನಿಯರ್ ಇಂಜಿನಿಯರ ಆದ ಪಾಯಸ್ ದೂರು ನೀಡಿದ್ದಾರೆ. ಗ್ರಾಮೀಣ ಠಾಣೆ ಪಿ.ಎಸ್.ಐ ರನ್ ಗೌಡ್ ಸ್ಥಳಕ್ಕೆ ತೆರಳಿ ಪರಿಶೀಲಿಸಿ ದೂರನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.










