Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆ
    ಉಡುಪಿ ಜಿಲ್ಲೆ

    ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯ ಗ್ರಾಮೀಣ ಭಾಗದ ಪ್ರತಿಯೊಂದು ಮನೆ ಮನೆಗೂ ನಲ್ಲಿ ನೀರು ಪೂರೈಸುವ ಜಲ್ ಜೀವನ ಮಿಷನ್ ಕಾಮಗಾರಿಯು ಈಗಾಗಲೇ ಶೇ. 92 ಪೂರ್ಣಗೊಂಡಿದೆ. ಬಾಕಿ ಉಳಿದ ಕಾಮಗರಿಗಳನ್ನು ಆದ್ಯತೆಯ ಮೇಲೆ ತ್ವರಿತವಾಗಿ ಪೂರ್ಣಗೊಳಿಸಬೇಕು. ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಜಾಗ್ರತಿ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರತೀಕ್ ಬಾಯಲ್ ಅಭಿಯಂತರರಿಗೆ ಸೂಚನೆ ನೀಡಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಜಿಲ್ಲೆಯಲ್ಲಿ ಗ್ರಾಮೀಣ ಭಾಗದ 247000 ಮನೆಗಳಿಗೆ ಕುಡಿಯುವ ನೀರಿನ ನಳ ಸಂಪರ್ಕವನ್ನು ಕಲ್ಪಿಸಲು ಜಲ ಜೀವನ ಅಡಿಯಲ್ಲಿ ಗುರಿ ಹೊಂದಲಾಗಿದ್ದು, ಇವರೆಗೆ 2,14,000 ಮನೆಗಳಿಗೆ ನಳ ಸೌಲಭ್ಯವನ್ನು ಒದಗಿಸಲಾಗಿದೆ. ಬಾಕಿ ಉಳಿದ ಮನೆಗಳಿಗೆ ನಳ ಸೌಲಭ್ಯ ಕಲ್ಪಿಸುವ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಲ ಜೀವನ್ ಮಿಷನ್ ಯೋಜನೆಯಡಿ 525 ಕಾಮಗಾರಿಗಳನ್ನು 687.66 ಕೋ. ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿದೆ. ಈಗಾಗಲೇ 484 ಕಾಮಗಾರಿಗಳು ಪೂರ್ಣಗೊಂಡಿವೆ. ಬಾಕಿ ಉಳಿದ 41 ಕಾಮಗಾರಿಗಳು ಪ್ರಗತಿಯಲ್ಲಿವೆ. ಈಗಾಗಲೇ 501.40 ಕೋಟಿ ರೂ. ವಹಿಸಲಾಗಿದೆ ಎಂದರು.

    ಈಗಾಗಲೇ ಕಳೆದ ಒಂದು ವರ್ಷದಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ ಕೈಗೊಳ್ಳಲು ಯಾವುದೇ ಜಾಗದ ಸಮಸ್ಯೆಗಳು ಇಲ್ಲ. ಆದರೂ ಸಹ ಕಾಮಗರಿ ಪೂರ್ಣಗೊಂಡಿಲ್ಲ. ಕೆಲವು ತಾಂತ್ರಿಕ ಕಾರಣಗಳನ್ನು ಹೇಳುತ್ತಾರೆ. ಇದು ಸರಿಯಲ್ಲ. ನಿಗದಿತ ಕಾಲಾವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸದೇ ಇದ್ದಲ್ಲಿ ಗುತ್ತಿಗೆದಾರರಿಗೆ ದಂಡ ಹಾಕಬೇಕು ಎಂದರು.

    Click here

    Click here

    Click here

    Call us

    Call us

    ಕುಡಿಯುವ ನೀರನ್ನು ಒದಗಿಸುವ ಕೆಲವು ನಳ ಸಂಪರ್ಕದ ಪೈಪ್‌ಲೈನ್ ಹಾಕುವ ಕಾಮಗಾರಿ ಪೂರ್ಣಗೊಂಡಿದ್ದರು ಸಹ ನೀರಿನ ಮೂಲಗಳಿಲ್ಲದೇ ನೀರಿನ್ನು ಒದಗಿಸಲು ಆಗುತ್ತಿಲ್ಲ. ಸಮೀಪದಲ್ಲಿ ನೀರಿನ ಮೂಲ ವ್ಯವಸ್ಥೆಯನ್ನು ನೋಡಿ ಅವುಗಳಿಗೆ ನೀರು ಒದಗಿಸಬೇಕು. ಹೊಸದಾಗಿ ಬೋರ್ವೆಲ್‌ಗಳನ್ನು ಅಳವಡಿಸುವಾಗ ಅವುಗಳಿಗೆ ಮಳೆ ನೀರಿನ ಕೊಯ್ಲು ಕಾಮಗಾರಿಯನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದ ಅವರು, ಈಗಾಗಲೇ ಜಿಲ್ಲೆಯ ಗ್ರಾಮೀಣ ಭಾಗದಲ್ಲಿರುವ ಸರಕಾರದ ಬೋರ್ವೆಲ್‌ಗಳಿಗೆ ಮಳೆ ನೀರಿನ ಕೊಯ್ಲು ಅಳವಡಿಸುರುವ ಕುರಿತ ಮಾಹಿತಿಯನ್ನು ಕ್ರೋಢಿಕರಿಸಿ ನೀಡಬೇಕು ಎಂದರು.

    ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯು ಯಾವುದೇ ಒಂದು ಗ್ರಾಮಗಳಲ್ಲಿ ಆಗದಂತೆ ಎಚ್ಚರವಹಿಸಬೇಕು. ಒಂದೊಮ್ಮೆ ನೀರಿನ ಸರಬರಾಜಿನ ಸಮಸ್ಯೆ ಉಂಟಾದಲ್ಲಿ ಸಮೀಪದ ಖಾಸಗಿ ಬೋರೆವೆಲ್ ಮಾಲೀಕರರಿಂದ ಪಡೆಯಲು ಅನುಕೂಲವಾಗುವಂತೆ ಗುರುತಿಸಿ, ಒಪ್ಪಂದ ಮಾಡಿಕೊಂಡು ಸಮಸ್ಯೆಯಾದಲ್ಲಿ ನೀರು ಸರಬರಾಜು ಮಾಡಲು ಮುಂದಾಗಬೇಕು ಎಂದು ಸೂಚನೆ ನೀಡಿದರು.

    ಈಗಾಗಲೇ ಕೆಲವು ಕುಡಿಯುವ ನೀರು ಸೌಲಭ್ಯ ಒದಗಿಸುವ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಕಳೆದ ಐದು ವರ್ಷಗಳಿಂದ ಕೈಗೊಂಡಿರುವ ಕಾಮಗಾರಿಗಳ ಮಾಹಿತಿಗಳನ್ನು ಕಲೆಹಾಕಿ ಓವರ್ ಲ್ಯಾಪ್ ಅದ ಬಗ್ಗೆ ಎಚ್ಚರವಹಿಸಬೇಕು ಎಂದರು.

    ಜಿಲ್ಲೆಯಾದ್ಯಂತ ಕುಡಿಯಲು ಯೋಗ್ಯವಾಗಿರುವ ಸ್ವಚ್ಛ ನೀರನ್ನು ಸರಬರಾಜು ಮಾಡಬೇಕು. ಎಲ್ಲಿಯೂ ಸಹ ಕಲುಷಿತ ನೀರು ಸರಬರಾಜು ಆಗದಂತೆ ಎಲ್ಲಾ ರೀತಿಯ ಎಚ್ಚರಿಕ ಕ್ರಮಗಳನ್ನು ಕೈಗೊಳ್ಳಬೇಕು ಎಂದ ಅವರೂ, ಕಳೆದ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದ ಗ್ರಾಮಗಳನ್ನು ಗುರುತಿಸಿ, ನೀರಿನ ಸಮಸ್ಯೆ ಉಂಟಾಗದಂತೆ ಯೋಜನೆ ಸಿದ್ದಗೊಳಿಸಬೇಕು ಎಂದರು.

    ಸಭೆಯಲ್ಲಿ ಪೌರಯುಕ್ತ ಡಾ. ಉದಯ್ ಕುಮಾರ್ ಶೆಟ್ಟಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಉದಯ್ ಕುಮಾರ್, ಸಾಮಾಜಿಕ ಅರಣ್ಯ ವಿಭಾಗದ ಉಪ ಸಂರಕ್ಷಣಾ ಅಧಿಕಾರಿ ರವೀಂದ್ರ ಕುಮಾರ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ್ ಉಡುಪ, ಅಂತರ್ಜಲ ನಿರ್ದೇಶನಲಯದ ಹಿರಿಯ ಭೂ ವಿಜ್ಞಾನಿ ದಿನಕರ ಶೆಟ್ಟಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    06/12/2025

    ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್

    06/12/2025

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಚಾಂಪಿಯನ್‌ಶಿಪ್ ರೆಕಾರ್ಡ್ ಕ್ರಿಯೇಟ್‌ಗೈದ ಮಂಜುನಾಥ ಅವರಿಗೆ ಪ್ರಶಸ್ತಿ ಪ್ರದಾನ
    • ಕುಂದಾಪುರದ ರಚಿತಾಗೆ ಕರ್ನಾಟಕ 19 ವರ್ಷದೊಳಗಿನ ಮಹಿಳಾ ಏಕದಿನ ಕ್ರಿಕೆಟ್ ಟೂರ್ನಿ ನಾಯಕತ್ವ
    • ಕುಂದಾಪುರ: ಡಿ.15ರಿಂದ ಅಣಬೆ ಮತ್ತು ಜೇನು ಕೃಷಿ ತರಬೇತಿ
    • ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ವರ್ಷದ ಪರಿನಿರ್ವಾಣ ದಿನ
    • ಸ್ವಚ್ಛತೆ ಎಂಬುವುದು ಮನೆಮನಗಳನ್ನು ತಲುಪಲಿ: ಸಂಸದ ಕೋಟ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d