ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಮಾ.18ರಂದು ‘ಅಂಗಾರಕ ಸಂಕಷ್ಟಿ’ ನಡೆಯಲಿದೆ.
ಈ ಪ್ರಯುಕ್ತ ಬೆಳಗ್ಗೆ 5 ಗಂಟೆಗೆ ಪ್ರಾತಪೂಜೆ, 11.30ಕ್ಕೆ ಪಂಚಾಮೃತ ಅಭಿಷೇಕ ಪೂರ್ವಕ ಉಪನಿಷತ್ ಕಲಶಾಭಿಷೇಕ, 12 ಗಂಟೆಗೆ ‘ಸಹಸ್ರನಾರಿಕೇಳ ಗಣಹೋಮದ ಪೂರ್ಣಾಹುತಿ’ ಸತ್ಯ ಗಣಪತಿ ವೃತ ಕಲೋಕ್ತ ಪೂಜಾ ಸಹಿತ ಮಹಾಪೂಜೆ ನಡೆಯಲಿದೆ.
ರಾತ್ರಿ 8 ಗಂಟೆಗೆ ಸಾಮೂಹಿಕ ಮಹಾ ರಂಗಪೂಜಾ ಹಾಗೂ ರಜತ ಪಲ್ಲಕ್ಕಿ ಮತ್ತು ರಜತ ರಥೋತ್ಸವ ಜರುಗಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ 5.30ರಿಂದ ಗಣೇಶ್ ಬೀಜಾಡಿ ಹಾಗೂ ಬಳಗದವರಿಂದ ‘ದಾಸ ಗಾನಾಮೃತ’ ನಡೆಯಲಿದೆ ಎಂದು ದೇವಳದ ಆಡಳಿತ ಮೊಕ್ತೇಸರ ಶ್ರೀರಮಣ ಉಪಾಧ್ಯಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಕಾರ್ತಿಕ ಸಂಕಷ್ಟಹರ ಚತುರ್ಥಿ ದೀಪೋತ್ಸವವು ನ.18ರಂದು ನಡೆಯಿತು. ಬೆಳಗ್ಗೆ ಪ್ರಾತಃಪೂಜೆ, ಪಂಚಾಮೃತಾಭಿಷೇಕ ಪೂರ್ವಕ ಉಪನಿಷತ್ ಕಲಶಾಭಿಷೇಕ, 1008 ತೆಂಗಿನಕಾಯಿ ಗಣಪತಿ ಹೋಮ, ಮಧ್ಯಾಹ್ನ ಮಹಾಪೂಜೆ, ಅನ್ನ ಸಂತರ್ಪಣೆ ಹಾಗೂ ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಂಡಿತು. ರಾತ್ರಿ ಮಹಾರಂಗ ಪೂಜೆ, ರಜತ ರಥೋತ್ಸವ, ದೀಪೋತ್ಸವ ಹಾಗೂ ಸುಡುಮದ್ದು ಪ್ರದರ್ಶನ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಧರ್ಮದರ್ಶಿ ಕೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವರ ನೂತನ ದೇವಾಲಯ ಲೋಕಾರ್ಪಣೆ ಬ್ರಹ್ಮಕಲಶೋತ್ಸವ, ಲಕ್ಷಮೋದಕ ಹೋಮ, ಶತ ಚಂಡಿಯಾಗ ಹಾಗೂ 2016 ಕಾಯಿ ಗಣಹೋಮ ಕಾರ್ಯಕ್ರಮವು ಮಾರ್ಚ್ 13ರಿಂದ 17ರವರೆಗೆ ನಡೆಯಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸುವಂತೆ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷೆ ರಮಾದೇವಿ ರಾಮಚಂದ್ರ ಭಟ್ಟ ಕೋರಿಕೊಂಡಿದ್ದಾರೆ. ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ದೇವಸ್ಥಾನದ ಧರ್ಮದರ್ಶಿ ಬಾಲಚಂದ್ರ ಭಟ್ಟ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಜಪ್ತಿ ಇಂಬಾಳಿಯ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದಲ್ಲಿ ನೂತನ ಶಿಲಾಮಯ ಗುಡಿ ಲೋಕಾರ್ಪಣೆ, ಪುನಃ ಪ್ರತಿಷ್ಠಾ ಮತ್ತು ಬ್ರಹ್ಮಕುಂಭಾಭಿಷೇಕ ಮಹೋತ್ಸವವು ಫೆ.28 ರಿಂದ ಮಾ.03 ರ ತನಕ ಸನ್ನಿಧಾನದಲ್ಲಿ ನಡೆಯಲಿದೆ. ಫೆ.28 ಶುಕ್ರವಾರ ಬೆಳಿಗ್ಗೆ 8.00ರಿಂದ ಫಲನ್ಯಾಸ, ಪ್ರಾರ್ಥನೆ, ಗುರುಗಣಪತಿ ಪೂಜೆ, ಸ್ವಸ್ತಿ ಪುಣ್ಯಾಹ ವಾಚನ, ಋತ್ವಿಗರಣ, ಮಧುಪರ್ಕಪೂಜೆ, ವೇದ ಪಾರಾಯಣ ಪ್ರಾರಂಭ, ಮಹಾಗಣಪತಿ ಹೋಮ, ನವಗ್ರಹ ಹೋಮ ಸಂಜೆ 5.00ರಿಂದ ಶಸ್ತ್ರ ಪೂಜೆ,…