ಸಣ್ಣ ಪುಟ್ಟ ಯಶಸ್ಸುಗಳನ್ನೇ ಸಾಧನೆ ಎಂದುಕೊಳ್ಳಬಾರದು: ನರೇಂದ್ರ ಎಸ್. ಗಂಗೊಳ್ಳಿ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ
: ನಾವು ಸಣ್ಣ ಪುಟ್ಟ ಯಶಸ್ಸುಗಳನ್ನೇ ಸಾಧನೆ ಎಂದುಕೊಳ್ಳಬಾರದು. ಭೂತಕಾಲದಲ್ಲಿ ಏನು ಮಾಡಿದೆ ಎನ್ನುವುದಕ್ಕಿಂತ ವರ್ತಮಾನದಲ್ಲಿ ಮತ್ತು ಭವಿಷ್ಯದಲ್ಲಿ ಏನು ಮಾಡುತ್ತಿರುವೆ  ಮತ್ತು ಮಾಡ ಹೊರಟಿದ್ದೇವೆ ಎನ್ನುವುದು ಮುಖ್ಯ ಎಂದು ಲೇಖಕ ಮತ್ತು ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಅಭಿಪ್ರಾಯಪಟ್ಟರು.

Call us

Click Here

ಅವರು ಇತ್ತೀಚಿಗೆ ನಡೆದ ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಅಭಿಶಿಕ್ಷಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನಮ್ಮ ಸಾಮರ್ಥ್ಯಗಳ ಜೊತೆ ನಾವೇ ಸ್ಪರ್ಧಿಸುತ್ತ ಸತತವಾಗಿ ನಮ್ಮ ಕೌಶಲ್ಯವನ್ನು ವ್ಯಕ್ತಿತ್ವವನ್ನು ಅಭಿವೃದ್ಧಿಪಡಿಸಿಕೊಳ್ಳುವುದು ಈ ಸ್ಪರ್ಧಾತ್ಮಕ ಯುಗದಲ್ಲಿ ಅತಿ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಪರಿಶ್ರಮ ಮತ್ತು ಬದ್ಧತೆಯನ್ನು ಹಾಕಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಗುರುಕುಲ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ  ಸುನಿಲ್ ಪ್ಯಾಟ್ರಿಕ್ ಅಧ್ಯಕ್ಷತೆ ವಹಿಸಿದ್ದರು. ಜಂಟಿ ಕಾರ್ಯನಿರ್ವಾಹಕರಾದ ಅನುಪಮಾ ಎಸ್. ಶೆಟ್ಟಿ ಶುಭ ಹಾರೈಸಿದರು. ವಿವಿಧ ವಿಷಯಗಳ ಶಿಕ್ಷಕರು ಸಂಬಂಧಪಟ್ಟ ಪಠ್ಯಗಳನ್ನು ಪರಿಚಯಿಸಿದರು. ಶಿಕ್ಷಕಿ ಸುಮಲತಾ ನಿರೂಪಿಸಿ, ವಂದಿಸಿದರು.

Leave a Reply