Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ್ರಶಸ್ತಿ ಹಿಂದಿರುಗಿಸದವರು ನಿಷ್ಟ್ರೀಯರಲ್ಲ: ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರೀ
    alvas nudisiri

    ಪ್ರಶಸ್ತಿ ಹಿಂದಿರುಗಿಸದವರು ನಿಷ್ಟ್ರೀಯರಲ್ಲ: ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರೀ

    Updated:27/11/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಆಳ್ವಾಸ್ ಮಾಧ್ಯಮ ಕೇಂದ್ರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಾದದಲ್ಲಿ ಡಾ. ಟಿ. ವಿ. ವೆಂಕಟಾಚಲ ಶಾಸ್ತ್ರೀ

    Click Here

    Call us

    Click Here

    ಮೂಡುಬಿದಿರೆ: ದೇಶದಲ್ಲಿ ಅಸಹಿಷ್ಣುತೆ ವಿರೋಧಿಸಿ ಪ್ರಶಸ್ತಿ ಪಾವಾಸು ಮಾಡುತ್ತಿದ್ದಾರೆ. ಆದರೆ ಪ್ರಶಸ್ತಿ ವಾಪಾಸು ಮಾಡದವರೂ ದೊಡ್ಡ ಸಂಖ್ಯೆಯಲ್ಲಿದ್ದಾರೆ. ಆವೇಶದಲ್ಲಿ, ಪೂರ್ವಾಪರವನ್ನಿಟ್ಟುಕೊಂಡು ನಡೆಸುತ್ತಿರುವ ಪ್ರಶಸ್ತಿ ವಾಪಾಸಾತಿ ಸಮೂಹ ಸನ್ನಿಯಾಂತಾಗಿದೆ. ಅರ್ಹತೆ, ಪ್ರೀತಿ, ಗೌರವದಿಂದ ನೀಡುವ ಪ್ರಶಸ್ತಿಯನ್ನು ಹಿಂದಿರುಗಿಸುವ ಪ್ರಕ್ರಿಯೆ ಸರಿಯಲ್ಲ. ಪ್ರಶಸ್ತಿ ಹಿಂದಿರುಗಿಸದೇ ಸುಮ್ಮನಿರುವವರು ನಿಷ್ಕ್ರೀಯರು ಎಂದರ್ಥವಲ್ಲ. ಅವರದ್ದೇ ರೀತಿಯಲ್ಲಿ ತಮ್ಮ ನಿಲುವನ್ನು ಪ್ರಕಟಿಸುತ್ತಿದ್ದಾರೆ.  ಇದು ಆಳ್ವಾಸ್ ನುಡಿಸಿರಿ 2015ರ ಸಮ್ಮೇಳನಾಧ್ಯಕ್ಷ ಡಾ. ಟಿ. ವಿ. ವೆಂಕಟಾಚಲ ಶಾಸ್ತ್ರೀ ಅವರ ಸ್ಪಷ್ಟ ನುಡಿ.

    ಆಳ್ವಾಸ್ ಮಾಧ್ಯಮ ಕೇಂದ್ರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದರು. ಸಾಹಿತ್ಯ ಸಮಾಜವನ್ನು ಸನ್ಯಾರ್ಗದಲ್ಲಿ ಕೊಂಡೊಯ್ಯುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ ಇದನ್ನು ತಾನು ಒಪ್ಪುವುದಿಲ್ಲ. ಸಾಹಿತ್ಯ ಪೂರ್ಣಪ್ರಮಾಣದಲ್ಲಿ ಸಮಾಜದ ಮೇಲೆ ಪ್ರಭಾವ ಬೀರುತ್ತದೆ ಎಂಬ ವಾದದಲ್ಲಿಯೂ ಹುರುಳಿಲ್ಲ. ಒಂದಿಷ್ಟು ಜನಸಮುದಾಯದ ಮೇಲೆ ಪ್ರಭಾವ ಬೀರಿ ಸಾಮಾಜಿಕ ಕಾಳಜಿಗೆ ಕಾರಣವಾಗಬಹುದು ಎಂದರು.

    ಪರಿಷತ್ ನಡೆಸುವ ಸಮ್ಮೇಳನದ ಅಧ್ಯಕ್ಷರಾಗಬೇಕೆಂಬ ಬಯಕೆ ಇತ್ತೆ ಎಂಬ ಪ್ರಶ್ನೆಗೆ, ಅಧ್ಯಕ್ಷನಾಗುವ ವಿಚಾರದಲ್ಲಿ ತನಗೆ ಆಸಕ್ತಿ ಇಲ್ಲ. ಕಳೆದ ಬಾರಿ ತನ್ನ ಹೆಸರು ಕೇಳಿ ಬಂದದ್ದು ಹೌದಾದರೂ ಅದು ಅಭಿಮಾನಿಗಳ ಅಭಿಪ್ರಾಯವಾತ್ತೇ ಹೊರತು ವೈಯಕ್ತಿಕ ಲಾಭಿ ಮಾಡಿಲ್ಲ. ಈ ವಯಸ್ಸಿನಲ್ಲಿ ದೊಡ್ಡ ನಿರೀಕ್ಷೆಗಳನ್ನಿಟ್ಟುಕೊಂಡು ಕೆಲಸ ಮಾಡಬೇಕಾದ ಅಗತ್ಯವೂ ತನಗಿಲ್ಲ ಎಂದ ಅವರು, ನುಡಿಸಿರಿಯ ಅಧ್ಯಕ್ಷತೆ ವಹಿಸಿರುವುದು ಖುಷಿ ನೀಡಿದೆ. ನುಡಿಸಿರಿಯಲ್ಲಿನ ವೈವಿಧ್ಯ, ಸಂಭ್ರಮ ಹಾಗೂ ಜನರ ಪಾಲ್ಗೊಳ್ಳುವಿಕೆ ವಿಶೇಷವಾದುದು ಎಂದರು.

    ಸಾಹಿತಿಗಳು ರಾಜಕಾರಣ, ಇನ್ಯಾವುದೋ ಸಿದ್ಧಾಂತಗಳಿಗೆ ಕಟ್ಟುಬಿಳುತ್ತಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ ಸಾಹಿತಿಗಳು ಸಮಾಜದ ಹಿತ ಕಾಯಬೇಕು. ನಮ್ಮ ಸಾಹಿತ್ಯ ಸಮಾಜದ ಬೆಳವಣಿಗೆಗೆ ಪೂರಕವಾಗಿರಬೇಕು. ಹೇಳುವುದನ್ನು ಸಹಾನುಭೂತಿಯಿಂದ ಹೇಳಿದರೆ ಎಲ್ಲರೂ ಕೇಳುತ್ತಾರೆ. ಬದಲಿಗೆ ಪೂರ್ವಾಪರವನ್ನಿಟ್ಟಕೊಂಡು ಯಾರನ್ನೋ ದೂಷಿಸುವುದು ಸರಿಯಲ್ಲ ಎಂದ ಅವರು ಮಹಾದಾಯಿ ನೀರಾವರಿ ಯೋಜನೆಯ ವಿಚಾರದಲ್ಲಿ ಸ್ಪಷ್ಟವಾದ ಜಲನೀತಿ ಅನುಷ್ಠಾನಕ್ಕೆ ಬರುವುದರೊಂದಿಗೆ ಪರಿಸರ ತಜ್ಞರು, ರಾಜಕಾರಣಿಗಳು ಹಾಗೂ ಸ್ಥಳೀಯ ಹಿತಾಸಕ್ತಿಗಳನ್ನು ಒಗ್ಗೂಡಿಸಿಕೊಂಡು ಸಮಸ್ಯೆಗೊ೦ದು ಪರಿಹಾರ ದೊರಕಿಸಿಕೊಡಬೇಕಿದೆ.

    Click here

    Click here

    Click here

    Call us

    Call us

    ಕನ್ನಡ ಸಾಹಿತ್ಯವನ್ನು ಕನ್ನಡದಲ್ಲಿಯೇ ಓದುವಾಗಿರು ಜೀವಧ್ವನಿ ಇಂಗ್ಲಿಷ್ ಭಾಷೆಗಳಿಗೆ ತರ್ಜುಮೆ ಮಾಡಿದಾಗ ಇರಲು ಸಾಧ್ಯವಿಲ್ಲ. ನಗರೀಕರಣದ ಕನ್ನಡದಿಂದಾಗಿ ನೈಜ ಕನ್ನಡವೆನ್ನುವುದು ಸತ್ತು ಹೋಗಿದೆ. ರಾಜ್ಯದ ನ್ಯಾಯಾಂಗ ವ್ಯವಸ್ಥೆಯಲ್ಲಿ ಪ್ರಮುಖವಾಗಿ ಕನ್ನಡ ಭಾಷೆಯ ಅನುಷ್ಠಾನವಾಗಬೇಕಿದೆ.

    ಸಂವಾದದಲ್ಲಿ ಡಾ. ಮೌಲ್ಯ ಜೀವನರಾಮ್, ಶ್ರೀನಿವಾಸ ಪೇಜತ್ತಾಯ ಉಪಸ್ಥಿತರಿದ್ದರು.DSC_1064

    Alvas nudisiri
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಖೋ-ಖೋ ಟೂರ್ನಮೆಂಟ್: ಆಳ್ವಾಸ್ ಅವಳಿ ವಿಭಾಗಗಳಲ್ಲಿ ಸಮಗ್ರ ಚಾಂಪಿಯನ್ಸ್

    13/12/2025

    ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್: ಆಳ್ವಾಸ್ ಮಹಿಳಾ ತಂಡಕ್ಕೆ ಸಮಗ್ರ ಪ್ರಶಸ್ತಿ

    08/12/2025

    ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    06/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.