Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಿಐಎಸ್‌ಎಫ್‌ ಯೋಧರ ಸೈಕಲ್‌ ಜಾಥಕ್ಕೆ ಕುಂದಾಪುರದಲ್ಲಿ ಭವ್ಯ ಸ್ವಾಗತ
    ಊರ್ಮನೆ ಸಮಾಚಾರ

    ಸಿಐಎಸ್‌ಎಫ್‌ ಯೋಧರ ಸೈಕಲ್‌ ಜಾಥಕ್ಕೆ ಕುಂದಾಪುರದಲ್ಲಿ ಭವ್ಯ ಸ್ವಾಗತ

    Updated:27/03/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ದೇಶದ ಭವಿಷ್ಯ ಯುವಜನರ ಕೈಯಲ್ಲಿದೆ. ಡ್ರಗ್ಸ್ ಜಾಗದ ಮೂಲಕ ಭಾರತದ ಪ್ರಗತಿಯನ್ನು ಕುಂದಿಸುವ ಯತ್ನ ನಡೆಯುತ್ತಲೆ ಇದೆ. ಡ್ರಗ್ಸ್ ದಂಧೆಯ ಹಿಂದೆ ಭಯೋತ್ಪಾದಕರ ಜಾಲವಿದೆ. ದೇಶದ ಯುವಜನರು ಡ್ರಗ್ಸ್ ವಿರುದ್ಧ ಹೋರಾಟ ನಡೆಸಬೇಕು. ಸಿಐಎಸ್ಎಫ್ ಡ್ರಗ್ಸ್ ಅರಿವು ಉದ್ದೇಶದಿಂದ ದೇಶದ ಪೂರ್ವ ಮತ್ತು ಪಶ್ಚಿಮ ಕರಾವಳಿಯಲ್ಲಿ ಏಕಕಾಲಕ್ಕೆ ಸೈಕಲ್ ಜಾಥಾ ಹಮ್ಮಿಕೊಂಡಿದೆ ಎಂದು ಸೆಂಟ್ರಲ್ ಇಂಡಸ್ಟ್ರಿಯಲ್ ಸ್ಪೆಷಲ್ ಫೋರ್ಸ್ ಗೋವಾ ವಿಭಾಗದ ಕಮಾಂಡರ್ ವಿಭು ಸಿಂಗ್ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ಮೊಗವೀರ ಭವನದಲ್ಲಿ ಸೇನಾಭಿಮಾನಿ ಬಳಗ ಕುಂದಾಪುರದಲ್ಲಿ ಹಮ್ಮಿಕೊಂಡ ಸಿಐಎಸ್‌ಎಫ್‌ ಸೈಕಲ್ ಜಾಥಾ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಸಮೃದ್ಧ ಭಾರತಕ್ಕಾಗಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ದೇಶದ ಪಶ್ಚಿಮ ಕರಾವಳಿಯ ಸುರಕ್ಷತೆಗೆ ಒತ್ತು ನೀಡಬೇಕಿದೆ. 125 ಮಂದಿ ಯೋಧರ ಸೈಕಲ್ ಜಾಥಾ ಮಾರ್ಚ್ 31 ರಂದು ಕನ್ಯಾಕುಮಾರಿ ತಲುಪಲಿದೆ ಎಂದರು.

    ಸಿಐಎಸ್‌ಎಫ್‌ ಅಸಿಸ್ಟಂಟ್ ಕಮಾಂಡರ್ ಸಾಯಿಸಿಂಗ್ ಮಾತನಾಡಿ, ದೇಶದ ಭದ್ರತೆಯಲ್ಲಿ 5 ಬಗೆಯ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ. ಅದರಲ್ಲಿ ಸಿಐಎಸ್‌ಎಫ್ ಕೂಡ ಒಂದು. ಸ್ಟೇಟ್ ಪೊಲೀಸರಂತೆ ಅತಿ ಹೆಚ್ಚು ಒತ್ತಡದಲ್ಲಿ ಕೆಲಸ ನಿರ್ವಹಿಸುತ್ತಿರುವ ವಿಭಾಗವಿದು. ದೇಶದ ಅಮೂಲ್ಯ ಕೈಗಾರಿಕಾ ಸಂಪತ್ತು ರಕ್ಷಣೆಗಾಗಿ 1969ರಲ್ಲಿ ಹುಟ್ಟಿಕೊಂಡ ರಕ್ಷಣಾ ಸಂಸ್ಥೆ ಪ್ರಸ್ತುತ 380 ಯೂನಿಟ್ ಹೊಂದಿದೆ.

    ಶಾಸಕ ಕಿರಣ್‌ ಕುಮಾರ ಕೊಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶದ ಭದ್ರತೆಯಲ್ಲಿ ಹಗಲಿರುಳು ಶ್ರಮಿಸುತ್ತಿರುವ ಸಿಐಎಸ್ಎಫ್ ಯೋಧರ ಪಡೆ ಮಾದಕದ್ರವ್ಯ ಜಾಲದ ಬಗ್ಗೆ ಅರಿವು ಮೂಡಿಸಲು ಜಾಥಾ ಹಮ್ಮಿಕೊಂಡಿರುವುದು ಪ್ರಶಂಸನೀಯ. ದೇಶದ ಐಕ್ಯತೆ, ಭದ್ರತೆಗಾಗಿ ಯುವ ಸಮುದಾಯ ಡ್ರಗ್ಸ್ ವಿರುದ್ಧ ಹೋರಾಟ ನಡೆಸುತ್ತಿರುವ ಯೋಧರ ಕೈ ಬಲಪಡಿಸಬೇಕು ಎಂದರು.

    Click here

    Click here

    Click here

    Click Here

    Call us

    Call us

    ಕುಂದಾಪುರ ಸಹಾಯಕ ಕಮಿಷನರ್ ಕೆ. ಮಹೇಶ್ಚಂದ್ರ ಶುಭ ಹಾರೈಸಿದರು. ಸಿಐಎಸ್‌ಎಫ್‌ ಅಸಿಸ್ಟೆಂಟ್ ಕಮಾಂಡರ್ ರಾಮಮೂರ್ತಿ ಕುಂದಲ್, ಡಿವೈಎಸ್ಪಿ ಎಚ್. ಡಿ. ಕುಲಕರ್ಣಿ, ಪುರಸಭೆ ಅಧ್ಯಕ್ಷ ಕೆ. ಮೋಹನದಾಸ ಶೆಣೈ, ಕುಂದಾಪುರ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ವಿನೋದ್ ಕ್ರಾಸ್ತಾ, ತಹಸೀಲ್ದಾ‌ರ್ ಪ್ರದೀಪ್ ಹುರ್ಡೇಕರ್, ಪುರಸಭೆ ಮುಖ್ಯಾಧಿಕಾರಿ ಆನಂದ, ಮೊಗವೀರ ಭವನ ಅಧ್ಯಕ್ಷ ಉದಯಕುಮಾರ ಹಟ್ಟಿಯಂಗಡಿ, ಸೇನಾಭಿಮಾನಿ ಬಳಗದ ಶಂಕರ ಅಂಕದಕಟ್ಟೆ ಮತ್ತಿತರರು ಉಪಸ್ಥಿತರಿದ್ದರು.

    ಈ ಸಂದರ್ಭ ಸಿಐಎಸ್‌ಎಫ್ ವತಿಯಿಂದ ಪರಿಸರದ ನಿವೃತ್ತ ಯೋಧರನ್ನು ಗೌರವಿಸಲಾಯಿತು. ಸೇನಾಭಿಮಾನಿ ಬಳಗದ ರಾಜೇಶ್ ಕಾವೇರಿ ಸ್ವಾಗತಿಸಿದರು. ಎನ್‌ಸಿಸಿ ನೇವಿ ವಿಂಗ್‌ ವಿದ್ಯಾರ್ಥಿನಿ ಸಿಂಧು ಕಾರ್ಯಕ್ರಮ ನಿರ್ವಹಿಸಿದರು. ಪುರಸಭೆ ವ್ಯಾಪ್ತಿಯ ನಾನಾ ಕಾಲೇಜಿನ ಎನ್‌ಸಿಸಿ ಆರ್ಮಿ, ನೇವಿ ವಿಂಗ್‌ನ ವಿದ್ಯಾರ್ಥಿಗಳು ಪಾಲ್ಗೊಂಡಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    twenty − thirteen =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.