ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಸಮಸ್ಯೆಗಳ ಬಗ್ಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರನ್ನು ಭೇಟಿಯಾಗಿ ಕುಂದಾಪುರ ಕ್ಷೇತ್ರ ವ್ಯಾಪ್ತಿಯಲ್ಲಿನ ಹೊಳೆ ಮತ್ತು ತೋಡುಗಳಲ್ಲಿ ತುಂಬಿರುವ ಹೂಳುಗಳನ್ನು ಮಳೆಗಾಲದ ಪೂರ್ವದಲ್ಲಿಯೇ ಜರೂರು ತೆರವು ಬಗ್ಗೆ ಸೂಕ್ತ ಕ್ರಮ ವಹಿಸುವಂತೆ, ಹಾಗೂ ವಾರಹಿ ಯೋಜನೆಗೆ ಭೂಸ್ವಾದೀನಗೂಂಡ ಜಾಗಗಳಿಗೆ ಪರಿಹಾರ ಒದಗಿಸುವು ಕುರಿತು ಮತ್ತು ಕುಂದಾಪುರ ಪುರಸಭೆಯಲ್ಲಿನ ಬರಗಾಲ ನಿಧಿಯ ಕಾಮಗಾರಿಯ ಮಂಜೂರಾತಿಯ ಬಗ್ಗೆ ಹಾಗೂ ಇತರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸೂಕ್ತ ಪರಿಹಾರ ಕಲ್ಪಿಸುವಂತೆ ಚರ್ಚಿಸಿದರು.










