Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಸಾಹಿತಿ ಕೆ. ಪ್ರಭಾಕರನ್ ಅವರ ಮೂರು ಅನುವಾದಿತ ಕೃತಿಗಳ ಅವಲೋಕನ
    ಊರ್ಮನೆ ಸಮಾಚಾರ

    ಕುಂದಾಪುರ: ಸಾಹಿತಿ ಕೆ. ಪ್ರಭಾಕರನ್ ಅವರ ಮೂರು ಅನುವಾದಿತ ಕೃತಿಗಳ ಅವಲೋಕನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ಸಮುದಾಯ ಸಾಂಸ್ಕೃತಿಕ ಸಂಘಟನೆ ರಿ. ಆಶ್ರಯದಲ್ಲಿ ಸಾಹಿತಿ ಕೆ. ಪ್ರಭಾಕರನ್ ಅವರು ಮಲಯಾಳಂನಿಂದ ಅನುವಾದಿಸಿದ ಮೂರು ಕೃತಿಗಳ ಅವಲೋಕನ ಕಾರ್ಯಕ್ರಮ ಇಲ್ಲಿನ ಅಂಬೇಡ್ಕರ್ ಭವನದಲ್ಲಿ  ನಡೆಯಿತು.

    Click Here

    Call us

    Click Here

    ಬರಹಗಾರ್ತಿ, ಅನುವಾದಕಿ, ನಿವೃತ್ತ ಪ್ರಾಧ್ಯಾಪಕಿ  ಡಾ. ಪಾರ್ವತಿ ಜಿ. ಐತಾಳ್ ಅವರು ಕೆ. ಪ್ರಭಾಕರನ್  ಅನುವಾದಿಸಿದ ‘ಯಮುನಾನದಿಯ ತೀರದಲ್ಲಿ ‘ ಕುರಿತು ಮಾತನಾಡಿ, ಮಲೆಯಾಳದ ಪ್ರಸಿದ್ದ ಕಥೆಗಾರ ಎಂ. ಮುಕುಂದನ್ ಅವರ ಕೃತಿಗಳ ವೈಶಿಷ್ಟ್ಯಗಳ ಕುರಿತು ಮೂಲ ಮಲೆಯಾಳದಲ್ಲಿ ಇ.ಎಂ.ಅಶ್ರಫ್ ಬರೆದ ಪುಸ್ತಕ ಇದು. ಎಂ. ಮುಕುಂದನ್ ಅವರ ಕೆಲವು ಕಾದಂಬರಿಗಳಲ್ಲಿ ಕಾಣುವ ಮಾದಕ ದ್ರವ್ಯ ವ್ಯಸನ ಮತ್ತು ಲೈಂಗಿಕ ವಿಚಾರಗಳ ಕುರಿತು ಮಲೆಯಾಳದ ಓದುಗರು ವ್ಯಕ್ತ ಪಡಿಸಿದ ಆಕ್ಷೇಪಗಳ ಹಿನ್ನೆಲೆಯಲ್ಲಿ ಆ ಕಾದಂಬರಿಗಳು ಹುಟ್ಟಿದ ಜಾಗವಾದ ದೆಹಲಿ ಮತ್ತು ಹರಿದ್ವಾರಗಳಿಗೆ ಮುಕುಂದನ್ ಜತೆಗೆ ಹೋಗಿ ತಮ್ಮ ಸಂದೇಹಗಳನ್ನು ಪರಿಹರಿಸಿಕೊಳ್ಳುವ ಸನ್ನಿವೇಶಗಳನ್ನು  ಚಿತ್ರಿಸುವಲ್ಲಿ ಈ ಕೃತಿ ಹುಟ್ಟಿಕೊಂಡಿದೆ ಎಂದರು.

    ಅಸ್ತಿತ್ವವಾದಿ ನೆಲೆಯಲ್ಲಿ ರಚಿತವಾದ ‘ದೆಹಲಿ’ ಮತ್ತು ‘ಹರಿದ್ವಾರದಲ್ಲಿ ಗಂಟೆಗಳು ಮೊಳಗುತ್ತಿವೆ’ ಎಂಬ ಎರಡು ಕಾದಂಬರಿಗಳು ಹುಟ್ಟಿಕೊಂಡ ಕಾಲ ಮತ್ತು ದೇಶಗಳಿಗೆ ಅಶ್ರಫ್ ಮತ್ತು ಮುಕುಂದನ್ ಮಾಡಿದ ಮರುಪಯಣದ ವಿವರಗಳು ಇಲ್ಲಿವೆ. ಪರಸ್ಪರ ವಿರುದ್ಧ ಸ್ವಭಾವಗಳ ದೆಹಲಿ ಎಂಬ ಮಹಾನಗರ ಮತ್ತು ನದಿ-ವನ-ಕಾಡುಗಳಿಂದ ಆವೃತವಾಗಿರುವ ಹರಿದ್ವಾರಗಳು ಬದಲಾದ ಸನ್ನಿವೇಶಗಳಲ್ಲಿ  ಮೂಲಭೂತವಾಗಿ ಬದಲಾಗದ ಮನುಷ್ಯರೊಂದಿಗೆ ಇಲ್ಲಿ ಕಾಣಸಿಗುತ್ತವೆ ಎಂದರು.

    ಡಾ. ಜಯಪ್ರಕಾಶ್ ಶೆಟ್ಟಿ ಅವರು ಮಾತನಾಡಿ, ಮತ್ತೊಂದು ಅನುವಾದ ಕೃತಿ ‘ಆಕ್ರಮಣ ಕಾಲದ ಪ್ರೇಮ ಮತ್ತು ಇತರ ಕಥೆಗಳ’ ಕುರಿತು ಹೇಳುತ್ತಾ, ವಸ್ತು ಮತ್ತು ಅನುಭವಗಳ ಬೆರಗು ಹುಟ್ಟಿಸುವ ಲೋಕದ ಜೊತೆ ಅಷ್ಟೇ ಖಚಿತವಾದ ತಾತ್ವಿಕ ಬಿತ್ತಿಯನ್ನು ಹೊಂದಿರುವ ಈ ಕಥೆಗಳಿಗೆ ಒಂದಿಷ್ಟೂ ಊನವಾಗದಂತೆ ಪ್ರಭಾಕರನ್ ನಡೆಸಿದ ಅನುವಾದದ ಅನುಸಂದಾನ ಅವುಗಳನ್ನು ಕನ್ನಡದ ಓದುಗ ಲೋಕಕ್ಕೂ ಆಪ್ತವಾಗುವಂತೆ ಮಾಡಿವೆ ಎಂದರು.

    ಉದಯ ಗಾoವ್ಕರ್ ಅವರು ‘ಸೈಬರ್ ಮೆಟ್ರಿಮೋನಿ 2025 ಮತ್ತು ಇತರ ಕಥೆಗಳು’ ಕುರಿತು ಹೇಳುತ್ತಾ ಇದು 18 ಕಥೆಗಳುಳ್ಳ ಒಂದು ಸಂಕಲನ. ಈ ಸಂಕಲನದ ಕರ್ತೃವಾದ ಸುರೇಶ್ ಅವರು ಮೂಲತ: ತಮಿಳುನಾಡಿನವರು. ಈ ಸಂಕಲನದ ಹೆಚ್ಚಿನ ಕಥೆಗಳು ಲಘು ತಮಾಷೆಯ ದಾಟಿಯಿಂದ ಬರೆಯಲ್ಪಟ್ಟಿವೆ. ನವಿರು ಹಾಸ್ಯ ಈ ಎಲ್ಲಾ ಕಥೆಗಳ ನಿರೂಪಣೆಯ ಮೂಲ ವಿಧಾನವಾದರೂ ಆ ನವಿರು ಹಾಸ್ಯದೊಳಗೆ ಗಂಭೀರವಾದ ಸವಾಲುಗಳನ್ನು ಮತ್ತು ಮನುಷ್ಯ ಲೋಕದ ಸಂಕಟಗಳನ್ನು ಆ ಎಲ್ಲ ಕಥೆಗಳು ಹೇಳುತ್ತವೆ. ಪ್ರತಿ ಕಥೆಯಲ್ಲೂ ಬಹಳ ಗಂಭೀರವಾದ ಸಮಸ್ಯೆಯನ್ನು ತಮಾಷೆಯ ಧೋರಣೆಯಲ್ಲಿ ಕಥೆಗಾರ ಶೋಧಿಸುತ್ತಾ ಹೋಗುತ್ತಾರೆ ಎಂದರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಚಿಂತಕರಾದ ಜಿ.ವಿ.ಕಾರಂತ್  ಅವರು ವಹಿಸಿದ್ದರು. ರಂಗ ನಿರ್ದೇಶಕ ಸತ್ಯನಾ ಕೊಡೇರಿ ಅವರು ವಿಶ್ವ ರಂಗಭೂಮಿ ದಿನದ ಸಂದೇಶ ವಾಚನ ಮಾಡಿದರು.

    ಸಮುದಾಯ ಕುಂದಾಪುರದಲ್ಲಿ ಆಯೋಜನೆಯಲ್ಲಿ ನಡೆದ ಈ ಕಾರ್ಯಕ್ರಮದ ವೇದಿಕೆಯಲ್ಲಿ ಕರ್ನಾಟಕ ಸಮುದಾಯದ ಪ್ರಧಾನ ಕಾರ್ಯದರ್ಶಿ ಮನೋಜ್ ವಾಮಂಜೂರು, ಕುಂದಾಪುರ ಸಮುದಾಯದ ಅಧ್ಯಕ್ಷರಾದ ಡಾ. ಸದಾನಂದ ಬೈಂದೂರು ಉಪಸ್ಥಿತರಿದ್ದು, ಪ್ರಾಸ್ತಾವಿಕ ಮಾತುಗಳ ಜೊತೆಗೆ, ಸಾಹಿತಿ ಕೆ. ಪ್ರಭಾಕರನ್ ಅವರನ್ನು ಪರಿಚಯಿಸಿದರು.

    ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರು, ಬರಹಗಾರರು, ಸಾಹಿತಿಗಳು, ಚಿಂತಕರು ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಸಮುದಾಯದ ಸಂಗಾತಿಗಳು ಉಪಸ್ಥಿತರಿದ್ದರು. ಕುಂದಾಪುರ ಸಮುದಾಯದ ಕಾರ್ಯದರ್ಶಿ ವಾಸುದೇವ ಗಂಗೇರ ಅವರು ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ಅರ್ಪಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    19 + 10 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.