ಯುಗಾದಿ ಹಬ್ಬದ ದಿನದಂದು ಏನು ಮಾಡಬೇಕು ಮತ್ತು ಏನು ಮಾಡಬಾರದು?

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಲೇಖನ.
ಹಿಂದೂಗಳಿಗೆ ಯುಗಾದಿ ಎಂದರೆ ಹೊಸ ವರ್ಷದ ಆರಂಭ. ಕರ್ನಾಟಕದ ಬಹುಭಾಗದ ಜನರು ಮತ್ತು ಆಂಧ್ರ ಪ್ರದೇಶದವರು ಚಾಂದ್ರಮಾನ ಯುಗಾದಿಯನ್ನು ಆಚರಿಸುತ್ತಾರೆ. ಈ ವರ್ಷ ಯುಗಾದಿ ಹಬ್ಬ ಮಾ. 30ರಂದು ಆಚರಿಸಲಾಗುತ್ತದೆ. ಈ ಹಬ್ಬದಂದು ಏನು ಮಾಡಿದರೆ ಒಳ್ಳೆಯದು ಎಂದು ನಮ್ಮ ಹಿರಿಯರು ವಿವರಿಸುತ್ತಾರೆ ಓದಿ

Call us

Click Here

ಯುಗಾದಿಯಂದು ಮಾಡಬೇಕಾದ ಶುಭ ಕೆಲಸಗಳು:
* ಯುಗಾದಿಯನ್ನು ಶುಭ ದಿನವೆಂದು ಪರಿಗಣಿಸಲಾಗುತ್ತದೆ, ಆದ್ದರಿಂದ ಹಿಂದಿನ ದಿನ ಮನೆಯನ್ನು ಸ್ವಚ್ಛಗೊಳಿಸಬೇಕು.
* ಯುಗಾದಿಯಂದು ಬ್ರಾಹ್ಮಿ ಮುಹೂರ್ತದಲ್ಲಿ ಏಳಬೇಕು.
* ಮನೆಯನ್ನು ಸ್ವಚ್ಛಗೊಳಿಸಿ ಮತ್ತು ದೈನಂದಿನ ಕೆಲಸಗಳನ್ನು ಪೂರ್ಣಗೊಳಿಸಿ. ನಿಮ್ಮ ಮನೆಯನ್ನು ಹೂವಿನಿಂದ ಜೊತೆಗೆ ಮಾವಿನ ಎಲೆಯ ತೋರಣದಿಂದ ಅಲಂಕರಿಸಿ.
* ನೀವು ನಿಮ್ಮ ಕೂದಲಿಗೆ ಎಳ್ಳೆಣ್ಣೆಯನ್ನು ಹಚ್ಚಿ ನಂತರ ಸ್ನಾನದ ನೀರಿಗೆ ಒಂದು ಚಿಟಿಕೆ ಅರಿಶಿನವನ್ನು ಸೇರಿಸಿ ಸ್ನಾನ ಮಾಡಿ.
* ಹೊಸ ಬಟ್ಟೆಗಳನ್ನು ಧರಿಸಬೇಕು. ನಿಮ್ಮ ಹಣೆಯ ಮೇಲೆ ಕುಂಕುಮ ಇರಲಿ.
* ಶುದ್ಧ ಮನಸ್ಸಿನಿಂದ ದೇವರನ್ನು ಪೂಜಿಸಿ.

ಯುಗಾದಿಯಂದು ಮಾಡಬಾರದ ಕೆಲಸಗಳಿವು:
ಜಗಳವಾಡುವುದು, ಹಣಕಾಸಿನ ವ್ಯವಹಾರಗಳು, ಮಾಂಸಾಹಾರ ಮತ್ತು ಮದ್ಯಪಾನ, ಕೂದಲು ಮತ್ತು ಉಗುರು ಕತ್ತರಿಸುವುದು, ಹರಿದ ಬಟ್ಟೆ ಧರಿಸುವುದು ಮುಂತಾದ ಕೆಲಸಗಳನ್ನು ಮಾಡಬಾರದು.

Leave a Reply