ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಘಟಿಕೋತ್ಸವವು ಶನಿವಾರ ನಡೆಯಿತು.
ಘಟಿಕೋತ್ಸವದ ಪ್ರಮಾಣ ಪತ್ರವನ್ನು ಬಿಡುಗಡೆಗೊಳಿಸಿದ ಮುಖ್ಯ ಅತಿಥಿ ಡಾ. ವಾಣಿಶ್ರೀ ಐತಾಳ್, ಬಿ.ಎ.ಎಮ್.ಎಸ್, ಎಂಡಿ. (ಆರ್ಯುವೇದ) ಅವರು ಮಾತನಾಡಿ, ಮಕ್ಕಳಿಗೆ ಎಳವೆಯಲ್ಲೇ ಉತ್ತಮ ಸಂಸ್ಕಾರವನ್ನು ಕಲಿಸುವುದರೊಂದಿಗೆ, ಮಕ್ಕಳ ಆಹಾರದ ಬಗ್ಗೆ ಪೋಷಕರಿಗೆ ಉತ್ತಮ ಮಾಹಿತಿಯನ್ನು ತಿಳಿಸಿದರು.
ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ರಾಮಕೃಷ್ಣ ಕಾಮತ್ ಅವರು, ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರು, ಪಿಯುಸಿ ಪ್ರಾಂಶುಪಾಲಯರಾದ ಸಂದೀಪ ಗಾಣಿಗ, ಉಪಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿ’ಸೋಜ ಅವರು ಸ್ವಾಗತಿಸಿದರು. ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿ’ಸೋಜರವರು ಮುಖ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಕೃಷ್ಣ ಅಡಿಗ ಅವರು ಧನ್ಯವಾದ ಸಮರ್ಪಣೆ ಗೈದರು.