ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ: ತಾಲೂಕಿನ ಆಜ್ರಿ ಗ್ರಾಮದ ನಿವಾಸಿ ಸುಶೀಲಾ (48) ಅವರು ಮನೆ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬೆಳಗ್ಗೆ8 ಗಂಟೆಗೆ ಮನೆಯಲ್ಲಿ ತಿಂಡಿ ತಿಂದು ಮನೆಯವರೊಂದಿಗೆ ಇದ್ದ ಅವರು ಮಧ್ಯಾಹ್ನ ಊಟ ಮುಗಿಸಿ ತಾನು ಸಂಘದಲ್ಲಿ ಸಾಲ ಮಾಡಿಕೊಂಡಿರುವುದಾಗಿ ಹೇಳಿಕೊಂಡಿದ್ದರು. ನಂತರ ನಾಪತ್ತೆಯಾಗಿದ್ದರು. ಬಳಿಕ ಹುಡುಕಾಡಿದಾಗ ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಂಘದಲ್ಲಿ ಮಾಡಿರುವ ಸಾಲ ತೀರಿಸಲಾಗಲಿಲ್ಲ ಎಂಬ ಕಾರಣಕ್ಕೆ ಮನನೊಂದು ಕೃತ್ಯ ಎಸಗಿದ್ದಾರೆ ಎಂದು ಪುತ್ರ ಪ್ರಶಾಂತ್ ದೂರು ನೀಡಿದ್ದಾರೆ.
ಈ ಬಗ್ಗೆ ಶಂಕರನಾರಾಯಣ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ