Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಪ್ಪುಂದ ತಾರಾಪತಿಯಲ್ಲಿ ಕಡಲು ಸೇರಿದ 100ಕ್ಕೂ ಅಧಿಕ ಕಡಲಾಮೆ ಮರಿಗಳು!
    ಊರ್ಮನೆ ಸಮಾಚಾರ

    ಉಪ್ಪುಂದ ತಾರಾಪತಿಯಲ್ಲಿ ಕಡಲು ಸೇರಿದ 100ಕ್ಕೂ ಅಧಿಕ ಕಡಲಾಮೆ ಮರಿಗಳು!

    Updated:03/04/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ತಾಲೂಕಿನ ಉಪ್ಪುಂದದ ತಾರಾಪತಿ ಕಡಲ ಕಿನಾರೆಯಲ್ಲಿ ಕಳೆದ 50 ದಿನಗಳಿಂದ ಕಡಲಾಮೆಗಳ ಮೊಟ್ಟೆ ಸಂರಕ್ಷಣೆ ಕಾರ್ಯ ನಡೆಯುತ್ತಿದ್ದು, ಹ್ಯಾಚರಿಯಲ್ಲಿ ಸೋಮವಾರ ಮುಂಜಾನೆಯಿಂದ ಮೊಟ್ಟೆಗಳು ಒಡೆದು 100ಕ್ಕೂ ಅಧಿಕ ಮರಿಗಳು ಹೊರಬಂದು ಕಡಲು ಸೇರಿವೆ.

    Click Here

    Call us

    Click Here

    ತಾರಾಪತಿಯಲ್ಲಿ ನಿರ್ಮಿಸಲಾದ ಎರಡು ಹ್ಯಾಚರಿಗಳ ಪೈಕಿ ಒಂದರಲ್ಲಿ ಕಳೆದ ವಾರ 85 ಮರಿಗಳು, ಉಳಿದಂತೆ ಕೊನೆಯ ಹ್ಯಾಚರಿಯಲ್ಲಿ ಸೋಮವಾರ ಮುಂಜಾನೆ 105 ಕಡಲಾಮೆ ಮರಿಗಳನ್ನು ಸುರಕ್ಷಿತವಾಗಿ ಕಡಲು ಸೇರಿದ್ದವು. ಮರವಂತೆಯಲ್ಲಿ ಒಂದು ಹ್ಯಾಚರಿಯಿಂದ 2 ವಾರಗಳ ಹಿಂದೆ 115 ಮರಿಗಳು ಸಮುದ್ರ ಸೇರಿದ್ದವು. ಒಟ್ಟು 3 ಹ್ಯಾಚರಿಗಳಿಂದ 300ಕ್ಕೂ ಅಧಿಕ ಕಡಲಾಮೆ ಮರಿಗಳು ನೈಸರ್ಗಿಕವಾಗಿ ಕಡಲು ಸೇರಲು ಅರಣ್ಯ ಇಲಾಖೆ ಅಧಿಕಾರಿಗಳು, ಸ್ಥಳೀಯ ಮೀನುಗಾರರು ಒಗ್ಗೂಡಿ ಅನುವು ಮಾಡಿಕೊಟ್ಟರು.

    ಜನವರಿ ತಿಂಗಳ ಅಂತ್ಯದಲ್ಲಿ ಮರವಂತೆ, ತಾರಾಪತಿ ಕಡಲ ತೀರದಲ್ಲಿ ಕಡಲಾಮೆಗಳು ಮೊಟ್ಟೆಗಳನ್ನಿಟ್ಟಿದ್ದವು. ಸ್ಥಳೀಯರ ಮಾಹಿತಿಯಂತೆ ಅರಣ್ಯ ಇಲಾಖೆ, ಸಂಘ-ಸಂಸ್ಥೆಗಳು ಮುತುವರ್ಜಿ ವಹಿಸಿ ಅಳಿವಿನಂಚಿನಲ್ಲಿರುವ ಕಡಲಾಮೆ ಮೊಟ್ಟೆಗಳನ್ನು ಅಲ್ಲಲ್ಲೇ ನೈಸರ್ಗಿಕವಾಗಿ ಹ್ಯಾಚರಿ ನಿರ್ಮಿಸುವ ಮೂಲಕ ಸಂರಕ್ಷಿಸಲಾಗಿತ್ತು. ಮೊದಲಿಗೆ ಮೊಟ್ಟೆಗಳ ಸಂರಕ್ಷಣೆ, ವೀಕ್ಷಣೆ ಹಾಗೂ ಅಂತಿಮ ಫಲಿತಾಂಶದ ನಿಟ್ಟಿನಲ್ಲಿ 50ಕ್ಕೂ ಅಧಿಕ ದಿನಗಳಿಂದ ಮುತುವರ್ಜಿ ವಹಿಸಿದ್ದಲ್ಲದೆ ಮರಿ ಸಮುದ್ರ ಸೇರುವವರೆಗೆ ನಿಗಾ ವಹಿಸಲಾಗಿತ್ತು.

    ಕುಂದಾಪುರ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ., ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಪೂಜಾರಿ ಮಾರ್ಗದರ್ಶನಲ್ಲಿ ಬೈಂದೂರು ವಲಯ ಅರಣ್ಯಾಧಿಕಾರಿ ಸಂದೇಶ್ ಕುಮಾರ್, ಉಪವಲಯ ಅರಣ್ಯಾಧಿಕಾರಿಗಳು, ಗಸ್ತು ಅರಣ್ಯ ಪಾಲಕರು, ಅರಣ್ಯ ವೀಕ್ಷಕರು, ಸಿಬ್ಬಂದಿಗಳು, ಕ್ಲೀನ್ ಕಿನಾರ ಸಂಸ್ಥೆಯವರು, ಸ್ಥಳೀಯರ ಸಹಕಾರ ನೀಡಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ: ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಭರವಸೆ

    18/12/2025

    ಮರವಂತೆ: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಆರನೇ ಶಾಖೆಯ ಉದ್ಘಾಟನೆ

    18/12/2025

    ಯುವ ಸಮುದಾಯ ಕೃಷಿ ಕ್ಷೇತ್ರಕ್ಕೆ ಧುಮುಕಲಿ: ಡಾ. ಕೃಷ್ಣ ಕಾಂಚನ್

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ
    • ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ: ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಭರವಸೆ
    • ಮರವಂತೆ: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಆರನೇ ಶಾಖೆಯ ಉದ್ಘಾಟನೆ
    • ಆರೋಗ್ಯ ಸೇವೆಯಲ್ಲಿ ಹೊಸ ಅಧ್ಯಾಯ: ಮೂಡುಬಿದಿರೆ ಭಾಗದ ಮೊದಲ ಹೃದಯ ಚಿಕಿತ್ಸಾ ಕೇಂದ್ರ
    • ಸಣ್ಣ ಕೈಗಾರಿಕೆಗಳು ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಕಾರ್ಯನಿರ್ವಹಿಸಬೇಕು: ಸಿ.ಇ.ಓ ಪ್ರತೀಕ್ ಬಾಯಲ್

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.