Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಲೇಖಕರು ಸೃಜನಶೀಲತೆಯನ್ನು ಒತ್ತೆ ಇಡದಿರಿ: ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ
    alvas nudisiri

    ಲೇಖಕರು ಸೃಜನಶೀಲತೆಯನ್ನು ಒತ್ತೆ ಇಡದಿರಿ: ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    ಮೂಡುಬಿದಿರೆ: ‘ಸೃಜನಶೀಲತೆಯನ್ನು ಕಳೆದುಕೊಂಡಾಗ ಅಸಹಿಷ್ಣುತೆ ಹೆಚ್ಚಾಗುತ್ತದೆ. ಸೃಜನಶೀಲತೆ ಜೀವಂತವಾಗಿದ್ದರೆ ಅಸಹಿಷ್ಣುತೆಯ ಮಾತು ಹುಟ್ಟುವುದೇ ಇಲ್ಲ’ ಎಂದು ಸಾಹಿತಿ ಹೇಳಿದರು.
    ಆಳ್ವಾಸ್ ನುಡಿಸಿರಿಯಲ್ಲಿ ಕೆ.ಎಸ್. ನರಸಿಂಹ ಸ್ವಾಮಿ ನೆನಪು ಸಂಸ್ಮರಣೆಯಲ್ಲಿ ಮಾತನಾಡಿದ ಅವರು, ‘ಒತ್ತಾಯವನ್ನು ಹೇರುವ ಕಾಲವಿದು. ಎಷ್ಟೇ ಒತ್ತಡ ಬಂದರೂ ಸೃಜನಶೀಲ ಲೇಖಕ ತನ್ನ ಅಂತರಂಗದ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಬೇಕು. ಇಂದಿನ ದಿನಗಳಲ್ಲಿ ಲೇಖಕರು ತಮ್ಮ ಸೃಜನಶೀಲತೆಯನ್ನು ಒತ್ತೆ ಇಡುತ್ತಿದ್ದಾರೆ. ಸಮಾಜದಲ್ಲಿ ಕೇಳುವವರಿದ್ದಾರೆ ಆದರೆ, ಲೇಖಕರು ಹೇಳುವ ಶಕ್ತಿಯನ್ನು ಕಳೆದುಕೊಂಡಿದ್ದಾರೆ. ಸೃಜನಶೀಲ ಶಕ್ತಿಯನ್ನು ಉಳಿಸಿಕೊಳ್ಳಬೇಕು’ ಎಂದು ಪ್ರತಿಪಾದಿಸಿದರು.
    ಕೆಎಸ್ಎನ್ ಅವರು ಕೇವಲ ಪ್ರೇಮಕವಿಯಲ್ಲ. ಬದಲಿಗೆ ಅವರು ಎಲ್ಲ ವಿಚಾರಗಳನ್ನು ಸೂಚ್ಯವಾಗಿ ಹೇಳಿದ ಕವಿ. ಆದ್ದರಿಂದ ರೈತರ ಆತ್ಮಹತ್ಯೆ, ಭಯೋತ್ಪಾದನೆ ಹೆಚ್ಚುತ್ತಿರುವ ಇಂದಿನ ಕಾಲದಲ್ಲಿ ನಾವೆಲ್ಲ ಕೆಎಸ್ಎನ್ ಅವರತ್ತ ವಾಲಬೇಕಿದೆ’ ಎಂದು ಹೇಳಿದರು.
    ಅಧಿಕಾರ ಮತ್ತು ಭೋಗ ಜನರನ್ನು ಗಾಢವಾಗಿ ಪ್ರಭಾವ ಬೀರುವ ಅಂಶಗಳು. ಅಧಿಕಾರದ ಬಗ್ಗೆ ಬೇಕಾದಷ್ಟು ಕಾವ್ಯಗಳಿವೆ. ಆದರೆ, ಭೋಗದ ಬಗ್ಗೆ ಇರುವ ಕಾವ್ಯಗಳ ಸಂಖ್ಯೆ ತುಂಬಾ ಕಡಿವೆ. ಶೃಂಗಾರ ಕಾವ್ಯವನ್ನು ಎಚ್ಚರಿಕೆಯಿಂದ ಬರೆಯಬೇಕು. ಹೆಚ್ಚು ಒತ್ತು ಕೊಟ್ಟರೆ, ಅಶ್ಲೀಲವಾಗುತ್ತದೆ. ಕಡಿಮೆ ಹೇಳಿದರೆ ಸಪ್ಪೆಯಾಗುತ್ತದೆ. ಆದರೆ, ಕೆಎಸ್ಎನ್ ಅವರು ಈ ವಿಚಾರವನ್ನು ಸೂಚ್ಯವಾಗಿ ಹೇಳಿದರು. ಅಲ್ಲದೆ, ಗಂಡು-ಹೆಣ್ಣಿನ ಸಂಬಂಧಗಳಿಗೆ ಕೆಎಸ್ಎನ್ ಅವರು ತಾತ್ವಿಕ ಚೌಕಟ್ಟನ್ನು ತಂದುಕೊಟ್ಟರು ಎಂದು ವಿಶ್ಲೇಷಿಸಿದರು.
    Alvas nudisiri
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    04/02/2026

    ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕಿ ಪವಿತ್ರ ಎ.ವಿ. ಅವರಿಗೆ ಪಿಎಚ್‌ಡಿ ಪದವಿ ಪ್ರದಾನ

    03/02/2026

    ಆಳ್ವಾಸ್‌ನ ಎನ್‌ಸಿಸಿ ಸಾಧಕರಿಗೆ ಸನ್ಮಾನ

    02/02/2026
    Leave A Reply Cancel Reply

    3 × 3 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.