ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಅಂಬೇಡ್ಕರ್ ಜೀವನ ಚರಿತ್ರೆ ತಳಹದಿ ವಿಶಿಷ್ಟವಾದದ್ದು. ಅವರ ಚಿಂತನೆಗಳು ದೇಶದ ಹಿತಕ್ಕೆ ಪೂರಕವಾಗಿದ್ದವು ಎಂದು ಕೋಟ ವಿವೇಕ ವಿದ್ಯಾಸಂಸ್ಥೆಯ ಉಪನ್ಯಾಸಕ ಸಂಜೀವ ಗುಂಡ್ಮಿ ಅಭಿಪ್ರಾಯಪಟ್ಟರು.
ಅವರು ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಇಂಡಿಕಾ ಕಲಾ ಬಳಗ ಪಡುಕರೆ ಸಹಯೋಗದೊಂದಿಗೆ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.
ಬಡವರ ಹಾಗೂ ತುಳಿತಕ್ಕೆ ಒಳಗಾದವರ ಧ್ವನಿಯಾಗಿ ಅವರ ಕಣ್ಣಿರೊರೆಸುವ ಮತ್ಕಾರ್ಯಕ್ಕೆ ಆಗಿನ ಕಾಲದಲ್ಲಿ ಸಂವಿಧಾನದ ಮೂಲಕ ನ್ಯಾಯ ನೀಡಿದ ಮಹಾನ್ ಚೇತನರಾಗಿದ್ದಾರೆ. ಅವರ ಸಂವಿಧಾನದಲ್ಲಿ ನೀಡಿದ ಮೀಸಲಾತಿ ಎಲ್ಲಾ ವರ್ಗದವರಿಗೂ ನೀಡಿದ್ದಾರೆ. ಬರೆ ಪರಿಶಿಷ್ಟ ಜಾತಿ ಪಂಗಡಕ್ಕೆ ಸೀಮಿತವಾಗಲಿಲ್ಲ, ಅವರೊಬ್ಬ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡ ವಿಶ್ವ ನಾಯಕ ಆದರೆ ನೋವಿನ ಸಂಗತಿ ಎಂದರೆ ಅವರಿಗೆ ಈ ಭರತ ಭೂಮಿಯಲ್ಲಿ ಸಂವಿಧಾನ ಶಿಲ್ಪಿ ಎಂಬ ಪಟ್ಟ ಸಿಕಿತು ವಿನಹ ಪಂಡಿತರೆಂಬ ಗೌರವ ಸಿಕ್ಕಿರಲಿಲ್ಲ ಇದೇ ಬೇಸರದ ಸಂಗತಿ ಎಂದರು.
ಜಿಲ್ಲಾ ದಲಿತ ಸಮಿತಿಯ ಮುಖಂಡ ನ್ಯಾಯವಾದಿ ಟಿ. ಮಂಜುನಾಥ ಗಿಳಿಯಾರ್ ಮಾತನಾಡಿ, ಅಂಬೇಡ್ಕರ್ ಸಿದ್ಧಾಂತ ಅವರ ಬದುಕಿನ ಅವಧಿಯಲ್ಲಿ ಉಂಡ ನೋವುಗಳನ್ನು ಮುಂದಿನ ತಲೆಮಾರು ಅನುಭವಿಸದಂತೆ ತಮ್ಮ ಸಂವಿಧಾನದ ಮೂಲಕ ನ್ಯಾಯ ಕಲ್ಪಿಸಿದ್ದಾರೆ ಆದರೆ ಅಂತಹ ಮಹಾನ್ ದಾರ್ಶನಿಕನಿಗೆ ಪ್ರತಿ ಗಲ್ಲಿ ಗಲ್ಲಿಗಳಲ್ಲಿ ಜಯಂತೋತ್ಸವ ಸಲ್ಲಿಸಬೇಕು ಅವರ ನೀಡಿದ ಸಂವಿಧಾನದಲ್ಲಿ ಪ್ರತಿಯೊಬ್ಬರು ಬದುಕು ಕಟ್ಟಿಕೊಂಡಿದ್ದಾರೆ ಇಂತಹ ಕಾರ್ಯಕ್ರಮ ಆಯೋಜಿಸಿದ ಪಂಚವರ್ಣ ಸಂಘಟನೆಗೆ ವಿಶೇಷ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚವರ್ಣದ ಅಧ್ಯಕ್ಷ ಕೆ. ಮನೋಹರ್ ಪೂಜಾರಿ ಅವರು ವಹಿಸಿದ್ದರು.
ಸಭೆಯಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಗಣ್ಯರು ಪುಷ್ಭ ನಮನಗೈಯಲಾಯಿತು.
ಈ ಸಂದರ್ಭದಲ್ಲಿ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್, ಇಂಡಿಕಾ ಕಲಾ ಬಳಗದ ಅಧ್ಯಕ್ಷ ಜಯರಾಮ ಶೆಟ್ಟಿ ಮಣೂರು ಉಪಸ್ಥಿತರಿದ್ದರು.
ಇಂಡಿಕಾ ಕಲಾ ಬಳಗದ ಪ್ರಭಾಕರ್ ಮಣೂರು ಅವರು ಪ್ರಾಸ್ತಾವಿಕ ಮಾತನಾಡಿದರು. ಪಂಚವರ್ಣದ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು. ಇಂಡಿಕಾ ಕಲಾ ಬಳಗದ ಸಂಚಾಲಕರಾದ ಸಂತೋಷ್ ಕುಮಾರ್ ಕೋಟ ನಿರೂಪಿಸಿ, ಪಂಚವರ್ಣದ ಸದಸ್ಯ ಮಹೇಶ್ ಬೆಳಗಾವಿ ಸ್ವಾಗತಿಸಿದರು.