ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ವಾರ್ಷಿಕೋತ್ಸವ – 2025 ಆಚರಿಸಲಾಯಿತು.
ವಿ.ಟಿ.ಯು ಎಕ್ಸ್ ಟೆಂಷನ್ ಸೆಂಟರ್ ಮಂಗಳೂರು ಇಲ್ಲಿನ ವಿಶೇಷ ಅಧಿಕಾರಿಗಳಾದ ಡಾ. ಎನ್. ದಾಮೋದರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ಉದ್ಯೋಗವಕಾಶಗಳನ್ನು ಪಡೆಯುವ ವಿವಿಧ ಹಾದಿಗಳ ಬಗ್ಗೆ ತಿಳಿಸಿದರು.
ಐ. ಎಂ. ಜೆ ಇನ್ಸ್ಟಿಟ್ಯೂಷನ್ ಬ್ರಾಂಡ್ ಬಿಲ್ಡಿಂಗ್ ಡೈರೆಕ್ಟರ್ ಡಾ. ರಾಮಕೃಷ್ಣ ಹೆಗಡೆ ಮಾತನಾಡಿ, ಆರ್ಟಿಫಿಷಿಯಲ್ ಇಂಟಲಿಜಸನ್ ಉಪಯೋಗ ಹೆಚ್ಚುತಿರುವುದರಿಂದ ವಿದ್ಯಾರ್ಥಿಗಳು ಆ ಕಡೆಗೂ ಗಮನಹರಿಸಬೇಕು ಎಂದರು.
ಎಂ. ಐ.ಟಿ ಪ್ರಾಂಶುಪಾಲರಾದ ಡಾ. ಅಬ್ದುಲ್ ಕರೀಂ ಅವರು ವರದಿ ವಾಚನಗೈದರು. ಕಾಲೇಜಿನ ಉಪಾಪ್ರಾಂಶುಪಾಲಾರದ ಡಾ. ಮೆಲ್ವಿನ್. ಡಿ ಸೋಜ ಅವರು ಕಲಿಕೆಯಲ್ಲಿ ಉತ್ತಮ ಸಾಧನೆಗೈದವರ ಪಟ್ಟಿಯನ್ನು ಓದಿದರು.
ಕಾರ್ಯಕ್ರಮದ ಸಂಚಾಲಕರಾದ ಎಂ.ಬಿ.ಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರ ಪೂಜಾರಿ ಸ್ವಾಗತಿಸಿದರು. ಎಂ.ಬಿ.ಎ ವಿದ್ಯಾರ್ಥಿನಿ ಸಹರಾ ಕಾರ್ಯಕ್ರಮ ನಿರ್ವಹಿಸಿದರು. ಎಂ.ಬಿ.ಎ ವಿದ್ಯಾರ್ಥಿನಿ ಶಾಂಭವಿ ವಂದಿಸಿದರು.















