Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲೆಯ ಪ್ರತಿಯೊಂದು ಜಾನುವಾರುಗಳಿಗೂ ಕಾಲುಬಾಯಿ ಲಸಿಕೆಗಳನ್ನು ಹಾಕಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಜಿಲ್ಲೆಯ ಪ್ರತಿಯೊಂದು ಜಾನುವಾರುಗಳಿಗೂ ಕಾಲುಬಾಯಿ ಲಸಿಕೆಗಳನ್ನು ಹಾಕಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಏಳನೇ ಸುತ್ತಿನ ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮವನ್ನು ಏಪ್ರಿಲ್ 26 ರಿಂದ ಜೂನ್ 4 ರ ವರೆಗೆ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಪ್ರತಿಶತಃ ನೂರರಷ್ಟು ಗುರಿ ಸಾಧನೆಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಾನುವಾರು ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆ ಹಾಗೂ ಪಶು ಸಂಜೀವಿನಿ ವಾಹನಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಜಾನುವಾರುಗಳಲ್ಲಿ ಕಂಡು ಬರುವ ಕಾಲುಬಾಯಿ ರೋಗವು ವೈರಾಣುವಿನಿಂದ ಬರುವ ಅಂಟು ರೋಗವಾಗಿದ್ದು, ಗೊರಸು ಕಾಲುಗಳನ್ನು ಹೊಂದಿರುವ ಎಲ್ಲಾ ಪ್ರಾಣಿಗಳಲ್ಲಿ ಈ ರೋಗವು ಕಂಡುಬರುತ್ತದೆ. ರೈತರಿಗೆ ಆರ್ಥಿಕ ಸಂಕಷ್ಟ ಉಂಟುಮಾಡುವ ಈ ರೋಗವನ್ನು ನಿಯಂತ್ರಿಸಲು ಲಸಿಕೆ ನೀಡುವುದೊಂದೇ ಪರಿಹಾರವಾಗಿದ್ದು, ಪ್ರತೀ ಆರು ತಿಂಗಳಿಗೊಮ್ಮೆ ಲಸಿಕೆ ಹಾಕಿಸುವುದರೊಂದಿಗೆ ರೈತರು ತಮ್ಮ ಜಾನುವಾರುಗಳನ್ನು ಈ ರೋಗದಿಂದ ರಕ್ಷಿಸಿಕೊಳ್ಳಬೇಕು ಎಂದರು.

    ಕಾಲುಬಾಯಿ ಲಸಿಕಾ ಕಾರ್ಯಕ್ರಮದಲ್ಲಿ ಜಾನುವಾರುಗಳಿಕೆ ಲಸಿಕೆ ಹಾಕಿಸುವುದರೊಂದಿಗೆ, ಯಾವುದೇ ಜಾನುವಾರುಗಳು ಲಸಿಕೆಯಿಂದ ಬಿಟ್ಟುಹೋಗದಂತೆ ನೋಡಿಕೊಳ್ಳಬೇಕು ಎಂದ ಅವರು, ಈಗಾಗಲೇ ಜಿಲ್ಲೆಗೆ ಅಗತ್ಯವಿರುವ ಲಸಿಕೆ ಹಾಗೂ ಇನ್ನಿತರ ಸಾಮಾಗ್ರಿಗಳನ್ನು ದಾಸ್ತಾನು ಇಟ್ಟುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

    ಪ್ರಸಕ್ತ ಸಾಲಿನಲ್ಲಿ ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ಕಾಲುಬಾಯಿ ರೋಗದ ಲಸಿಕಾ ಕಾರ್ಯಕ್ರಮದೊಂದಿಗೆ ಚರ್ಮಗಂಟು ರೋಗ ಲಸಿಕೆಯನ್ನು ಸಹ ಜಾನುವಾರುಗಳಿಗೆ ನೀಡಲಾಗುತ್ತಿದ್ದು, ಈ ಎರಡೂ ಲಸಿಕೆಗಳನ್ನು ಜಾನುವಾರುಗಳಿಗೆ ಹಾಕಿಸುವುದರ ಮೂಲಕ ಜಾನುವಾರುಗಳ ಉತ್ಪನ್ನ ಹೆಚ್ಚಿಸಲು ಅಗತ್ಯ ಕ್ರಮ ವಹಿಸಬೇಕು ಎಂದರು.

    Click here

    Click here

    Click here

    Call us

    Call us

    ಪಶುವೈದ್ಯರು, ಸಿಬ್ಬಂದಿ, ಕೆ.ಎಂ.ಎಫ್ ಸಿಬ್ಬಂದಿ ಹಾಗೂ ತರಬೇತಿ ಹೊಂದಿರುವ ಪಶುಸಖಿಯರ ಮೂಲಕ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಇವರುಗಳು ಮನೆ ಭೇಟಿ ನೀಡಿದ ಸಂದರ್ಭದಲ್ಲಿ ರೈತರುಗಳು ಅಗತ್ಯ ಸಹಕಾರ ನೀಡುವಂತೆ ತಿಳಿಸಿದ ಅವರು, ಹೆಚ್ಚಿನ ಸಂಖ್ಯೆಯ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಬೇಕು ಎಂದರು.

    ಕಳೆದ ಆರನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮದಲ್ಲಿ ಜಿಲ್ಲೆಯ 2,08,558 ಜಾನುವಾರುಗಳ ಗುರಿ ನಿಗಧಿಪಡಿಸಿ, 2,00,888 ಜಾನುವಾರುಗಳಿಗೆ ಲಸಿಕೆ ಹಾಕಿಸಿ, ಶೇ. 96 ರಷ್ಟು ಪ್ರಗತಿ ಸಾಧಿಸಿದ್ದು, ಏಳನೇ ಸುತ್ತಿನಲ್ಲಿಯೂ ಸಹ ಹೆಚ್ಚಿನ ಸಂಖ್ಯೆಯ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಅವುಗಳ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದರು.

    ಜಿಲ್ಲೆಯ ಕಾಪು, ಉಡುಪಿ, ಬೈಂದೂರು, ಹೆಬ್ರಿ, ಕುಂದಾಪುರ, ಕಾರ್ಕಳ ಹಾಗೂ ಬ್ರಹ್ಮಾವರ ತಾಲೂಕು ಮತ್ತು ಉಡುಪಿ ಪಾಲಿಕ್ಲಿನಿಕ್ ನಲ್ಲಿ ತಲಾ ಒಂದರಂತೆ ಒಟ್ಟು 8 ಪಶು ಸಂಜೀವಿನಿ ಆಂಬುಲೆನ್ಸ್ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತೀ ಚಿಕಿತ್ಸಾ ಘಟಕದ ವಾಹನದಲ್ಲಿ ಪಶುವೈದ್ಯರು, ಪಶುವೈದ್ಯ ಸಹಾಯಕ ಹಾಗೂ ವಾಹನ ಚಾಲಕರು ನೇಮಕಗೊಂಡಿದ್ದು, 2024-25 ನೇ ಸಾಲಿನಲ್ಲಿ ಈ ವಾಹನಗಳ ಮೂಲಕ ಒಟ್ಟು 7,488 ಜಾನುವಾರುಗಳಿಗೆ ಚಿಕಿತ್ಸೆ ನೀಡಲಾಗಿರುತ್ತದೆ ಎಂದರು.

    ಸಭೆಯಲ್ಲಿ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಂ.ಸಿ ರೆಡ್ಡಪ್ಪ, ಮುಖ್ಯ ಪಶು ವೈದ್ಯಾಧಿಕಾರಿ ಡಾ.ಸಂದೀಪ್, ತಾಲೂಕುಗಳ ಆಡಳಿತ ಮುಖ್ಯ ಪಶುವೈದ್ಯಾಧಿಕಾರಿಗಳು, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    three + sixteen =

    Call us

    Click Here

    Call us

    Call us

    Call us
    Highest Viewed Recently
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ
    • ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.