Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬದುಕಿನ ಸವಾಲುಗಳು ಯಶಸ್ವಿಗೆ ದಾರಿದೀವಿಗೆ: ಸುರೇಂದ್ರ ಶೆಟ್ಟಿ
    ಊರ್ಮನೆ ಸಮಾಚಾರ

    ಬದುಕಿನ ಸವಾಲುಗಳು ಯಶಸ್ವಿಗೆ ದಾರಿದೀವಿಗೆ: ಸುರೇಂದ್ರ ಶೆಟ್ಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಈ ಪರಿಸರದ ಎಲ್ಲಾ ಮಕ್ಕಳಿಗೂ ಉಪಯೋಗವಾಗುವಂತೆ ಬೇಸಿಗೆ ಶಿಬಿರ ಆಯೋಜಿಸಿರುವುದು ಅಭಿನಂದನೀಯ. ಸಾವಿರಕ್ಕೂ ಹೆಚ್ಚು ಮಕ್ಕಳನ್ನು ಒಂದೆಡೆ ಸೇರಿಸಿ ಬೇಸಿಗೆ ಶಿಬಿರವನ್ನು ಆಯೋಜಿಸಿ ಚಟುವಟಿಕೆಗಳನ್ನು ನಡೆಸುವುದು ನಿಜಕ್ಕೂ ಒಂದು ಸವಾಲಿನ ಸಂಗತಿ ಎಂದು ಕೊಲ್ಲೂರು ದೇವಾಲಯದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸುರೇಂದ್ರ ಶೆಟ್ಟಿ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ವತಿಯಿಂದ ಯಡಾಡಿ- ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ್ ಪಿ.ಯು.ಕಾಲೇಜಿನ ವಿದ್ಯಾರಣ್ಯ  ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಮಂಥನ ಬೇಸಿಗೆ ಶಿಬಿರ ಮೂರನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಸಮಾಜಮುಖಿ ಚಿಂತನೆಯ ಸದುದ್ದೇಶದಿಂದ ಬೇಸಿಗೆ  ಶಿಬಿರವನ್ನು ಈ ಸಂಸ್ಥೆಯು ಆಯೋಜಿಸಿರುವುದು ಇತರರಿಗೆ ಮಾದರಿ. ಜೀವನದಲ್ಲಿ ಎದುರಾಗುವ ಸಾಕಷ್ಟು ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಮುನ್ನೆಡೆದಾಗ ನಮ್ಮ ಬದುಕಿನಲ್ಲಿ ಯಶಸ್ಸು ಕಾಣಲು ಸಾಧ್ಯ. ಮಕ್ಕಳು ಈ ಶಿಬಿರದಲ್ಲಿ ಕಲಿಸುವ ಎಲ್ಲಾ ಚಟುವಟಿಕೆಗಳನ್ನು ,ವಿಚಾರಗಳನ್ನು ತಿಳಿದು ಜೀವನದಲ್ಲಿ ಅಳವಡಿಸಿಕೊಂಡು ಸವಾಲುಗಳನ್ನು ಎದುರಿಸುವ ಗುಣವನ್ನು ಕಲಿಯಬೇಕು. ಆ ಮೂಲಕ ಯಶಸ್ಸು ಕಂಡು ತನ್ನ ಗುರಿ ಉದ್ದೇಶಗಳನ್ನು ಸಾಧಿಸಲು ಸಾಧ್ಯವಾಗುತ್ತದೆ ಎಂದರು.

    ಶ್ರೀ ಕ್ಷೇತ್ರ ಗುಡ್ಡಟ್ಟು ದೇವಳದ ಅನುವಂಶಿಕ ಆಡಳಿತ ಧರ್ಮದರ್ಶಿಗಳಾಗಿರುವ ಅನಂತ ಪದ್ಮನಾಭ ಅಡಿಗ ಮಾತನಾಡಿ, “ನಮ್ಮ ಗ್ರಾಮೀಣ ಪ್ರದೇಶದಲ್ಲಿ ಇಂತಹ ಉತ್ತಮ ಗುಣಮಟ್ಟದ ಬೇಸಿಗೆ ಶಿಬಿರಗಳು ನಡೆಯುತ್ತಿರುವುದು ನಿಜಕ್ಕೂ ಶ್ಲಾಘನೀಯ. ಮಕ್ಕಳ ಬದುಕಿನುದ್ದಕ್ಕೂ ಉಪಯುಕ್ತವಾಗುವ ಹಲವಾರು ವೈವಿಧ್ಯಮಯ ಚಟುವಟಿಕೆಗಳನ್ನು ಒಳಗೊಂಡ ಈ ಬೇಸಿಗೆ ಶಿಬಿರವು ಬಹಳ ವಿಶೇಷವಾದುದಾಗಿದೆ. ಮಕ್ಕಳು ಈ ಬೇಸಿಗೆ ಶಿಬಿರದಲ್ಲಿ ಉತ್ತಮ ಮೌಲ್ಯಗಳನ್ನು, ತತ್ವಗಳನ್ನು ವಿಚಾರಗಳನ್ನು ಕಲಿತು ಬದುಕಿನುದ್ದಕ್ಕೂ ಅಳವಡಿಸಿಕೊಂಡು ತಂದೆ ತಾಯಿ, ಗುರುಗಳ ಕೀರ್ತಿ, ಗೌರವ ಹೆಚ್ಚಿಸಿ  ನಮ್ಮ ದೇಶದ ಉತ್ತಮ ಪ್ರಜೆಗಳಾಗಿ ಬಾಳುವಂತಾಗಬೇಕು” ಎಂದರು.

    ಕಾರ್ಯಕ್ರಮದಲ್ಲಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾಗಿರುವ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಮುಖ್ಯೋಪಾಧ್ಯಾಯರಾದ ಪ್ರದೀಪ್ ಕೆ. ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಈ ದಿನದ ವಿಶೇಷತೆ:
    ಕೃಷಿ ಸಿರಿ ಪ್ರಶಸ್ತಿ ಪುರಸ್ಕೃತ ಸಂಪನ್ಮೂಲ ವ್ಯಕ್ತಿಗಳಾದ ರಘುರಾಮ ಕುಲಾಲ್ ಮತ್ತು ಕಾರ್ತಿಕ್ ಕುಲಾಲ್ ಅವರಿಂದ ಮಣ್ಣಿನ ಕಲಾಕೃತಿ ತಯಾರಿಕೆ ತರಬೇತಿ, ಸೃಜನಶೀಲ ಚಿತ್ರ ಕಲಾವಿದ ರಾಜೇಶ್ ಹಳ್ಳಿಹೊಳೆ ಅವರಿಂದ ಚಿತ್ರಕಲಾ ತರಬೇತಿ,ಮರಳು ಕಲಾಕೃತಿ ರಚನೆ ತರಬೇತಿಯು ಹೆಸರಾಂತ ಕಲಾವಿದರಿಂದ ನಡೆಯಿತು. ಮಕ್ಕಳು ಬಹಳ ಉತ್ಸುಕತೆಯಿಂದ ಮೂರನೇ ದಿನದ ಶಿಬಿರದಲ್ಲಿ ಪಾಲ್ಗೊಂಡರು.

    Like this:

    Like Loading...

    Related

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ

    06/12/2025

    ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ

    06/12/2025

    ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d