ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಕೋಟದ ಜನತಾ ಸಂಸ್ಥೆಯ ಅವರಣದಲ್ಲಿ ಸಂಸ್ಥೆಯ ಸಿಬ್ಬಂದಿಗಳಿಗಾಗಿ ಉದ್ಯೋಗಿ ಸುರಕ್ಷತಾ ಉಪಕರಣಗಳ ವಿತರಣಾ ಸಂಸ್ಥೆಯಿಂದ ಸುರಕ್ಷತಾ ಪರಿಕರಗಳ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರವನ್ನು ಇತ್ತೀಚಿಗೆ ಆಯೋಜಿಸಿತು.
ಕಾರ್ಯಕ್ರಮವನ್ನು ಸಂಸ್ಥೆಯ ಮುಖ್ಯಸ್ಥರಾದ ಆನಂದ ಸಿ. ಕುಂದರ್ ಉದ್ಘಾಟಿಸಿ ಮಾತನಾಡಿ, ಕಾರ್ಖಾನೆಗಳ ಸುರಕ್ಷಿತ ವಾತಾವರಣವೆ ಕಾರ್ಮಿಕನಿಗೆ ಶ್ರೀರಕ್ಷೆ ಹಾಗಾಗಿ ಎಲ್ಲರು ಒಂದಾಗಿ ಸುರಕ್ಷಿತ ವಾತಾವರಣವನ್ನು ಕಾರ್ಖಾನೆಯ ಒಳಗೆ ನಿರ್ಮಿಸಲು ಪಣ ತೋಡೋಣ ಎಂದರು.
ಕಾರ್ಯಕ್ರಮದಲ್ಲಿ ಕಾರ್ಖಾನೆಯ ನಿರ್ದೇಶಕರಾದ ರಕ್ಷಿತ್ ಕುಂದರ್, ಎ.ಜಿ.ಎಮ್ ಶ್ರೀನಿವಾಸ್ ಕುಂದರ್, ವ್ಯವಸ್ಥಾಪಕ ಮಿಥುನ್ ಕುಮಾರ್, ಸುರಕ್ಷಾತಧಿಕಾರಿ ಕಾರ್ತಿಕ ಆಚಾರ್ಯ ಉಪಸ್ಥಿತರಿದ್ದರು.