ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಾಜ್ಯ ಸರಕಾರದ ಪಂಚಗ್ಯಾರಂಟಿ ಯೋಜನೆಯಡಿ ಮಾರ್ಚ್ ತಿಂಗಳಿನಲ್ಲಿ ತಾಲೂಕಿನ ಪೂರ್ಣ ಅನುದಾನ ಬಿಡುಗಡೆಗೊಂಡಿದ್ದು, ಗೃಹಲಕ್ಷ್ಮೀ ಯೋಜನೆಗೆ 15.61 ಕೋಟಿ, ಗೃಹಜ್ಯೋತಿ ಯೋಜನೆಗೆ 4.08 ಕೋಟಿ, ಅನ್ನಭಾಗ್ಯ ಯೋಜನೆಗೆ 4.19 ಕೋಟಿ, ಶಕ್ತಿ ಯೋಜನೆಗೆ 2.51 ಕೋಟಿ ಬಿಡುಗಡೆಯಾಗಿದೆ. ಯುವ ನಿಧಿ ಯೋಜನೆಗೆ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳನ್ನು ನೊಂದಾಯಿಸಿಕೊಳ್ಳಲಾಗುತ್ತಿದೆ ಎಂದು ಕುಂದಾಪುರ ತಾಲೂಕು ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಹೇಳಿದರು.
ಅವರು ಬುಧವಾರ ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜರುಗಿದ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಕುಂದಾಪುರ ತಾಲೂಕಿಗೆ ಈತನಕ ಗ್ಯಾರೆಂಟಿ ಯೋಜನೆಯಡಿ 334 ಕೋಟಿ ಹಣ ಬಿಡುಗಡೆಯಾಗಿದೆ ಎಂದರು.


ಕುಂಭಾಶಿಯ ಕೊರಗ ಕುಟುಂಬಗಳ ವಿದ್ಯುತ್ ಸಮಸ್ಯೆ, ನೂತನ ವಿದ್ಯುತ್ ಸಂಪರ್ಕಕ್ಕಾಗಿ ನಿರಾಪೇಕ್ಷಣ ಪತ್ರ ಪಡೆಯುವ ಬಗ್ಗೆ, ಓಡಾಟದಲ್ಲಿದ್ದ ಕೆಎಸ್ಆರ್ಟಿಸಿ ಬಸ್ಸುಗಳನ್ನು ಕೆಲವು ಭಾಗಗಳಲ್ಲಿ ನಿಲ್ಲಿಸಲಾಗಿರುವ ಬಗ್ಗೆ, ಪದವಿ ಪೂರ್ಣಗೊಳಿಸುವ ವಿದ್ಯಾರ್ಥಿಗಳನ್ನು ಯುವನಿಧಿ ಯೋಜನೆಯಡಿ ನೊಂದಾಯಿಸುವ ವಿಚಾರ ಸೇರಿದಂತೆ ಗ್ಯಾರೆಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಸಂಬಂಧ ಚರ್ಚೆ ನಡೆಯಿತು.
ಸಮಿತಿಯ ಪದನಿಮಿತ್ತ ಕಾರ್ಯದರ್ಶಿ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಡಾ.ರವಿಕುಮಾರ್ ಹುಕ್ಕೇರಿ, ಸಮಿತಿಯ ಸದಸ್ಯರಾದ ಅರುಣ್ ಹಕ್ಕಾಡಿ, ಚಂದ್ರ ಕಾಂಚನ್, ನಾರಾಯಣ ಆಚಾರ್ ಕೋಣಿ, ಮಂಜು ಕೊಠಾರಿ, ವಿ.ಗಣೇಶ್, ಅಭಿಜಿತ್ ಪೂಜಾರಿ, ವಾಣಿ ಆರ್.ಶೆಟ್ಟಿ, ಆಶಾ ಕರ್ವಾಲೋ, ಜಹಿತ್ ಅಹಮ್ಮದ್ ಗಂಗೊಳ್ಳಿ, ಸವಿತಾ ಪೂಜಾರಿ ಉಪಸ್ಥಿತರಿದ್ದರು.
ಇದನ್ನೂ ಓದಿ
► ಪಂಚಗ್ಯಾರಂಟಿ ಯೋಜನೆಯಡಿ ಮಾರ್ಚ್ನಲ್ಲಿ ಕುಂದಾಪುರ ತಾಲೂಕಿಗೆ 26.40 ಕೋಟಿ ಅನುದಾನ ಬಿಡುಗಡೆ: ಹರಿಪ್ರಸಾದ್ ಶೆಟ್ಟಿ – https://kundapraa.com/?p=84585 .