Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ: ಬೆಂಗಳೂರಿನ ಯಕ್ಷದೇಗುಲ ತಂಡದ ರಾವಣ ವಧೆ ಪ್ರಸಂಗ ಪ್ರದರ್ಶನ
    ಊರ್ಮನೆ ಸಮಾಚಾರ

    ಕೋಟ: ಬೆಂಗಳೂರಿನ ಯಕ್ಷದೇಗುಲ ತಂಡದ ರಾವಣ ವಧೆ ಪ್ರಸಂಗ ಪ್ರದರ್ಶನ

    Updated:02/05/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಯಕ್ಷಗಾನ ನಮ್ಮ ನಾಡಿನ ಹೆಮ್ಮೆಯ ಕಲೆ ದಿವ್ಯ ಕಲೆ ರಂಗದಲ್ಲಿ ಪಾತ್ರ ನಿರ್ವಹಣೆ ಮಾಡಲು ಅವಿರತ ಶ್ರಮ ಅಗತ್ಯ. ಕಲಾವಿದರಿಗೆ ಅಭಿಮಾನಿಗಳ ಪ್ರೋತ್ಸಾಹವೇ ಶ್ರೀ ರಕ್ಷೆ. ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶದ ಜೊತೆಗೆ ಇಂತಹ ಪುರಸ್ಕಾರಗಳು ಈ ಕ್ಷೇತ್ರದಲ್ಲಿ ಇನ್ನಷ್ಟು ಸೇವೆ ಮಾಡುವ ಜವಾಬ್ದಾರಿಯನ್ನು ಹೆಚ್ಚಿಸುತ್ತವೆ ಎಂದು ಹಿರಿಯ ಯಕ್ಷಗಾನ ಕಲಾವಿದ ಬಳ್ಕೂರು ಕೃಷ್ಣ ಯಾಜಿ ಹೇಳಿದರು.

    Click Here

    Call us

    Click Here

    ಅವರು ಕೋಟ ಹಂದೆ ಶ್ರೀ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಳದ ಶ್ರೀ ಮನ್ಮಮಹಾರಥೋತ್ಸವದ ಅಂಗವಾಗಿ ಹಮ್ಮಿಕೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಬೆಂಗಳೂರಿನ ಯಕ್ಷದೇಗುಲ ತಂಡದ ರಾವಣ ವಧೆ ಪ್ರಸಂಗ ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ವಿಶೇಷ ಪುರಸ್ಕಾರ ಸ್ವೀಕರಿಸಿ ಮಾತನಾಡಿದರು.

    ಉದ್ಘಾಟನೆ ನೆರವೇರಿಸಿದ ಸಾಲಿಗ್ರಾಮ ಗುರು ನರಸಿಂಹ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಕೆ. ಎಸ್. ಕಾರಂತ ಮಾತನಾಡಿ, ದೇವಾಲಯಗಳು ಸಮಾಜದ ಆತ್ಮ ಇದ್ದಂತೆ. ಆಧ್ಯಾತ್ಮಿಕ ಶ್ರದ್ಧೆಯನ್ನು ಹೆಚ್ಚಿಸುವುದರೊಂದಿಗೆ ಸಾಮರಸ್ಯವನ್ನು ಬೆಸೆಯುವ ಕೆಲಸ ಮಾಡಬೇಕು. ದೇವಳದ ಅಭಿವೃದ್ಧಿಗೆ ಸಹಾಯ ಮಾಡಿದವರನ್ನು ಹಾಗೂ ಸ್ಥಳೀಯ ಸಾಧಕರನ್ನು ಗುರುತಿಸಿ ಪುರಸ್ಕರಿಸುವುದು ಶ್ಲಾಘನೀಯ ಎಂದರು.

    ಕಲಾ ಸಂಘಟಕ ಜನಾರ್ದನ ಹಂದೆ ಮಾತನಾಡಿ, ದೇವಾಲಯಗಳು ಕಲಾಪ್ರಕಾರಗಳಿಗೆ ವೇದಿಕೆಯನ್ನು ಕಲ್ಪಿಸುವ ಕೆಲಸ ಮಾಡಬೇಕು ಆಗ ಮಾತ್ರ ನಮ್ಮ ಹೆಮ್ಮೆಯ ಕಲೆ ಸಾಹಿತ್ಯ ಸಂಸ್ಕ್ರತಿಯ ಉಳಿವು ಸಾದ್ಯ ಎಂದರು. ಇದೇ ಸಂದರ್ಭದಲ್ಲಿ ದಾನಿಗಳಾದ ಜಯಲಕ್ಷ್ಮಿ ಮತ್ತು ಜಗದೀಶ್ ಹಾಗೂ ಉದಯ ಹಂದೆ ಬೆಂಗಳೂರು ಅವರನ್ನು ಸನ್ಮಾನಿಸಲಾಯಿತು.

    ಸೂರ್ಯ ನಾರಾಯಣ ಹಂದೆ ಪ್ರಾಯೋಜಿತ ನಗದು ಪುರಸ್ಕಾರವನ್ನು ಯಕ್ಷಗಾನದ ಎರಡನೆ ವೇಷಧಾರಿಗಳಾದ ಬಳ್ಕೂರು ಕೃಷ್ಣ ಯಾಜಿ, ಥಂಡೀಮನೆ ಶ್ರೀಪಾದ ಭಟ್, ಪ್ರಸನ್ನ ಶೆಟ್ಟಿಗಾರ್ ಅವರಿಗೆ ನೀಡಲಾಯಿತು.

    Click here

    Click here

    Click here

    Call us

    Call us

    ನವೀನ ಸೋಮಯಾಜಿ ಪ್ರಾಯೋಜಿತ ದಿ. ನರಸಿಂಹ ಸೋಮಯಾಜಿ ಪ್ರಶಸ್ತಿಯನ್ನು ಕಲಾವಿದ ಉದಯ ಹೆಗಡೆ ಕಡಬಾಳ ಅವರಿಗೆ ನೀಡಲಾಯಿತು.

    ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹೆಚ್ ಸುಜಯೀಂದ್ರ ಹಂದೆ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ತಾರಾನಾಥ, ಹೊಳ್ಳ ಪಿ. ಹೆಚ್. ಡಿ. ಪದವೀಧರ ಶಮಂತಕುಮಾರ್ ಕೆ. ಎಸ್. ಇವರನ್ನು ಗೌರವಿಸಲಾಯಿತು. ಬಾಲ್ ಸಾಧಕರಾದ ದೀರಜ್ ಐತಾಳ್ ಪ್ರಜ್ಞಾ ಹಂದಟ್ಟು ಅನುಶ್ರೀ ಅವರನ್ನು ಅಭಿನಂದಿಸಲಾಯಿತು. 

    ದೇವಸ್ಥಾನದ ಆನುವಂಶಿಕ ಮೊಕ್ತೇಸರರಾದ ಅಮರ ಹಂದೆ ಅಧ್ಯಕ್ಷತೆ ವಹಿಸಿದ್ದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಜಾರಾಮ ಹಂದೆ ವಿನಾಯಕ ವಿವಿದ್ಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ವೆಂಕಟರಮಣ ಸೋಮಯಾಜಿ ಯಕ್ಷದೇಗುಲ ಸಂಚಾಲಕ ಸುದರ್ಶನ ಉರಾಳ, ಕಟ್ಟೆ ಗೆಳೆಯರು ಹಂದಟ್ಟು ಇದರ ಅಧ್ಯಕ್ಷರಾದ ಸುರೇಶ್ ಪೂಜಾರಿ ಉಪಸ್ಥಿತರಿದ್ದರು.

    ಶಿಕ್ಷಕಿ ಆಶಾಕಿರಣ ಸನ್ಮಾನ ಪತ್ರ ವಾಚಿಸಿದರು. ಆಡಳಿತ ಮಂಡಳಿಯ ಸದಸ್ಯ ಆನಂದ ರಾಮ ಉರಾಳ ಸ್ವಾಗತಿಸಿ ಉಪನ್ಯಾಸಕ ರಾಘವೇಂದ್ರ ತುಂಗ ನಿರೂಪಿಸಿದರು. ನಾಗೇಂದ್ರ ಐತಾಳ್ ವಂದಿಸಿದರು. ಮಂಜುನಾಥ ಉರಾಳ ಸಹಕರಿಸಿದರು.

    ಬಳಿಕ ಬೆಂಗಳೂರಿನ ಯಕ್ಷ ದೇಗುಲದ ಮೋಹನ್ ಹೊಳ್ಳ ನಿರ್ದೇಶನದ ಸುದರ್ಶನ ಉರಾಳ ಸಂಯೋಜನೆಯ ಲಂಬೋದರ ಹೆಗಡೆ, ರಾಘವೇಂದ್ರ ಹೆಗಡೆ, ಶಿವಾನಂದ ಕೋಟ, ಸಂದೀಪ್ ಉರಾಳ, ಥಂಡಿಮನೆ ಶ್ರೀಪಾದ ಭಟ್, ಸುಜಯೀಂದ್ರ ಹಂದೆ, ಆದಿತ್ಯ ಭಟ್, ಮನೋಜ್ ಭಟ್, ನರಸಿಂಹ ತುಂಗ, ರಾಘವೇಂದ್ರ ತುಂಗ ಕೆ,ರಾಜು ಪೂಜಾರಿ, ನಾಗರಾಜ ಪೂಜಾರಿ ಇವರನ್ನೊಳಗೊಂಡ “ರಾವಣ ವಧೆ “ಪ್ರಸಂಗ ಸುಂದರವಾಗಿ ಮೂಡಿ ಬಂತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.