ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ತಮ್ಮನ್ನು ಸೀಮಿತಗೊಳಿಸಿಕೊಳ್ಳದೆ ಪಠ್ಯೇತರ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ಮಾತ್ರ ಸರ್ವಾಂಗೀಣ ಅಭಿವೃದ್ಧಿಯನ್ನು ಕಾಣುವುದಕ್ಕೆ ಸಾಧ್ಯ, ಈ ಹಿನ್ನಲೆಯಲ್ಲಿ ಕಾಲೇಜು ನಿಮಗೆ ಒದಗಿಸುವ ಈ ವೇದಿಕೆಯನ್ನು ಸೂಕ್ಷ್ಮವಾಗಿ ಬಳಸಿಕೊಳ್ಳಬೇಕು ಎಂದು ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕ ಶಿವಪ್ರಸಾದ್ ಶೆಟ್ಟಿಗಾರ್ ಹೇಳಿದರು.
ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ದಿನಾಚರಣೆ “ಸಂಭ್ರಮ”ವನ್ನು ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ತೀರ್ಪುಗಾರರಾಗಿ ಆಗಮಿಸಿದ ವಡ್ಡರ್ಸೆಯ ಸರಕಾರಿ ಪ್ರೌಢ ಶಾಲಾ ಶಿಕ್ಷಕರಾದ ಆನಂದ ಶೆಟ್ಟಿ ಹಾಗೂ ಶಂಕರನಾರಾಯಣ ಮದರ್ ತೆರೇಸಾ ಪದವಿ ಪೂರ್ವ ಕಾಲೇಜಿನ ಉಪ-ಪ್ರಾಂಶುಪಾಲರಾದ ಗೀತಾ, ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು.
ಆಡಳಿತ ನಿಕಾಯಕರಾದ ರಕ್ಷಿತ್ ರಾವ್ ಗುಜ್ಜಾಡಿ ಸ್ವಾಗತಿಸಿ, ವಾಣಿಜ್ಯ ಉಪನ್ಯಾಸಕ ಸುಧೀರ್ ಕುಮಾರ್ ಅತಿಥಿಗಳನ್ನು ಪರಿಚಯಿಸಿ, ಆಂಗ್ಲ ಭಾಷಾ ಉಪನ್ಯಾಸಕಿ ಸ್ವಾತಿ ಜಿ. ರಾವ್ ನಿರೂಪಿಸಿ, ಐಕ್ಯೂಎಸಿ ಸಂಯೋಜಕಿ ದೀಪಿಕಾ ಜಿ. ವಂದಿಸಿದರು.