ಬೈಂದೂರು,ನ27: ಇಲ್ಲಿಗೆ ಸಮೀಪದ ಶಿರೂರು ಗ್ರಾಮ ಪಂಚಾಯತ್ ಎದುರಿನ ರಾಷ್ಟ್ರೀಯ ಹೆದಾರಿ 66ರಲ್ಲಿ ಬ್ಯೆಕ್ಗಳೆರಡು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬ್ಯೆಕ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಇಂದು ರಾತ್ರಿ ವರದಿಯಾಗಿದೆ.
ಸಿಗಂದೂರು ಮೇಳದಲ್ಲಿ ವೇಷಧಾರಿಯಾಗಿರುವ ಸುದೀಪ್ ಭಟ್ಕಳಕ್ಕೆ ಯಕ್ಷಗಾನಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಇನ್ನೊರ್ವ ವ್ಯಕ್ತಿ ಭಟ್ಕಳದ ವೆಂಕಟಾಪುರದ ನಿವಾಸಿ ವೆಂಕಟಪ್ಪ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬ್ಯೆಂದೂರು ವೃತ್ತ ನಿರೀಕ್ಷಕ ಸುದರ್ಶನ್, ಬ್ಯೆಂದೂರು ಠಾಣಾಧಿಕಾರಿ ಸಂತೋಷ ಕಾಯ್ಕಿಣಿ ಘಟನಾ ಸ್ಥಳಕ್ಕಾಗಮಿಸಿದ್ದರು. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.