Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಾವುಂದ ಸಬ್‌ ಸ್ಟೇಷನ್‌ ತಾಂತ್ರಿಕ ದೋಷ ವಿದ್ಯುತ್‌ ಕಡಿತಕ್ಕೆ ಕಾರಣ. ಶೀಘ್ರ ನಿವಾರಣೆಗೆ ಕ್ರಮ. ಗ್ಯಾರಂಟಿ ಸಭೆಯಲ್ಲಿ ಸ್ಪಷ್ಟನೆ
    ಊರ್ಮನೆ ಸಮಾಚಾರ

    ನಾವುಂದ ಸಬ್‌ ಸ್ಟೇಷನ್‌ ತಾಂತ್ರಿಕ ದೋಷ ವಿದ್ಯುತ್‌ ಕಡಿತಕ್ಕೆ ಕಾರಣ. ಶೀಘ್ರ ನಿವಾರಣೆಗೆ ಕ್ರಮ. ಗ್ಯಾರಂಟಿ ಸಭೆಯಲ್ಲಿ ಸ್ಪಷ್ಟನೆ

    Updated:03/05/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು: ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಗ್ಯಾರಂಟಿ ಅನುಷ್ಠಾನ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

    Click Here

    Call us

    Click Here

    ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯುತ್ ಲೋಡ್ ಶೆಡ್ಡಿಂಗ್ ಆಗುತ್ತಿರುವ ಬಗ್ಗೆ  ಮೆಸ್ಕಾಂ ಉಪಕೇಂದ್ರದಲ್ಲಿ ತಲೆದೂರಿದ ತಾಂತ್ರಿಕ ಸಮಸ್ಯೆಯನ್ನು ತಿಳಿಯಪಡಿಸುವ ಕೆಲಸ ಮಾಡಬೇಕು. ಜನರಿಗೆ ತೊಂದರೆಯಾಗದಂತೆ ನಿರ್ದಿಷ್ಟ ಸಮಯದ ಮಿತಿಯಲ್ಲಿ ಅಧಿಕಾರಿಗಳೂ ಪರಿಹಾರ ಕಂಡಕೊಳ್ಳಲು ಮುಂದಾಗಬೇಕು. ಸರಕಾರದ ಬಗ್ಗೆ ಇದರಿಂದ ತಪ್ಪು ಅಭಿಪ್ರಾಯ ಬರುವಂತೆ ಮಾಡಬೇಡಿ. ಜೊತೆಗೆ ಜನಪ್ರತಿನಿಧಿಗಳು ವಾಸ್ತವ ಅರಿಯದೇ ಹೇಳಿಕೆ ನೀಡುವುದು ಸರಿಯಲ್ಲ ಎಂದರು.

    ಈ ಬಗ್ಗೆ ಸಭೆಯಲ್ಲಿದ್ದ ಬೈಂದೂರು ಮೆಸ್ಕಾಂ ಉಪಕೇಂದ್ರದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಹರೀಶ್ ಅವರು ಸ್ಪಷ್ಟನೆ ನೀಡಿ, ಬೈಂದೂರು ಹಾಗೂ ಕೊಲ್ಲೂರು ಮೆಸ್ಕಾಂ ಉಪಕೇಂದ್ರಗಳಿಗೆ ವಿದ್ಯುತ್‌ ಸರಬರಾಜು ಮಾಡುವ ನಾವುಂದದ 110 ಕೆ.ವಿ. ವಿದ್ಯುತ್ ಸಬ್‌ಸ್ಟೇಷನ್‌ನಲ್ಲಿನ 20ಎಂವಿಎ ಟ್ರಾನ್ಸಫಾರ್ಮರಿನಲ್ಲಿ ವಾರದ ಹಿಂದೆ ತಾಂತ್ರಿಕದೋಷ ಕಂಡುಬಂದ ಕಾರಣ ಕುಂದಾಪುರ ಸಬ್‌ಸ್ಟೇಷನ್‌ನಿಂದ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಹೆಚ್ಚುವರಿ ಲೋಡ್‌ನಿಂದಾಗಿ ಟ್ರಿಪ್‌ ಆಗುತ್ತಿದ್ದು, ಬೈಂದೂರು ಹಾಗೂ ಕೊಲ್ಲೂರು ಭಾಗಗಳಲ್ಲಿ ಕೆಲವು ದಿನಗಳಿಂದ ವಿದ್ಯುತ್‌ನಲ್ಲಿ ವ್ಯತ್ಯಯವಾಗುತ್ತಿದೆ. ಈಗಾಗಲೇ ಟ್ರಾನ್ಸಫಾರ್ಮರ್ ದುರಸ್ತಿ ಕಾರ್ಯ ಪ್ರಗತಿಯಲ್ಲಿದ್ದು, ಒಂದೆರೆಡು ದಿನಗಳಲ್ಲಿ ಸಹಜ ಸ್ಥಿತಿಗೆ ಮರಳುವ ಸಾಧ್ಯತೆಯಿದೆ ಹೇಳಿದರು.

    ಬೈಂದೂರಿನಲ್ಲಿ ನಿರ್ಮಾಣ ಹಂತದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಹುತೇಕ ಪೂರ್ಣಗೊಂಡಿದ್ದು, ಇನ್ನುಳಿದ ಕಾಮಗಾರಿ ಪೂರ್ಣಗೊಳಿಸಿ ಅದರ ಉದ್ಘಾಟನೆಗೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು ಗ್ರಾಮೀಣ ಭಾಗಗಳಿಗೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿದರು.

    ಬೈಂದೂರು ತಾಲೂಕಿನಲ್ಲಿ ಪಂಚ ಗ್ಯಾರೆಂಟಿಗೆ 182.43 ಕೋಟಿ ರೂ. ವೆಚ್ಚ:
    ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಬೈಂದೂರು ತಾಲೂಕಿಗೆ ಇದುವರೆಗೆ ಸುಮಾರು 182.43 ಕೋಟಿ ರೂ. ವೆಚ್ಚಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಯಿಂದ ಜನವರಿವರೆಗೆ 96.61ಕೋಟಿ ಜಮಾ ಆಗಿದೆ. 48 ಫಲಾನುಭವಿಗಳಿಗೆ ಆಧಾರ್ ಬ್ಯಾಂಕಿಂಗ್ ಮ್ಯಾಪಿಂಣ್ ಬಾಕಿ, ತಾಂತ್ರಿಕ ಕಾರಣದಿಂದಾಗಿ 479 ಹಾಗೂ 71 ಹೊಸ ನೋಂದಾವಣೆ ಸೇರಿದಂತೆ ಒಟ್ಟು 616 ಫಲಾನುಭವಿಗಳಿಗೆ ಬಾಕಿಯಿದೆ.

    Click here

    Click here

    Click here

    Click Here

    Call us

    Call us

    ಗೃಹ ಜ್ಯೋತಿ ಯೋಜನೆಯಿಂದ ಬೈಂದೂರು ಮೆಸ್ಕಾಂ ಉಪಕೇಂದ್ರ ವ್ಯಾಪ್ತಿಯ 27,942ಕುಟುಂಬಗಳಿಗೆ 34.54 ಕೋಟಿ ರೂ., ತಲ್ಲೂರು ಮೆಸ್ಕಾಂ ಉಪ ಕೇಂದ್ರ ವ್ಯಾಪ್ತಿಯ 1935ಕುಟುಂಬಗಳಿಗೆ 2.23 ಕೋಟಿ ರೂ. ಸೇರಿದಂತೆ ಸುಮಾರು 36.78ಕೋಟಿ ರೂ. ವೆಚ್ಚವಾಗಿದೆ. ಅನ್ನಭಾಗ್ಯ ಯೋಜನೆಯಡಿ 25,182 ಪಡಿತರ ಚೀಟಿಗಳಿಗೆ 1,89,26,610 ರೂ. ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ. ಯುವ ನಿಯೋಜನೆಯಡಿ 340 ಫಲಾನುಭವಿಗಳಿಗೆ 59.34ಲಕ್ಷ ರೂ. ಜಮಾ ಆಗಿದೆ. ಶಕ್ತಿ ಯೋಜನೆಯಡಿ ಇದುವರೆಗೆ 1.36ಕೋಟಿ ಮಹಿಳೆಯರು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸಿದ್ದು 48.44ಕೋಟಿ ರೂ. ರಿಯಾಯಿತಿ ಪಡೆದಿದ್ದಾರೆ ಎಂದರು.

    ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಕಾರಿ ಡಾ. ರವಿಕುಮಾರ್ ಹುಕ್ಕೇರಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾದ ಮಾಲತಿ ಶಿವಾನಂದ, ರಾಮ ಪೂಜಾರಿ, ಅನೀಶ್ ಪೂಜಾರಿ, ರಾಘವೇಂದ್ರ ಬಿಲ್ಲವ, ಗುಲಾಬಿ, ಸೂರ್ಯಕಾಂತಿ ಡಿ, ಗಣೇಶ ಗಾಣಿಗ, ಅಣ್ಣಪ್ಪ ಶೆಟ್ಟಿ, ದೇವದಾಸ್ ವಿ.ಜೆ., ಬಾಬು ದೇವಾಡಿಗ, ರಾಮಚಂದ್ರ ಖಾರ್ವಿ, ಮುಕ್ರಿ ಮೊಹಮ್ಮದ್ ಅಲ್ತಾಫ್, ಮೆಸ್ಕಾಂ, ಕೆಎಸ್‌ಆರ್‌ಟಿಸಿ, ಮಹಿಳಾ ಮತ್ತು ಮಕ್ಕಳ ಶಿಶು ಅಭಿವೃದ್ಧಿ ಇಲಾಖೆ, ಆಹಾರ ಇಲಾಖೆ ಹಾಗೂ ಯುವ ಸಬಲೀಕರಣ ಇಲಾಖೆಯ ಅಕಾರಿಗಳು ಉಪಸ್ಥಿತರಿದ್ದರು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    4 × two =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.