ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ನಾಗೂರಿನ ಗೋವಿಂದ ರಾವ್ ಅವರ ಜಿಎನ್ ಕಾಂಪ್ಲೆಕ್ಸ್ನ ಹೊರ ಭಾಗದಲ್ಲಿ ಇರಿಸಿದ್ದ ಮಾರುತಿ ಸಿಫ್ಟ್ ಕಾರನ್ನು ಕಳವುಗೈದಿದ್ದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಬೈಂದೂರು ಪೋಲೀಸರು ಯಶಸ್ವಿಯಾಗಿದ್ದಾರೆ. ಆರೋಪಿ ಪೌಜಾನ್ ಅಹ್ಮದ್ ಎಂಬುವರನ್ನು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಲಾಗಿದೆ.
ನಾಗೂರಿನ ಗೋವಿಂದ ರಾವ್ ಅವರ ಜಿಎನ್ ಕಾಂಪ್ಲೆಕ್ಸ್ನ ಹೊರ ಭಾಗದಲ್ಲಿ ಇರಿಸಿದ್ದ ಅಂದಾಜು ಮೌಲ್ಯ 8 ಲಕ್ಷದ ಮಾರುತಿ ಸಿಫ್ಟ್ ಕಾರನ್ನು ಮೇ.1ರಂದು ಬೆಳಗಿನ ಜಾವ 4.30 ಗಂಟೆಗೆ ಕಳವುಗೈಯಲಾಗಿತ್ತು. ಈ ಬಗ್ಗೆ ಕಾರು ಮಾಲಕ ಗಣೇಶ್ ಆಚಾರ್ಯ ಅವರು ನೀಡಿರುವ ದೂರಿನ ಮೇರೆಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಕಾರು ಪತ್ತೆಗಾಗಿ ರಚಿಸಲಾಗಿದ್ದ ವಿಶೇಷ ತಂಡ ವಿಶೇಷ ತಂಡವು ಮೇ.2ರಂದು ಆರೋಪಿ ಪೌಜಾನ್ ಅಹ್ಮದ್ ಸಮೇತ ಕಾರನ್ನು ಪತ್ತೆ ಮಾಡಿ ಕಾರನ್ನು ಸ್ವಾದೀನಪಡಿಸಿಕೊಂಡಿರುತ್ತಾರೆ. ಹಾಗೂ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ.ರಕ್ಷಕ್ ನೆಟ್ವರ್ಕ್ ಅಂಡ್ ಸೆಕ್ಯೂರಿಟಿ ಸಲ್ಯೂಷನ್ ಅವರು ಕಾರ್ಯಾಚರಣೆಯಲ್ಲಿ ಸಹಕರಿಸಿರುತ್ತಾರೆ.
ಈ ಪ್ರಕರಣದ ಪತ್ತೆಗಾಗಿ ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಹೆಚ್.ಡಿ. ಕುಲಕರ್ಣಿ ರವರ ಮಾರ್ಗದರ್ಶನದಲ್ಲಿ, ಪೊಲೀಸ್ ಬೈಂದೂರು ವೃತ್ತ ನಿರೀಕ್ಷಕ ಸವೀತೃತೇಜ ಅವರ ನೇತೃತ್ವದಲ್ಲಿ, ಬೈಂದೂರು ಠಾಣೆಯ ಪಿ.ಎಸ್.ಐ ತಿಮ್ಮೇಶ್ ಬಿ.ಎನ್ ಮತ್ತು ನವೀನ ಪಿ. ಬೋರಕರ ಹಾಗೂ ಬೈಂದೂರು ಠಾಣೆಯ ಸಿಬ್ಬಂದಿ ಅವರಾದ ಚಿದಾನಂದ, ಮಾಳಪ್ಪ, ವೃತ್ತ ನಿರೀಕ್ಷಕರ ಕಛೇರಿಯ ಸಿಬ್ಬಂದಿ ಅವರಾದ ರವೀಂದ್ರ ವಿಶೇಷ ತಂಡವನ್ನು ರಚಿಸಲಾಗಿತ್ತು.